AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಟ-ಮಂತ್ರ ಎಂದು ಜನರಿಗೆ ಮೋಸ ಮಾಡುತ್ತಿದ್ದ ಡೋಂಗಿ ಬಾಬಾನಿಗೆ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ

ದೇವರ ಪವಾಡವೆಂದು ಜನ್ರ ಮೈಂಡ್ ವಾಶ್ ಮಾಡಿ ಜನರಿಗೆ ಮಂಕುಬೂದಿ ಎರಚಿದ್ದ. ಡೋಂಗಿ ಬಾಬಾನ ಅಸಲಿ ಮುಖವಾಡ ಗೊತ್ತಾಗುತ್ತಿದ್ದಂತೆ ನಂಬಿ ಮೋಸ ಹೋದ ಜನ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಮಾಟ-ಮಂತ್ರ ಎಂದು ಜನರಿಗೆ ಮೋಸ ಮಾಡುತ್ತಿದ್ದ ಡೋಂಗಿ ಬಾಬಾನಿಗೆ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ
ಡೋಂಗಿ ಬಾಬಾನಿಗೆ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ
TV9 Web
| Edited By: |

Updated on:Jul 12, 2021 | 1:40 PM

Share

ಗದಗ: ಕಷ್ಟಪಟ್ಟು ಮೈ ಬಗ್ಗಿಸಿ ದುಡಿಯದೇ ಆರಾಮಾಗಿ ಹಣ ಮಾಡಲು ಮುಂದಾಗಿದ್ದ, ಜನರನ್ನು ನಂಬಿಸಿ ಹಣ ಮಾಡುತ್ತಿದ್ದ ಡೋಂಗಿ ಬಾಬಾನಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗದಗ ನಗರದ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಡೋಂಗಿ ಬಾಬಾ ಅಲಿಯಾಸ್ ಆಸೀಫ್ ಜಾಗಿರದಾರ್ ಎಂಬುವ ವ್ಯಕ್ತಿ ಜನರನ್ನು ನಂಬಿಸಿ ಮೋಸ ಮಾಡುತ್ತಿದ್ದ. ಸದ್ಯ ಈತನ ಕೃತ್ಯ ಬಯಲಾಗಿದ್ದು ಸ್ಥಳೀಯರು ಡೋಂಗಿ ಬಾಬಾನಿಗೆ ತಕ್ಕ ಪಾಠ ಕಲಿಸಿದ್ದಾರೆ.

ಮೂಲತಃ ವಿಜಯಪುರ ಜಿಲ್ಲೆಯವನಾಗಿದ್ದ ಡೋಂಗಿ ಬಾಬಾ ಅನೇಕ ದಿನಗಳಿಂದ ದೇವರ ಹೆಸರಲ್ಲಿ ಮಾಟ, ಮಂತ್ರ ಮಾಡುತ್ತ ಹಣ ಮಾಡುತ್ತಿದ್ದ. ಕುದಿಯೋ ಎಣ್ಣೆ ಹಾಗೂ ಸುಡುವ ತುಪ್ಪದಲ್ಲಿ ಕೈ ಹಾಕುವುದು. ಅದರಿಂದ ಬೋಂಡ, ಬಜ್ಜಿ ತೆಗೆಯುವುದು. ಏಕಾಏಕಿ ಮೈಮೇಲೆ ದೇವರು ಬಂದಂತೆ ನಟಿಸಿ ಜನರನ್ನ ನಂಬಿಸಿ. ನಿಂಬೆಹಣ್ಣು, ಬೂದಿ ಕೊಟ್ಟು ಜನರಿಗೆ ಮೋಸ ಮಾಡುತ್ತಿದ್ದ. ದೇವರ ಪವಾಡವೆಂದು ಜನ್ರ ಮೈಂಡ್ ವಾಶ್ ಮಾಡಿ ಜನರಿಗೆ ಮಂಕುಬೂದಿ ಎರಚಿದ್ದ. ಡೋಂಗಿ ಬಾಬಾನ ಅಸಲಿ ಮುಖವಾಡ ಗೊತ್ತಾಗುತ್ತಿದ್ದಂತೆ ನಂಬಿ ಮೋಸ ಹೋದ ಜನ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಮುಖ ಮೂತಿ ನೋಡದೇ ಮನಸೋ ಇಚ್ಛೆ ಚಚ್ಚಿದ್ದಾರೆ. ಬಳಿಕ ಪೊಲಿಸರಿಗೆ ಒಪ್ಪಿಸಿದ್ದಾರೆ. ಸ್ಥಳೀಯರಿಂದ ಏಟು ತಿಂದ ಬಳಿಕ ಡೋಂಗಿ ಬಾಬಾ ನಾನು ಮಾಡಿದ್ದು ಮೋಸ.. ತಪ್ಪಾಗಿದೆ ಕ್ಷಮಿಸಿ ನನ್ನನ್ನು ಬಿಟ್ಟುಬಿಡಿ ಎಂದು ಕೈ ಕಾಲು ಹಿಡಿದು ಬೇಡಿಕೊಂಡಿದ್ದಾನೆ. ಆದ್ರೆ ಇವನ ಮಾತಿಗೆ ಮರಳಾಗದ ಜನ ಆತನಿಗೆ ತಕ್ಕ ಶಿಕ್ಷೆ ಸಿಗುವಂತೆ ಮಾಡಿದ್ದಾರೆ. ಅದರಲ್ಲೂ ಓರ್ವ ಮಹಿಳೆ ಬಾಬಾನಿಗೆ ಮನಸ್ಸೋ ಇಚ್ಚೇ ಗೂಸ ಕೊಟ್ಟಿದ್ದಾಳೆ. ಇದೀಗ ಆರೋಪಿ ಬಾಬಾನನ್ನು ಸ್ಥಳೀಯರು ಗದಗ ಗ್ರಾಮೀಣ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಎಸ್​​ಐ ಹುದ್ದೆ ಕೊಡಿಸುವುದಾಗಿ 1 ಕೋಟಿ ರೂಪಾಯಿ ವಂಚಿಸಿದ್ದ ವ್ಯಕ್ತಿ ಪೊಲೀಸರ ವಶಕ್ಕೆ; ಕೆಪಿಎಸ್​ಸಿ ಹೆಸರಿನಲ್ಲಿ ಮೋಸ

(people beat dhongi baba and surrenders to police in gadag)

Published On - 12:44 pm, Mon, 12 July 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ