Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕೊಂಚ ಕಡಿಮೆಯಾಗುತ್ತಿದ್ದಂತೆ ಮತ್ತೆ ಜನರ ನಿರ್ಲಕ್ಷ್ಯ.. ಮದುವೆ ಸಂಭ್ರಮಕ್ಕೆ ಡಿಜೆ ಹಾಕಿ ಕುಣಿದು ಕುಪ್ಪಳಿಸಿದ ಜನ

ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಸೇವಾಲಾಲ್ ನಗರದಲ್ಲಿ ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ಡಿಜೆ ಸಾಂಗ್ಸ್ ಸದ್ದು ಮಾಡುತ್ತಿದೆ.

ಕೊರೊನಾ ಕೊಂಚ ಕಡಿಮೆಯಾಗುತ್ತಿದ್ದಂತೆ ಮತ್ತೆ ಜನರ ನಿರ್ಲಕ್ಷ್ಯ.. ಮದುವೆ ಸಂಭ್ರಮಕ್ಕೆ ಡಿಜೆ ಹಾಕಿ ಕುಣಿದು ಕುಪ್ಪಳಿಸಿದ ಜನ
ಮಕ್ಕಳ ಜೊತೆ ಡಿಜೆ ಡ್ಯಾನ್ಸ್
Follow us
TV9 Web
| Updated By: ಆಯೇಷಾ ಬಾನು

Updated on: Jun 30, 2021 | 9:56 AM

ಗದಗ: ಕೊರೊನಾ 2 ನೇ ಅಲೆ ಅಬ್ಬರ ಸದ್ಯ ಕೊಂಚ ತಣ್ಣಗಾಗಿದೆ. ಆದ್ರೆ ಕೊರೊನಾ ಸಂಪೂರ್ಣ ನಾಶವಾಗಿಲ್ಲ. ಆದ್ರೆ ಇದರ ನಡುವೆ ಗದಗ ಜಿಲ್ಲೆಯಲ್ಲಿ ಜನರ ನಿರ್ಲಕ್ಷ್ಯ ಹೆಚ್ಚಾಗಿದೆ. ಕೊರೊನಾ ಎರಡನೇ ಅಲೆಯಲ್ಲಿ ಉಂಟಾಗಿದ್ದ ಸಾವು-ನೋವು ಮರೆಯಾಗುವ ಮುನ್ನವೇ ಕೊವಿಡ್ ನಿಯಮ ಉಲ್ಲಂಘನೆಯಾಗುತ್ತಿದೆ. ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಹೆಚ್ಚು ಎಂಬ ಬಗ್ಗೆಯೂ ಚಿಂತಿಸದೆ ಮಕ್ಕಳು, ಯುವತಿಯರು ಸೇರಿದಂತೆ ಅನೇಕ ಮಂದಿ ಡಿಜೆ ಸೌಂಡ್ಗೆ ಭರ್ಜರಿ ಲಂಬಾಣಿ ಸಂಪ್ರದಾಯಿಕ ಡ್ಯಾನ್ಸ್ ಮಾಡಿದ್ದಾರೆ.

ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಸೇವಾಲಾಲ್ ನಗರದಲ್ಲಿ ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ಡಿಜೆ ಸಾಂಗ್ಸ್ ಸದ್ದು ಮಾಡುತ್ತಿದೆ. ಯಾವುದೇ ಅದ್ಧೂರಿ ಕಾರ್ಯಕ್ರಮಗಳನ್ನು ಮಾಡಬಾರದೆಂದು ಸರ್ಕಾರ ಕಟ್ಟುನಿಟ್ಟಿನ ನಿಯಮವನ್ನು ಜಾರಿ ಮಾಡಿದೆ. ಶುಭ ಕಾರ್ಯಕ್ರಮಗಳಿಗೆ ಇಷ್ಟೇ ಜನ ಇರಬೇಕು ಎಂದು ಮಾರ್ಗಸೂಚಿಗಳನ್ನು ಹೊರಡಿಸಿದೆ. ಆದ್ರೆ ಕೊರೊನಾ ನಿಯಮ ಗಾಳಿಗೆ ತೂರಿ ಮದುವೆ ಸಮಾರಂಭ ನಡೆಯುತ್ತಿದ್ದು ಜೋರಾಗಿ ಡ್ಯಾನ್ಸ್ ಮಾಡುತ್ತ ಕೊರೊನಾವನ್ನು ಮರೆತು ಎಂಜಾಯ್ ಮಾಡ್ತಿದ್ದಾರೆ.

ಜುಲೈ 3 ರಂದು ಮದುವೆ ಕಾರ್ಯಕ್ರಮವಿರುವ ಹಿನ್ನೆಲೆಯಲ್ಲಿ ಕೊರೊನಾದ ನಡುವೆಯೂ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಸರ್ಕಾರದ ನಿಯಮಕ್ಕೂ ನಮಗೂ ಯಾವುದೇ ಸಂಬಂಧವಿಲ್ಲವಂತೆ ಕುಣಿದು ಕುಪ್ಪಳಿಸಿದ್ದಾರೆ. ಪಕ್ಕದಲ್ಲಿಯೇ ಪೊಲೀಸ್ ಠಾಣೆ ಇದ್ದರೂ ಅಧಿಕಾರಿಗಳು ಗಪ್ ಚುಪ್ ಆಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಗುಂಪು ಗುಂಪಾಗಿ ಸೇರಿ ಹುಡಗಿಯರು, ಯುವಕರು, ಮಕ್ಕಳು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಪೊಲೀಸರ‌ ನಿರ್ಲಕ್ಷ್ಯಕ್ಕೆ ಸುತ್ತಮುತ್ತಲಿನ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Corona Violation

ಮಕ್ಕಳ ಜೊತೆ ಡಿಜೆ ಡ್ಯಾನ್ಸ್

ಇದನ್ನೂ ಓದಿ: ಕೊರೊನಾ ಎರಡನೇ ಅಲೆಯ ನಡುವೆ ಕರಗ ಆಚರಣೆ; ಕೊವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಎಪ್ಐಆರ್

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ