AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸಿದ ಸೇತುವೆ: ಗ್ರಾಮಸ್ಥರು ಜೀವ ಕೈಯಲ್ಲಿ ಹಿಡಿದು, ಸಾವನ್ನು ದಾಟಿ ಹೋಗಬೇಕು!

ದಾವಣಗೆರೆ: ಜನರು ತಮ್ಮ ಊರಿಂದ ಪಕ್ಕದ ಊರಿಗೆ ಅಥವಾ ಹೊಲ ಗದ್ದೆಗೆ ಹೋಗಲು ಅವಲಂಬಿಸಿದ್ದ ಸೇತುವೆಗಳು ಹಾಳಾಗಿವೆ. ಯಾರದ್ದೋ ನಿರ್ಲಕ್ಷ್ಯಕ್ಕೆ ಯಮನಂತೆ ಕಾದು ಕುಳಿತ ಸೇತುವೆಯ ಮೇಲೆ ಜನರು ಜೀವದ ಹಂಗು ತೊರೆದು ಮುಂದೆ ಸಾಗುವಂತಾಗಿದೆ. ದಾವಣಗೆರೆ ತಾಲೂಕಿನ ಅಣಬೇರು, ಶಂಕರನಹಳ್ಳಿ, ಬಾಡಾ, ಮಾಯಕೊಂಡ ಹೀಗೆ ಹತ್ತಾರು ಹಳ್ಳಿಯ ಜನ್ರಿಗೆ ಆಸರೆಯಾಗಿದ್ದ ಸೇತುವೆ ಹಾಳಾಗಿ ಎರಡು ವರ್ಷಗಳೇ ಕಳೆದಿವೆ. ಹಲವು ವರ್ಷಗಳ ಹಿಂದೆ ನಿರ್ಮಿಸಿದ್ದ ಭದ್ರಾ ಕಾಲುವೆಗೆ ಅಡ್ಡಲಾಗಿದ್ದ ಸೇತುವೆ ಮುರಿದು ಬಿದ್ದಿದೆ. ಆರು ಗ್ರಾಮಗಳ ಜನ […]

ಕುಸಿದ ಸೇತುವೆ: ಗ್ರಾಮಸ್ಥರು ಜೀವ ಕೈಯಲ್ಲಿ ಹಿಡಿದು, ಸಾವನ್ನು ದಾಟಿ ಹೋಗಬೇಕು!
ಸಾಧು ಶ್ರೀನಾಥ್​
|

Updated on:Nov 27, 2019 | 4:11 PM

Share

ದಾವಣಗೆರೆ: ಜನರು ತಮ್ಮ ಊರಿಂದ ಪಕ್ಕದ ಊರಿಗೆ ಅಥವಾ ಹೊಲ ಗದ್ದೆಗೆ ಹೋಗಲು ಅವಲಂಬಿಸಿದ್ದ ಸೇತುವೆಗಳು ಹಾಳಾಗಿವೆ. ಯಾರದ್ದೋ ನಿರ್ಲಕ್ಷ್ಯಕ್ಕೆ ಯಮನಂತೆ ಕಾದು ಕುಳಿತ ಸೇತುವೆಯ ಮೇಲೆ ಜನರು ಜೀವದ ಹಂಗು ತೊರೆದು ಮುಂದೆ ಸಾಗುವಂತಾಗಿದೆ.

ದಾವಣಗೆರೆ ತಾಲೂಕಿನ ಅಣಬೇರು, ಶಂಕರನಹಳ್ಳಿ, ಬಾಡಾ, ಮಾಯಕೊಂಡ ಹೀಗೆ ಹತ್ತಾರು ಹಳ್ಳಿಯ ಜನ್ರಿಗೆ ಆಸರೆಯಾಗಿದ್ದ ಸೇತುವೆ ಹಾಳಾಗಿ ಎರಡು ವರ್ಷಗಳೇ ಕಳೆದಿವೆ. ಹಲವು ವರ್ಷಗಳ ಹಿಂದೆ ನಿರ್ಮಿಸಿದ್ದ ಭದ್ರಾ ಕಾಲುವೆಗೆ ಅಡ್ಡಲಾಗಿದ್ದ ಸೇತುವೆ ಮುರಿದು ಬಿದ್ದಿದೆ.

ಆರು ಗ್ರಾಮಗಳ ಜನ ತಮ್ಮ ಜಮೀನಿಗೆ ಹೋಗಬೇಕು ಅಂದ್ರೆ ಈ ಸೇತುವೆ ಮೇಲೆ ಹೋಗಬೇಕು. ಇನ್ನು ಭತ್ತದ ಹುಲ್ಲು, ಅಡಕೆ ತರಬೇಕಿದ್ದರೇ 20 ಕಿಲೋ ಮೀಟರ್ ಸುತ್ತು ಹಾಕಿಕೊಂಡು ಬರುವ ಪರಿಸ್ಥಿತಿ ಇಲ್ಲಿನ ಹಳ್ಳಿ ಜನರಿಗೆ ಉಂಟಾಗಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದ್ರೂ ಏನೂ ಪ್ರಯೋಜನ ಆಗಿಲ್ಲ ಎಂದು ಜನ ಆರೋಪಿಸಿದ್ದಾರೆ.

ಇನ್ನು ಈ ಗ್ರಾಮಗಳ ಸುತ್ತ ಹದಿನಾಲ್ಕು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಾಲ್ಕು ಸೇತುವೆಗಳಿವೆ. ಒಂದು ಸೇತುವೆ ಈಗಾಗಲೇ ಸಂಪೂರ್ಣ ಹಾಳಾಗಿದೆ. ಸುಮಾರು 50ಹಳ್ಳಿಗರಿಗೆ ಆಸರೆಯಾಗಿದ್ದ ನಾಲ್ಕು ಸೇತುವೆಗಳಲ್ಲಿ ಮೂರು ಸೇತುವೆ ಮೇಲೆ ಜನ ಓಡಾಡ್ತಾರೆ. ಆದ್ರೆ ಈ ಸೇತುವೆಗಳೂ ಕೂಡ ಅವನತಿ ಅಂಚಿನಲ್ಲಿವೆ.

ಈ ಸೇತುವೆಗಳು ನೀರಾವರಿ ಇಲಾಖೆಯ ವ್ಯಾಪ್ತಿಗೆ ಬರುತ್ತವೆ. ಈಗಾಗ್ಲೇ ಒಂದು ಸೇತುವೆಗೆ ಒಂದು ಕೋಟಿ 25 ಲಕ್ಷ ರೂಪಾಯಿ ಯೋಜನೆ ರೂಪಿಸಿ ನೀರಾವರಿ ಇಲಾಖೆ ಇಂಜಿನಿಯರ್​ಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಆದ್ರೆ ಯಾವುದೇ ಪ್ರಯೋಜನ ಆಗಿಲ್ಲ.

Published On - 4:08 pm, Wed, 27 November 19

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು