AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕೊಂಚ ಕಡಿಮೆಯಾಗುತ್ತಿದ್ದಂತೆ ಮತ್ತೆ ಜನರ ನಿರ್ಲಕ್ಷ್ಯ.. ಮದುವೆ ಸಂಭ್ರಮಕ್ಕೆ ಡಿಜೆ ಹಾಕಿ ಕುಣಿದು ಕುಪ್ಪಳಿಸಿದ ಜನ

ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಸೇವಾಲಾಲ್ ನಗರದಲ್ಲಿ ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ಡಿಜೆ ಸಾಂಗ್ಸ್ ಸದ್ದು ಮಾಡುತ್ತಿದೆ.

ಕೊರೊನಾ ಕೊಂಚ ಕಡಿಮೆಯಾಗುತ್ತಿದ್ದಂತೆ ಮತ್ತೆ ಜನರ ನಿರ್ಲಕ್ಷ್ಯ.. ಮದುವೆ ಸಂಭ್ರಮಕ್ಕೆ ಡಿಜೆ ಹಾಕಿ ಕುಣಿದು ಕುಪ್ಪಳಿಸಿದ ಜನ
ಮಕ್ಕಳ ಜೊತೆ ಡಿಜೆ ಡ್ಯಾನ್ಸ್
TV9 Web
| Updated By: ಆಯೇಷಾ ಬಾನು|

Updated on: Jun 30, 2021 | 9:56 AM

Share

ಗದಗ: ಕೊರೊನಾ 2 ನೇ ಅಲೆ ಅಬ್ಬರ ಸದ್ಯ ಕೊಂಚ ತಣ್ಣಗಾಗಿದೆ. ಆದ್ರೆ ಕೊರೊನಾ ಸಂಪೂರ್ಣ ನಾಶವಾಗಿಲ್ಲ. ಆದ್ರೆ ಇದರ ನಡುವೆ ಗದಗ ಜಿಲ್ಲೆಯಲ್ಲಿ ಜನರ ನಿರ್ಲಕ್ಷ್ಯ ಹೆಚ್ಚಾಗಿದೆ. ಕೊರೊನಾ ಎರಡನೇ ಅಲೆಯಲ್ಲಿ ಉಂಟಾಗಿದ್ದ ಸಾವು-ನೋವು ಮರೆಯಾಗುವ ಮುನ್ನವೇ ಕೊವಿಡ್ ನಿಯಮ ಉಲ್ಲಂಘನೆಯಾಗುತ್ತಿದೆ. ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಹೆಚ್ಚು ಎಂಬ ಬಗ್ಗೆಯೂ ಚಿಂತಿಸದೆ ಮಕ್ಕಳು, ಯುವತಿಯರು ಸೇರಿದಂತೆ ಅನೇಕ ಮಂದಿ ಡಿಜೆ ಸೌಂಡ್ಗೆ ಭರ್ಜರಿ ಲಂಬಾಣಿ ಸಂಪ್ರದಾಯಿಕ ಡ್ಯಾನ್ಸ್ ಮಾಡಿದ್ದಾರೆ.

ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಸೇವಾಲಾಲ್ ನಗರದಲ್ಲಿ ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ಡಿಜೆ ಸಾಂಗ್ಸ್ ಸದ್ದು ಮಾಡುತ್ತಿದೆ. ಯಾವುದೇ ಅದ್ಧೂರಿ ಕಾರ್ಯಕ್ರಮಗಳನ್ನು ಮಾಡಬಾರದೆಂದು ಸರ್ಕಾರ ಕಟ್ಟುನಿಟ್ಟಿನ ನಿಯಮವನ್ನು ಜಾರಿ ಮಾಡಿದೆ. ಶುಭ ಕಾರ್ಯಕ್ರಮಗಳಿಗೆ ಇಷ್ಟೇ ಜನ ಇರಬೇಕು ಎಂದು ಮಾರ್ಗಸೂಚಿಗಳನ್ನು ಹೊರಡಿಸಿದೆ. ಆದ್ರೆ ಕೊರೊನಾ ನಿಯಮ ಗಾಳಿಗೆ ತೂರಿ ಮದುವೆ ಸಮಾರಂಭ ನಡೆಯುತ್ತಿದ್ದು ಜೋರಾಗಿ ಡ್ಯಾನ್ಸ್ ಮಾಡುತ್ತ ಕೊರೊನಾವನ್ನು ಮರೆತು ಎಂಜಾಯ್ ಮಾಡ್ತಿದ್ದಾರೆ.

ಜುಲೈ 3 ರಂದು ಮದುವೆ ಕಾರ್ಯಕ್ರಮವಿರುವ ಹಿನ್ನೆಲೆಯಲ್ಲಿ ಕೊರೊನಾದ ನಡುವೆಯೂ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಸರ್ಕಾರದ ನಿಯಮಕ್ಕೂ ನಮಗೂ ಯಾವುದೇ ಸಂಬಂಧವಿಲ್ಲವಂತೆ ಕುಣಿದು ಕುಪ್ಪಳಿಸಿದ್ದಾರೆ. ಪಕ್ಕದಲ್ಲಿಯೇ ಪೊಲೀಸ್ ಠಾಣೆ ಇದ್ದರೂ ಅಧಿಕಾರಿಗಳು ಗಪ್ ಚುಪ್ ಆಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಗುಂಪು ಗುಂಪಾಗಿ ಸೇರಿ ಹುಡಗಿಯರು, ಯುವಕರು, ಮಕ್ಕಳು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಪೊಲೀಸರ‌ ನಿರ್ಲಕ್ಷ್ಯಕ್ಕೆ ಸುತ್ತಮುತ್ತಲಿನ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Corona Violation

ಮಕ್ಕಳ ಜೊತೆ ಡಿಜೆ ಡ್ಯಾನ್ಸ್

ಇದನ್ನೂ ಓದಿ: ಕೊರೊನಾ ಎರಡನೇ ಅಲೆಯ ನಡುವೆ ಕರಗ ಆಚರಣೆ; ಕೊವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಎಪ್ಐಆರ್

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!