AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕೊಂಚ ಕಡಿಮೆಯಾಗುತ್ತಿದ್ದಂತೆ ಮತ್ತೆ ಜನರ ನಿರ್ಲಕ್ಷ್ಯ.. ಮದುವೆ ಸಂಭ್ರಮಕ್ಕೆ ಡಿಜೆ ಹಾಕಿ ಕುಣಿದು ಕುಪ್ಪಳಿಸಿದ ಜನ

ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಸೇವಾಲಾಲ್ ನಗರದಲ್ಲಿ ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ಡಿಜೆ ಸಾಂಗ್ಸ್ ಸದ್ದು ಮಾಡುತ್ತಿದೆ.

ಕೊರೊನಾ ಕೊಂಚ ಕಡಿಮೆಯಾಗುತ್ತಿದ್ದಂತೆ ಮತ್ತೆ ಜನರ ನಿರ್ಲಕ್ಷ್ಯ.. ಮದುವೆ ಸಂಭ್ರಮಕ್ಕೆ ಡಿಜೆ ಹಾಕಿ ಕುಣಿದು ಕುಪ್ಪಳಿಸಿದ ಜನ
ಮಕ್ಕಳ ಜೊತೆ ಡಿಜೆ ಡ್ಯಾನ್ಸ್
TV9 Web
| Edited By: |

Updated on: Jun 30, 2021 | 9:56 AM

Share

ಗದಗ: ಕೊರೊನಾ 2 ನೇ ಅಲೆ ಅಬ್ಬರ ಸದ್ಯ ಕೊಂಚ ತಣ್ಣಗಾಗಿದೆ. ಆದ್ರೆ ಕೊರೊನಾ ಸಂಪೂರ್ಣ ನಾಶವಾಗಿಲ್ಲ. ಆದ್ರೆ ಇದರ ನಡುವೆ ಗದಗ ಜಿಲ್ಲೆಯಲ್ಲಿ ಜನರ ನಿರ್ಲಕ್ಷ್ಯ ಹೆಚ್ಚಾಗಿದೆ. ಕೊರೊನಾ ಎರಡನೇ ಅಲೆಯಲ್ಲಿ ಉಂಟಾಗಿದ್ದ ಸಾವು-ನೋವು ಮರೆಯಾಗುವ ಮುನ್ನವೇ ಕೊವಿಡ್ ನಿಯಮ ಉಲ್ಲಂಘನೆಯಾಗುತ್ತಿದೆ. ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಹೆಚ್ಚು ಎಂಬ ಬಗ್ಗೆಯೂ ಚಿಂತಿಸದೆ ಮಕ್ಕಳು, ಯುವತಿಯರು ಸೇರಿದಂತೆ ಅನೇಕ ಮಂದಿ ಡಿಜೆ ಸೌಂಡ್ಗೆ ಭರ್ಜರಿ ಲಂಬಾಣಿ ಸಂಪ್ರದಾಯಿಕ ಡ್ಯಾನ್ಸ್ ಮಾಡಿದ್ದಾರೆ.

ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಸೇವಾಲಾಲ್ ನಗರದಲ್ಲಿ ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ಡಿಜೆ ಸಾಂಗ್ಸ್ ಸದ್ದು ಮಾಡುತ್ತಿದೆ. ಯಾವುದೇ ಅದ್ಧೂರಿ ಕಾರ್ಯಕ್ರಮಗಳನ್ನು ಮಾಡಬಾರದೆಂದು ಸರ್ಕಾರ ಕಟ್ಟುನಿಟ್ಟಿನ ನಿಯಮವನ್ನು ಜಾರಿ ಮಾಡಿದೆ. ಶುಭ ಕಾರ್ಯಕ್ರಮಗಳಿಗೆ ಇಷ್ಟೇ ಜನ ಇರಬೇಕು ಎಂದು ಮಾರ್ಗಸೂಚಿಗಳನ್ನು ಹೊರಡಿಸಿದೆ. ಆದ್ರೆ ಕೊರೊನಾ ನಿಯಮ ಗಾಳಿಗೆ ತೂರಿ ಮದುವೆ ಸಮಾರಂಭ ನಡೆಯುತ್ತಿದ್ದು ಜೋರಾಗಿ ಡ್ಯಾನ್ಸ್ ಮಾಡುತ್ತ ಕೊರೊನಾವನ್ನು ಮರೆತು ಎಂಜಾಯ್ ಮಾಡ್ತಿದ್ದಾರೆ.

ಜುಲೈ 3 ರಂದು ಮದುವೆ ಕಾರ್ಯಕ್ರಮವಿರುವ ಹಿನ್ನೆಲೆಯಲ್ಲಿ ಕೊರೊನಾದ ನಡುವೆಯೂ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಸರ್ಕಾರದ ನಿಯಮಕ್ಕೂ ನಮಗೂ ಯಾವುದೇ ಸಂಬಂಧವಿಲ್ಲವಂತೆ ಕುಣಿದು ಕುಪ್ಪಳಿಸಿದ್ದಾರೆ. ಪಕ್ಕದಲ್ಲಿಯೇ ಪೊಲೀಸ್ ಠಾಣೆ ಇದ್ದರೂ ಅಧಿಕಾರಿಗಳು ಗಪ್ ಚುಪ್ ಆಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಗುಂಪು ಗುಂಪಾಗಿ ಸೇರಿ ಹುಡಗಿಯರು, ಯುವಕರು, ಮಕ್ಕಳು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಪೊಲೀಸರ‌ ನಿರ್ಲಕ್ಷ್ಯಕ್ಕೆ ಸುತ್ತಮುತ್ತಲಿನ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Corona Violation

ಮಕ್ಕಳ ಜೊತೆ ಡಿಜೆ ಡ್ಯಾನ್ಸ್

ಇದನ್ನೂ ಓದಿ: ಕೊರೊನಾ ಎರಡನೇ ಅಲೆಯ ನಡುವೆ ಕರಗ ಆಚರಣೆ; ಕೊವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಎಪ್ಐಆರ್

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ