AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ದಿನಗಳ ಕೊರೊನಾ ಕರ್ಫ್ಯೂ; ಬೆಂಗಳೂರಿಗೆ ವಿದಾಯ ಹೇಳಿ ತಮ್ಮ ಗೂಡು ಸೇರುತ್ತಿರುವ ಜನ

ಕೊರೊನಾ ಕಂಟ್ರೋಲ್ಗೆ ರಾಜ್ಯ ಸರ್ಕಾರ 14 ದಿನಗಳ ಟಫ್ ಕರ್ಫ್ಯೂ ಘೋಷಿಸಿದೆ. ಇದು ಜನರ ನಿದ್ದೆಗೆಡಿಸಿದ್ದು ಸಾಕಪ್ಪ ಬೆಂಗಳೂರಿನ ಸಹವಾಸ ಅಂತಾ ಸಾವಿರಾರು ಮಂದಿ ಬೆಂಗಳೂರು ಬಿಟ್ಟು ಊರು ಸೇರ್ತಿದ್ದಾರೆ.

14 ದಿನಗಳ ಕೊರೊನಾ ಕರ್ಫ್ಯೂ; ಬೆಂಗಳೂರಿಗೆ ವಿದಾಯ ಹೇಳಿ ತಮ್ಮ ಗೂಡು ಸೇರುತ್ತಿರುವ ಜನ
ಸ್ವಗ್ರಾಮಕ್ಕೆ ಹಿಂತಿರುಗುತ್ತಿರುವ ಜನ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 27, 2021 | 8:25 AM

Share

ಬೆಂಗಳೂರು: ಕೊವಿಡ್ ಸೋಂಕಿನ ಸರಪಳಿ ಕಳಚುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದೆ. ವೀಕೆಂಡ್ ಕರ್ಫ್ಯೂ ಮಾದರಿಯಲ್ಲೇ ಟಫ್ ರೂಲ್ಸ್ ಮುಂದುವರಿಸಲು ನಿರ್ಧರಿಸಿದೆ. ಹೀಗಾಗಿ ಬೆಂಗಳೂರಿನಲ್ಲಿದ್ದ ಬೇರೆ ಊರಿನ ಜನ ತಮ್ಮ ಸ್ವಂತ ಊರುಗಳಿಗೆ ತೆರಳಿದ್ದಾರೆ. ಹೀಗಾಗಿ ಮೆಜೆಸ್ಟಿಕ್ನಲ್ಲಿ ಭಾರಿ ಜನ ಸಂದಣಿ ಕಂಡುಬಂದಿದೆ.

ರಾಜ್ಯದಲ್ಲಿ ಕಂಟ್ರೋಲ್ ತಪ್ಪಿರೋ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿತ್ತು. ಆಗಲೇ.. ಬೆಂಗಳೂರಿಗೆ ಕೆಲಸ ಅರಸಿ ಬಂದಿದ್ದ ಬಹುತೇಕರು ತಮ್ಮ ಸ್ವಂತ ಊರುಗಳಿಗೆ ತೆರಳಿದ್ರು. ಯುಗಾದಿ ಹಬ್ಬಕ್ಕೆ ಅಂತಾ ಊರಿಗೆ ಹೋದ ಹಲವರು ವಾಪಸ್ ಬಂದೇ ಇರಲಿಲ್ಲ. ಈಗ ಕೊರೊನಾ ಕಂಟ್ರೋಲ್ಗೆ ರಾಜ್ಯ ಸರ್ಕಾರ 14 ದಿನಗಳ ಟಫ್ ಕರ್ಫ್ಯೂ ಘೋಷಿಸಿದೆ. ಇದು ಜನರ ನಿದ್ದೆಗೆಡಿಸಿದ್ದು ಸಾಕಪ್ಪ ಬೆಂಗಳೂರಿನ ಸಹವಾಸ ಅಂತಾ ಸಾವಿರಾರು ಮಂದಿ ಬೆಂಗಳೂರು ಬಿಟ್ಟು ಊರು ಸೇರ್ತಿದ್ದಾರೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದ ಕಾರಣ ಕೆಎಸ್ಆರ್ಟಿಸಿ 500 ಹೆಚ್ಚುವರಿ ಬಸ್ಗಳನ್ನ ಬಿಟ್ಟಿದೆ.

ಇಂದು(ಏಪ್ರಿಲ್ 27) ಸಂಜೆಯವರೆಗೂ ಜನರು ಊರುಗಳಿಗೆ ತೆರಳಲು ಮುಂದಾಗೋ ಸಾಧ್ಯತೆ ದಟ್ಟವಾಗಿದೆ. ಕೊರೊನಾ ಕರ್ಫ್ಯೂನಿಂದ ಊರುಗಳತ್ತ ತೆರಳುತ್ತಿರುವ ಪ್ರಯಾಣಿಕರಿಗಾಗಿ ಇಂದು ಸಾರಿಗೆ ನಿಗಮಗಳಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಇಂದಿನಿ ಕರ್ಫ್ಯೂ ಬಿಗಿಗೊಳಿಸಿರುವುದರಿಂದ ಹೆಚ್ಚಿನ ಸಂಖ್ಯೆಯ ಜನರು ಸ್ವಂತ ಊರುಗಳಿಗೆ ತೆರಳಲು 3 ಸಾರಿಗೆ ನಿಗಮಗಳಿಂದ ಬೇಡಿಕೆಗೆ ಅನುಗುಣವಾಗಿ 12 ಸಾವಿರಕ್ಕೂ ಹೆಚ್ಚು ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಅಂತಾ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ಇಂದು ರಾತ್ರಿ ಒಳಗೆ ತಮ್ಮ ಉರುಗಳಿಗೆ ತಲುಪಬೇಕಾದ ಪ್ರಯಾಣಿಕರು ಯಾವುದೇ ಆತಂಕವಿಲ್ಲದೇ, ಕೊವಿಡ್ ಮಾರ್ಗಸೂಚಿ ಪಾಲಿಸಿ ಸಂಚರಿಸುವಂತೆ ಮನವಿ ಮಾಡಲಾಗಿದೆ. ಬೇರೆ ಬೇರೆ ಜಿಲ್ಲೆಗಳಿಗೆ ತೆರಳಲು ಜನ ಮೆಜೆಸ್ಟಿಕ್ಗೆ ಬಂದಿದ್ದು ಜನ ಜಂಗುಳಿಯೇ ಕಂಡು ಬಂದಿದೆ. ಇನ್ನು ಬೆಂಗಳೂರಿನಲ್ಲಿದ್ದ ಜನ ಜಿಲ್ಲೆಗಳಿಗೆ ತೆರಳುತ್ತಿದ್ದು ಅಲ್ಲಿಯೂ ಕೊರೊನಾ ಹೆಚ್ಚಾಗುವ ಆತಂಕವಿದೆ.

ಇದನ್ನೂ ಓದಿ: ಬೆಂಗಳೂರಿಗೆ ಬೈಬೈ ಹೇಳಿ ತವರಿಗೆ ಮರಳಿದ ಜನ; ಕಲಬುರಗಿಯಲ್ಲಿ ಹೆಚ್ಚಾದ ಕೊರೊನಾ ಭೀತಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು