AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಸ್ಪತ್ರೆಯ ವೈದ್ಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನ ಮಾಡಿದ ಬೀದರ್ ಜನತೆ

ವೈದ್ಯರ ನಿರ್ಲಕ್ಷ್ಯದಿಂದ ಜನ ಸಾವನ್ನಪ್ಪುತ್ತಿದ್ದಾರೆ ಎಂದು ಹಲವು ಕುಟುಂಬಸ್ಥರು ಆರೋಪಿಸಿರುವ ಬಗ್ಗೆ ಈಗಾಗಲೇ ಟಿವಿ9 ನಲ್ಲಿ ಹಲವು ಬಾರಿ ವರದಿ ಪ್ರಕಟವಾಗಿದೆ. ಸೋಂಕಿತರನ್ನು ಕಳೆದುಕೊಂಡ ಸಂಬಂಧಿಕರು ಕೆಲ ಆಸ್ಪತ್ರೆ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಈ ನಡುವೆ ಬೀದರ್ ಜನ ಜಿಲ್ಲಾಸ್ಪತ್ರೆ ವೈದ್ಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ

ಜಿಲ್ಲಾಸ್ಪತ್ರೆಯ ವೈದ್ಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನ ಮಾಡಿದ ಬೀದರ್ ಜನತೆ
ಬ್ರೀಮ್ಸ್ ಆಸ್ಪತ್ರೆ
sandhya thejappa
|

Updated on:May 22, 2021 | 8:40 AM

Share

ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಪರಿಣಾಮ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆ ಎದುರಾಗಿದೆ. ಇದರ ಜೊತೆಗೆ ರಾಜ್ಯದ ಕೆಲ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ. ಸೂಕ್ತ ಚಿಕಿತ್ಸೆ ಸಿಗದೆ ಹಲವರು ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ಈಗಾಗಲೇ ಬಡ ಜೀವಿಗಳ ಪ್ರಾಣ ಪಕ್ಷಿ ಹಾರಿಹೋಗಿದೆ. ವೈದ್ಯರ ಬೇಜಾವಾಬ್ದಾರಿಯಿಂದ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು, ಸಂಬಂಧಿಗಳು ಆರೋಪಿಸುತ್ತಿದ್ದಾರೆ. ಈ ನಡುವೆ ಬೀದರ್ ಜಿಲ್ಲಾಸ್ಪತ್ರೆಯ ವೈದ್ಯರ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿ, ಸನ್ಮಾನ ಕೂಡಾ ಮಾಡಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದ ಜನ ಸಾವನ್ನಪ್ಪುತ್ತಿದ್ದಾರೆ ಎಂದು ಹಲವು ಕುಟುಂಬಸ್ಥರು ಆರೋಪಿಸಿರುವ ಬಗ್ಗೆ ಈಗಾಗಲೇ ಟಿವಿ9 ನಲ್ಲಿ ಹಲವು ಬಾರಿ ವರದಿ ಪ್ರಕಟವಾಗಿದೆ. ಸೋಂಕಿತರನ್ನು ಕಳೆದುಕೊಂಡ ಸಂಬಂಧಿಕರು ಕೆಲ ಆಸ್ಪತ್ರೆ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಈ ನಡುವೆ ಬೀದರ್ ಜನ ಜಿಲ್ಲಾಸ್ಪತ್ರೆ ವೈದ್ಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಕೊವಿಡ್ ಸೋಂಕಿತರಿಗೆ ಕೊಡುತ್ತಿರುವ ಚಿಕಿತ್ಸೆ ಬಗ್ಗೆ ಸಂತಸ ವ್ಯಕ್ತಪಡಿಸಿದ ಜಿಲ್ಲೆಯ ಜನ, ವೈದ್ಯರು, ನರ್ಸ್​ಗಳು, ಆಯಾಗಳು ಸೋಂಕಿತರನ್ನು ಪ್ರೀತಿಯಿಂದ ಆರೈಕೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ. ಅಲ್ಲದೆ ಕೊರೊನಾದಿಂದ ಗುಣಮುಖರಾಗಿ ಮನೆಗೆ ಹೋಗುವಾಗ ವೈದ್ಯಗೆ ಸನ್ಮಾನ ಮಾಡಿ ಹೋಗುತ್ತಿದ್ದಾರೆ. ಹೀಗೆ 80 ವರ್ಷದ ತಾಯಿಯನ್ನು ಬೇಗ ಗುಣಮುಖರಾಗಿ ಮಾಡಿದಕ್ಕೆ ಜಿಲ್ಲಾಸ್ಪತ್ರೆಯ ವೈದ್ಯಗೆ ಸನ್ಮಾನ ಮಾಡಿದ್ದಾರೆ.

ಬೀದರ್​ಗೆ ಪ್ರಥಮ ಸ್ಥಾನ ಜಿಲ್ಲೆಯಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಐದು ದಿನದಲ್ಲಿ 1,701 ಸೋಂಕಿತರು ಗುಣಮುಖರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೊನಾದಿಂದ ಗುಣಮುಖರಾದವರ ಸಂಖ್ಯೆ ಏರಿಕೆಯಾಗಿದ್ದು, ಕೊವಿಡ್ ನಿಯಂತ್ರಣದಲ್ಲಿ ರಾಜ್ಯದಲ್ಲಿ ಬೀದರ್ ಪ್ರಥಮ ಸ್ಥಾನ ಪಡೆದಿದೆ.

ಜಿಲ್ಲೆಯಲ್ಲಿ ಲಾಕ್​ಡೌನ್​ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ದಂಡ ವಿಧಿಸುತ್ತಿದ್ದಾರೆ. ಈಗಾಗಲೇ 1.58 ಲಕ್ಷ ರೂ. ದಂಡದ ಹಣ ಸಂಗ್ರಹವಾಗಿದೆ. ಒಂದು ದಿನದಲ್ಲಿ ಮಾಸ್ಕ್ ಧರಿಸದ 1,584 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕರ್ನಾಟಕ ಎಪಿಡೆಮಿಕ್ ಡಿಸೀಸ್ ಆ್ಯಕ್ಟ್ ಉಲ್ಲಂಘನೆ ಸಂಬಂಧಿಸಿ 3 ಪ್ರಕರಣ ದಾಖಲಾಗಿದೆ. ಅನಗತ್ಯವಾಗಿ ಸಂಚಾರ ಮಾಡುತ್ತಿದ್ದ ಸುಮಾರು 103 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ

ಕೊಹ್ಲಿ ನಿನಗೆ ಮಾದರಿಯಾಗಲಿ; ಕೊರೊನಾದಿಂದ ತಾಯಿಯನ್ನು ಕಳೆದುಕೊಂಡ ಪ್ರಿಯಾ ಪುನಿಯಾಗೆ ತಂದೆಯ ಸಾಂತ್ವನ

ಒಂದೇ ತೆರನಾದ ಅಭ್ಯಾಸ ಬಿಡಿ; ರೋಗನಿರೋಧಕ ಶಕ್ತಿ ಹೆಚ್ಚಿಸಲು ಆಹಾರ ಪದ್ಧತಿಯಲ್ಲಿ ವೈವಿಧ್ಯತೆ ಇರಲಿ

(people of Bidar have praised and honored district hospital doctor)

Published On - 8:39 am, Sat, 22 May 21

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!