AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳು ನಟರನ್ನು ಅನುಕರಿಸುತ್ತಾರೆ..ಇಂಥ ದೃಶ್ಯಗಳನ್ನು ತೋರಿಸಬಾರದು: ಕೆಜಿಎಫ್-2​ ಟೀಸರ್​ ಬಗ್ಗೆ ಸುಧಾಕರ್​ ಪ್ರತಿಕ್ರಿಯೆ

ಇಂದು ರಾಜ್ಯಕ್ಕೆ 20 ಸಾವಿರ ಡೋಸ್ ಕೊವ್ಯಾಕ್ಸಿನ್​ ಲಸಿಕೆ ಬರುತ್ತಿದೆ. ನಾಳೆಯೊಳಗೆ ಎಲ್ಲ ಜಿಲ್ಲೆಗಳಿಗೆ ಲಸಿಕೆ ಹಂಚಿಕೆ ಮಾಡಲಾಗುವುದು. ಕೊವ್ಯಾಕ್ಸಿನ್​, ಕೊವಿಶೀಲ್ಡ್​ ಎರಡೂ ವ್ಯಾಕ್ಸಿನ್​ ಕೊಡುತ್ತೇವೆ. ಯಾವ ಜಿಲ್ಲೆಗಳಿಗೆ ಎಷ್ಟು ಲಸಿಕೆ ಕೊಡಬೇಕು ಎಂಬುದನ್ನು ಕೇಂದ್ರ ಸರ್ಕಾರ ಈಗಾಗಲೇ ಪಟ್ಟಿ ಬಿಡುಗಡೆ ಮಾಡಿದೆ.

ಅಭಿಮಾನಿಗಳು ನಟರನ್ನು ಅನುಕರಿಸುತ್ತಾರೆ..ಇಂಥ ದೃಶ್ಯಗಳನ್ನು ತೋರಿಸಬಾರದು: ಕೆಜಿಎಫ್-2​ ಟೀಸರ್​ ಬಗ್ಗೆ ಸುಧಾಕರ್​ ಪ್ರತಿಕ್ರಿಯೆ
ಡಾ. ಕೆ.ಸುಧಾಕರ್​
Lakshmi Hegde
|

Updated on:Jan 13, 2021 | 12:51 PM

Share

ಬೆಂಗಳೂರು: ಕೆಜಿಎಫ್​ ಚಿತ್ರದಲ್ಲಿ ಬಂದೂಕಿನಿಂದ ಯಶ್​ ಸಿಗರೇಟ್​ ಹಚ್ಚಿರುವ ದೃಶ್ಯ ಭರ್ಜರಿ ಫೇಮಸ್ ಆದ ಬೆನ್ನಲ್ಲೇ, ಈ ದೃಶ್ಯವನ್ನು ತೆಗೆಯಿರಿ ಎಂದು ಆರೋಗ್ಯ ಇಲಾಖೆಯಿಂದ ನೋಟಿಸ್ ಕೂಡ ಬಂದಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ನಟರನ್ನು ಸಾವಿರಾರು ಅಭಿಮಾನಿಗಳು ಫಾಲೋ ಮಾಡುತ್ತಾರೆ. ಹಾಗಾಗಿ ಯಶ್​ ಸೇರಿ ಇತರ ನಟರಿಗೂ ಆರೋಗ್ಯ ಇಲಾಖೆಯಿಂದ ಮನವಿ ಮಾಡುತ್ತಿದ್ದೇವೆ. ಇಂಥ ದೃಶ್ಯಗಳನ್ನು ತೋರಿಸಬಾರದು ಎಂದಿದ್ದಾರೆ.

ದೇಶದಲ್ಲಿ ಕ್ಯಾನ್ಸರ್ ಪೀಡಿತರು ಹೆಚ್ಚುತ್ತಿದ್ದಾರೆ. ಹಾಗಾಗಿ ಸಿನಿಮಾಗಳಲ್ಲಿ ಆದಷ್ಟು ಸಿಗರೇಟ್​ ಸೇದುವ ದೃಶ್ಯಗಳನ್ನು ತೋರಿಸಬಾರದು. ಜನರು ನಟನನ್ನು ಅನುಕರಿಸುತ್ತಾರೆ. ಹಾಗಾಗಿ ಜನರಲ್ಲಿ ಜಾಗೃತಿ ಮೂಡಿಸುವಂತಹ ದೃಶ್ಯಗಳು ಇರಬೇಕು ಹೊರತು, ಇಂಥದ್ದನ್ನೆಲ್ಲ ತೋರಿಸಬಾರದು ಎಂದು ಹೇಳಿದ್ದಾರೆ.

ಮುನಿರತ್ನ ಸಚಿವರಾಗ್ತಾರೆ ! ಈ ಬಾರಿಯ ಸಚಿವ ಸಂಪುಟದಲ್ಲೂ ಮುನಿರತ್ನ ಹೆಸರು ಇಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್​, ಮುನಿರತ್ನ ಹೆಸರು ಪಟ್ಟಿಯಲ್ಲಿ ಇಲ್ಲ ಎಂಬ ವಿಚಾರ ನನಗೆ ಗೊತ್ತಿಲ್ಲ. ಮಾಧ್ಯಮಗಳಲ್ಲಿ ನೋಡಿದ ಮೇಲೆಯೇ ಗೊತ್ತಾಗಿದ್ದು. ಆದರೆ ಖಂಡಿತ ಮುನಿರತ್ನ ಈ ಬಾರಿ ಸಚಿವರಾಗ್ತಾರೆ ಎನ್ನುವ ನಂಬಿಕೆ ಇದೆ. ಸಂಪುಟ ವಿಸ್ತರಣೆ ಎಂದಮೇಲೆ ಗೊಂದಲ ಇದ್ದೇ ಇರುತ್ತದೆ. ಅದು ನಿವಾರಣೆಯಾಗುವವರೆಗೂ ಕಾಯಬೇಕು. ನಾವು 17 ಜನರಷ್ಟೇ ಅಲ್ಲ, ಬಿಜೆಪಿಯ ಎಲ್ಲ ಶಾಸಕರೂ ಒಟ್ಟಿಗೇ ಇದ್ದೇವೆ ಎಂದು ಸ್ಪಷ್ಟಪಡಿಸಿದರು.

ನಾಳೆಯೊಳಗೆ ಕೊವಿಡ್​ ಲಸಿಕೆ ಇಂದು ರಾಜ್ಯಕ್ಕೆ 20 ಸಾವಿರ ಡೋಸ್ ಕೊವ್ಯಾಕ್ಸಿನ್​ ಲಸಿಕೆ ಬರುತ್ತಿದೆ. ನಾಳೆಯೊಳಗೆ ಎಲ್ಲ ಜಿಲ್ಲೆಗಳಿಗೆ ಲಸಿಕೆ ಹಂಚಿಕೆ ಮಾಡಲಾಗುವುದು. ಕೊವ್ಯಾಕ್ಸಿನ್​, ಕೊವಿಶೀಲ್ಡ್​ ಎರಡೂ ವ್ಯಾಕ್ಸಿನ್​ ಕೊಡುತ್ತೇವೆ. ಯಾವ ಜಿಲ್ಲೆಗಳಿಗೆ ಎಷ್ಟು ಲಸಿಕೆ ಕೊಡಬೇಕು ಎಂಬುದನ್ನು ಕೇಂದ್ರ ಸರ್ಕಾರ ಈಗಾಗಲೇ ಪಟ್ಟಿ ಬಿಡುಗಡೆ ಮಾಡಿದೆ. ಅದರಂತೆ ಲಸಿಕೆ ಹಂಚಿಕೆಯಾಗುತ್ತದೆ ಎಂದು ಮಾಹಿತಿ ನೀಡಿದರು.

ಬಂದೂಕಿನಿಂದ ಸಿಗರೇಟ್ ಹಚ್ಚಿದಕ್ಕೆ ರಾಕಿಂಗ್ ಸ್ಟಾರ್ ಯಶ್​ಗೆ ನೋಟಿಸ್.. ಸೀನ್ ಕತ್ತರಿಸುವಂತೆ ಸೂಚನೆ

ಪಂಚಮಸಾಲಿ ಸ್ವಾಮೀಜಿ ಗುಡುಗು: ಒಂದು ವರ್ಷದ ನಂತರ ನಿರಾಣಿಗೆ ಸಚಿವ ಸ್ಥಾನದ ಗದ್ದುಗೆ

Published On - 12:39 pm, Wed, 13 January 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ