AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಆರೋಗ್ಯಾಧಿಕಾರಿ ಸಾವು, ಕಣ್ಣ ಮುಂದೆ ಪ್ರಾಣ ಹೋಗುತ್ತಿದ್ದರೂ ಸಹಾಯಕ್ಕೆ ಮುಂದಾಗದ ಶಾಸಕ ಡಿ.ಎಸ್ ಸುರೇಶ್

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿತ್ತು. ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ನಡೆದಿತ್ತು. ಘಟನೆಯಲ್ಲಿ ಕೊರೊನಾ ಡ್ಯೂಟಿ ಮುಗಿಸಿ‌ ಬರುತ್ತಿದ್ದ ಹಿರಿಯ ಆರೋಗ್ಯಾಧಿಕಾರಿಗೆ ಅಪಘಾತವಾಗಿದ್ದು ಅವರು ರಕ್ತದ ಮಡುವಿನಲ್ಲಿ ಒದ್ದಾಟ ನಡೆಸುತ್ತಿದ್ದರು.

ಅಪಘಾತದಲ್ಲಿ ಆರೋಗ್ಯಾಧಿಕಾರಿ ಸಾವು, ಕಣ್ಣ ಮುಂದೆ ಪ್ರಾಣ ಹೋಗುತ್ತಿದ್ದರೂ ಸಹಾಯಕ್ಕೆ ಮುಂದಾಗದ ಶಾಸಕ ಡಿ.ಎಸ್ ಸುರೇಶ್
ರಕ್ತದ ಮಡುವಿನಲ್ಲಿ ಆರೋಗ್ಯಾಧಿಕಾರಿ ಒದ್ದಾಡುತ್ತಿದ್ದರೂ ಕಾರಿನಲ್ಲಿ ಕುಳಿತಿರುವ ಶಾಸಕ
ಆಯೇಷಾ ಬಾನು
ಆಯೇಷಾ ಬಾನು|

Updated on:May 27, 2021 | 12:36 PM

Share

ಚಿಕ್ಕಮಗಳೂರು: ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿದ್ರೂ ಸಹಾಯ ಮಾಡದೆ ಶಾಸಕ ಡಿ.ಎಸ್ ಸುರೇಶ್ ಅಮಾನವೀಯವಾಗಿ ವರ್ತಿಸಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿತ್ತು. ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ನಡೆದಿತ್ತು. ಘಟನೆಯಲ್ಲಿ ಕೊರೊನಾ ಡ್ಯೂಟಿ ಮುಗಿಸಿ‌ ಬರುತ್ತಿದ್ದ ಹಿರಿಯ ಆರೋಗ್ಯಾಧಿಕಾರಿಗೆ ಅಪಘಾತವಾಗಿದ್ದು ಅವರು ರಕ್ತದ ಮಡುವಿನಲ್ಲಿ ಒದ್ದಾಟ ನಡೆಸುತ್ತಿದ್ದರು. ಅರ್ಧಗಂಟೆಗೂ ಹೆಚ್ಚು ಕಾಲ ಸ್ಥಳದಲ್ಲೇ ಒದ್ದಾಡಿದ್ದಾರೆ. ಆದರೆ ಈ ವೇಳೆ ನೋವಿನಿಂದ ಹಿರಿಯ ಆರೋಗ್ಯಾಧಿಕಾರಿ ಬಳಲುತ್ತಿದ್ದರು ತರೀಕೆರೆ ಶಾಸಕ‌ ಡಿ.ಎಸ್ ಸುರೇಶ್ ಕಾರಿನಿಂದ ಕೆಳಗಿಳಿಯದೇ ಸುಮ್ಮನಾಗಿದ್ದಾರೆ.

ಆರೋಗ್ಯಾಧಿಕಾರಿಯ ಜೀವ ರಕ್ಷಿಸುವ ಕೆಲಸ ಮಾಡಿಲ್ಲ. ಅಮಾನವೀಯವಾಗಿ ವರ್ತಿಸಿದ್ದಾರೆ. ಶಾಸಕ‌ ಸುರೇಶ್ರ ಈ ನಡೆಗೆ ಸ್ಥಳದಲ್ಲಿಯೇ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊನೆಗೆ ಆ್ಯಂಬುಲೆನ್ಸ್‌ನಲ್ಲಿ ವೈದ್ಯನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯದಲ್ಲಿಯೇ ವೈದ್ಯ ಡಾ.ರಮೇಶ್ ಕುಮಾರ್ ಸಾವನ್ನಪ್ಪಿದ್ದರು. ಕಣ್ಣ ಮುಂದೆ ಪ್ರಾಣ ಹೋಗ್ತಿದ್ರೂ ಮಾನವೀಯತೆ ತೋರದ ಶಾಸಕನ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ನಾನು ನಿದ್ದೆಗೆ ಜಾರಿದ್ದೆ -ಶಾಸಕ ಸ್ಪಷ್ಟನೆ ಇನ್ನು ಅಪಘಾತದಲ್ಲಿ ಗಾಯಗೊಂಡು ನರಳಾಡಿ ವೈದ್ಯ ಸಾವು ಘಟನೆಯ ಬಗ್ಗೆ ಬಿಜೆಪಿ ಶಾಸಕ ಡಿ.ಎಸ್.ಸುರೇಶ್ ಸ್ಪಷ್ಟನೆ ನೀಡಿದ್ದಾರೆ. ನನಗೆ ಕಣ್ಣಿನ ನೋವು ಇದ್ದ ಹಿನ್ನೆಲೆಯಲ್ಲಿ ಕಾರಿನಿಂದ ಇಳಿಯಲಿಲ್ಲ. ನಾನು ನಿದ್ದೆಗೆ ಜಾರಿದ್ದೆ, ನನ್ನ ಕಾರು ಚಾಲಕ ನೆರವಿಗೆ ಹೋಗಿದ್ದ. ಕೆಲವೇ ನಿಮಿಷಗಳಲ್ಲಿ ವೈದ್ಯರನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಇದೇ ವೇಳೆ ಕೆಲ ಕಿಡಿಗೇಡಿಗಳು ವಿಡಿಯೋ ಮಾಡಿದ್ದಾರೆ. ನಾನು ಸಹಾಯಕ್ಕೆ ಹೋಗಿಲ್ಲ ಎಂಬಂತೆ ಬಿಂಬಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಘಟನೆಯ ಬಗ್ಗೆ ವಿಡಿಯೋ ಮೂಲಕ ಶಾಸಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Akshay Kumar: ಅಕ್ಷಯ್​ ಕುಮಾರ್​ ಕಡೆಯಿಂದ ದೊರಕಿತು ಮತ್ತೊಂದು ದೊಡ್ಡ ಸಹಾಯ

Published On - 7:31 am, Thu, 27 May 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು