ಬೆಳಗಾವಿ: ಪುರಸಭೆ ಮುಖ್ಯಾಧಿಕಾರಿ ಅಪೂರ್ವ ಬಿದರಿ ವಿರುದ್ಧ ರೊಚ್ಚಿಗೆದ್ದ ದಲಿತರು; ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಆರೋಪ

ತಾನು ಸಿಕ್ಕಾಪಟ್ಟೆ ಖಡಕ್ ಆಧಿಕಾರಿ ಅಂತ ಪೋಸ್ ನೀಡುವ ಅಪೂರ್ವ ಬಿದರಿ ತಮ್ಮ ಮೇಲಾಧಿಕಾರಿಗಳಿಗೆ ತಲೆ ನೋವು ಆಗಿದ್ದಾರೆ. ಕೆ.ಎ.ಎಸ್ ಪ್ರೊಬೇಷನರಿ ಆಗಿರುವ ಅಪೂರ್ವ ಚಿಕ್ಕೋಡಿಯ ಪುರಸಭೆಯ ಮುಖ್ಯಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಬೆಳಗಾವಿ: ಪುರಸಭೆ ಮುಖ್ಯಾಧಿಕಾರಿ ಅಪೂರ್ವ ಬಿದರಿ ವಿರುದ್ಧ ರೊಚ್ಚಿಗೆದ್ದ ದಲಿತರು; ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಆರೋಪ
ಪುರಸಭೆ ಮುಖ್ಯಾಧಿಕಾರಿ ಅಪೂರ್ವ ಬಿದರಿ
Follow us
|

Updated on: May 01, 2021 | 10:26 AM

ಬೆಳಗಾವಿ: ಅಪೂರ್ವ ಬಿದರಿ ಇನ್ನೂ ಯಂಗ್ ಅಂಡ್ ಎನರ್ಜಿಟಿಕ್ ಆಫೀಸರ್. ರಾಜ್ಯದ ಖಡಕ್ ಅಧಿಕಾರಿಗಳ ಕುಟುಂಬದ ಕುಡಿ. ಈ ಮಹಿಳಾ ಅಧಿಕಾರಿಯಾದ ಅಪೂರ್ವ ಬಿದರಿ ಪ್ರೋಬೇಶನರಿ ಸಮಯದಲ್ಲಿ ಸಾರ್ವಜನಿಕರ ಕೆಂಗಣ್ಣಿಗೆ ಇದೀಗ ಗುರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಯಾರನ್ನು ಕೇಳಿದರೂ ಬರಿ ಮಹಿಳಾ ಆಫೀಸರ್ ಬಗ್ಗೆನೇ ಮಾತು. ತಾನು ಸಿಕ್ಕಾಪಟ್ಟೆ ಖಡಕ್ ಆಧಿಕಾರಿ ಅಂತ ಪೋಸ್ ನೀಡುವ ಅಪೂರ್ವ ಬಿದರಿ ತಮ್ಮ ಮೇಲಾಧಿಕಾರಿಗಳಿಗೆ ತಲೆ ನೋವು ಆಗಿದ್ದಾರೆ. ಕೆ.ಎ.ಎಸ್ ಪ್ರೊಬೇಷನರಿ ಆಗಿರುವ ಅಪೂರ್ವ ಚಿಕ್ಕೋಡಿಯ ಪುರಸಭೆಯ ಮುಖ್ಯಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಪೂರ್ವ ತಾನು ಸಿಕ್ಕಾಪಟ್ಟೆ ಖಡಕ್ ಅಧಿಕಾರಿ ಅಂತ ಬಿಂಬಿಸಿಕೊಳ್ಳಲು ಕೈಯಲ್ಲಿ ಲಾಠಿ ಹಿಡಿದುಕೊಳ್ಳುತ್ತಾರೆಂಬ ಮಾತುಗಳು ಹೆಚ್ಚಾಗಿವೆ.

ಸಚಿವೆ ಜೊಲ್ಲೆ ಅವರಿಗೆ ಬಾಯಿ ಅಂತ ಕರೆದಿರುವ ಅಪೂರ್ವ ಬಗ್ಗೆ ಚಿಕ್ಕೋಡಿಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇನ್ನೂ ಪ್ರೊಬೇಷನರಿ ಹಂತವನ್ನೆ ಮುಗಿಸದ ಅಪೂರ್ವ ಅಧಿಕಾರದ ಮದ ಇಳಿಸಲು ದಲಿತ ಸಂಘನೆಗಳು ಮುಂದಾಗಿವೆ. ಲಿಕ್ಕರ್ ಡಾನ್​ಗಳ ಅಣತಿಯಂತೆ ಅಧಿಕಾರ ನಡೆಸುತ್ತಿರುವ ಅಪೂರ್ವ ದಲಿತರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ.

ಕೊರೊನಾ ನಿಯಂತ್ರಿಸಲು ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಆದರೆ ಮಹಿಳಾ ಅಧಿಕಾರಿ ಅಪೂರ್ವ ಖಾಸಗಿ ವಾಹನದಲ್ಲಿ ಕುಟುಂಬದ ಆರು ಜನರನ್ನು ಕೂರಿಸಿಕೊಂಡು ಗೂಂಡಾ ವರ್ತನೆ ನಡೆಸಿರುವುದು ಬೆಳಕಿಗೆ ಬಂದಿದೆ. ದೀನ ದಲಿತರ ಮದುವೆ ವೇಳೆಯಲ್ಲಿ ಎಲ್ಲರಿಗೂ ಮನಸ್ಸಿಚ್ಚೆಯಂತೆ ಬೈದು ದೌರ್ಜನ್ಯತೆಯನ್ನು ಮೆರೆದಿದ್ದಾರೆ. ಹೀಗಾಗಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕಲಾಗುತ್ತದೆ ಎಂದು ಹೋಮ್​ಗಾರ್ಡ್​ನ ಮಾಜಿ ಸೂಪರಿಡೆಂಟ್ ಅರವಿಂದ್ ಗಟ್ಟಿ ತಿಳಿಸಿದರು.

ಇದನ್ನೂ ಓದಿ

ಬೀದರ್: ಬ್ರಿಮ್ಸ್ ಅವ್ಯವಸ್ಥೆ ಕಂಡು ಸಚಿವ ಡಾ.ಕೆ.ಸುಧಾಕರ್ ಕೆಂಡಾಮಂಡಲ

ಕೊವಿಡ್​ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ ನಟನಿಗೆ 2 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್​

(People of Belgaum accused of violating Corona Guidelines against officer Apoorva Bidari)

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ