AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ದಿನಗಳ ಕೊರೊನಾ ಕರ್ಫ್ಯೂ; ಬೆಂಗಳೂರಿಗೆ ವಿದಾಯ ಹೇಳಿ ತಮ್ಮ ಗೂಡು ಸೇರುತ್ತಿರುವ ಜನ

ಕೊರೊನಾ ಕಂಟ್ರೋಲ್ಗೆ ರಾಜ್ಯ ಸರ್ಕಾರ 14 ದಿನಗಳ ಟಫ್ ಕರ್ಫ್ಯೂ ಘೋಷಿಸಿದೆ. ಇದು ಜನರ ನಿದ್ದೆಗೆಡಿಸಿದ್ದು ಸಾಕಪ್ಪ ಬೆಂಗಳೂರಿನ ಸಹವಾಸ ಅಂತಾ ಸಾವಿರಾರು ಮಂದಿ ಬೆಂಗಳೂರು ಬಿಟ್ಟು ಊರು ಸೇರ್ತಿದ್ದಾರೆ.

14 ದಿನಗಳ ಕೊರೊನಾ ಕರ್ಫ್ಯೂ; ಬೆಂಗಳೂರಿಗೆ ವಿದಾಯ ಹೇಳಿ ತಮ್ಮ ಗೂಡು ಸೇರುತ್ತಿರುವ ಜನ
ಸ್ವಗ್ರಾಮಕ್ಕೆ ಹಿಂತಿರುಗುತ್ತಿರುವ ಜನ
ಆಯೇಷಾ ಬಾನು
|

Updated on: Apr 27, 2021 | 8:25 AM

Share

ಬೆಂಗಳೂರು: ಕೊವಿಡ್ ಸೋಂಕಿನ ಸರಪಳಿ ಕಳಚುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದೆ. ವೀಕೆಂಡ್ ಕರ್ಫ್ಯೂ ಮಾದರಿಯಲ್ಲೇ ಟಫ್ ರೂಲ್ಸ್ ಮುಂದುವರಿಸಲು ನಿರ್ಧರಿಸಿದೆ. ಹೀಗಾಗಿ ಬೆಂಗಳೂರಿನಲ್ಲಿದ್ದ ಬೇರೆ ಊರಿನ ಜನ ತಮ್ಮ ಸ್ವಂತ ಊರುಗಳಿಗೆ ತೆರಳಿದ್ದಾರೆ. ಹೀಗಾಗಿ ಮೆಜೆಸ್ಟಿಕ್ನಲ್ಲಿ ಭಾರಿ ಜನ ಸಂದಣಿ ಕಂಡುಬಂದಿದೆ.

ರಾಜ್ಯದಲ್ಲಿ ಕಂಟ್ರೋಲ್ ತಪ್ಪಿರೋ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿತ್ತು. ಆಗಲೇ.. ಬೆಂಗಳೂರಿಗೆ ಕೆಲಸ ಅರಸಿ ಬಂದಿದ್ದ ಬಹುತೇಕರು ತಮ್ಮ ಸ್ವಂತ ಊರುಗಳಿಗೆ ತೆರಳಿದ್ರು. ಯುಗಾದಿ ಹಬ್ಬಕ್ಕೆ ಅಂತಾ ಊರಿಗೆ ಹೋದ ಹಲವರು ವಾಪಸ್ ಬಂದೇ ಇರಲಿಲ್ಲ. ಈಗ ಕೊರೊನಾ ಕಂಟ್ರೋಲ್ಗೆ ರಾಜ್ಯ ಸರ್ಕಾರ 14 ದಿನಗಳ ಟಫ್ ಕರ್ಫ್ಯೂ ಘೋಷಿಸಿದೆ. ಇದು ಜನರ ನಿದ್ದೆಗೆಡಿಸಿದ್ದು ಸಾಕಪ್ಪ ಬೆಂಗಳೂರಿನ ಸಹವಾಸ ಅಂತಾ ಸಾವಿರಾರು ಮಂದಿ ಬೆಂಗಳೂರು ಬಿಟ್ಟು ಊರು ಸೇರ್ತಿದ್ದಾರೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದ ಕಾರಣ ಕೆಎಸ್ಆರ್ಟಿಸಿ 500 ಹೆಚ್ಚುವರಿ ಬಸ್ಗಳನ್ನ ಬಿಟ್ಟಿದೆ.

ಇಂದು(ಏಪ್ರಿಲ್ 27) ಸಂಜೆಯವರೆಗೂ ಜನರು ಊರುಗಳಿಗೆ ತೆರಳಲು ಮುಂದಾಗೋ ಸಾಧ್ಯತೆ ದಟ್ಟವಾಗಿದೆ. ಕೊರೊನಾ ಕರ್ಫ್ಯೂನಿಂದ ಊರುಗಳತ್ತ ತೆರಳುತ್ತಿರುವ ಪ್ರಯಾಣಿಕರಿಗಾಗಿ ಇಂದು ಸಾರಿಗೆ ನಿಗಮಗಳಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಇಂದಿನಿ ಕರ್ಫ್ಯೂ ಬಿಗಿಗೊಳಿಸಿರುವುದರಿಂದ ಹೆಚ್ಚಿನ ಸಂಖ್ಯೆಯ ಜನರು ಸ್ವಂತ ಊರುಗಳಿಗೆ ತೆರಳಲು 3 ಸಾರಿಗೆ ನಿಗಮಗಳಿಂದ ಬೇಡಿಕೆಗೆ ಅನುಗುಣವಾಗಿ 12 ಸಾವಿರಕ್ಕೂ ಹೆಚ್ಚು ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಅಂತಾ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ಇಂದು ರಾತ್ರಿ ಒಳಗೆ ತಮ್ಮ ಉರುಗಳಿಗೆ ತಲುಪಬೇಕಾದ ಪ್ರಯಾಣಿಕರು ಯಾವುದೇ ಆತಂಕವಿಲ್ಲದೇ, ಕೊವಿಡ್ ಮಾರ್ಗಸೂಚಿ ಪಾಲಿಸಿ ಸಂಚರಿಸುವಂತೆ ಮನವಿ ಮಾಡಲಾಗಿದೆ. ಬೇರೆ ಬೇರೆ ಜಿಲ್ಲೆಗಳಿಗೆ ತೆರಳಲು ಜನ ಮೆಜೆಸ್ಟಿಕ್ಗೆ ಬಂದಿದ್ದು ಜನ ಜಂಗುಳಿಯೇ ಕಂಡು ಬಂದಿದೆ. ಇನ್ನು ಬೆಂಗಳೂರಿನಲ್ಲಿದ್ದ ಜನ ಜಿಲ್ಲೆಗಳಿಗೆ ತೆರಳುತ್ತಿದ್ದು ಅಲ್ಲಿಯೂ ಕೊರೊನಾ ಹೆಚ್ಚಾಗುವ ಆತಂಕವಿದೆ.

ಇದನ್ನೂ ಓದಿ: ಬೆಂಗಳೂರಿಗೆ ಬೈಬೈ ಹೇಳಿ ತವರಿಗೆ ಮರಳಿದ ಜನ; ಕಲಬುರಗಿಯಲ್ಲಿ ಹೆಚ್ಚಾದ ಕೊರೊನಾ ಭೀತಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ