AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕಾಶಿವಿಶ್ವನಾಥ ದೇವಾಲಯದ ಬೀಗ ಮುರಿದು ಶಿವಲಿಂಗ ಕಳ್ಳತನ

ಕಾಶಿವಿಶ್ವನಾಥ ದೇಗುಲ 400 ವರ್ಷಗಳ ಇತಿಹಾಸ ಹೊಂದಿದ್ದು, ಶಿವಲಿಂಗವನ್ನು ಕಾಶಿಯಿಂದ ತಂದು ಪ್ರತಿಷ್ಠಾಪಿಸಲಾಗಿತ್ತು. ರಾತ್ರಿ ವೇಳೆ ದೇವಾಲಯದ ಬೀಗ ಮುರಿದು ಗರ್ಭ ಗುಡಿಯಲ್ಲಿದ್ದ ಶಿವಲಿಂಗ ಕಳ್ಳತನವಾಗಿದ್ದು, ಬೆಳಿಗ್ಗೆ ಅರ್ಚಕರು ಪೂಜೆ ಮಾಡಲು ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ದಿನವೇ ಶಿವಲಿಂಗ ಕಳವು ಆಗಿರುವುದಕ್ಕೆ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ಮಂಡ್ಯ: ಕಾಶಿವಿಶ್ವನಾಥ ದೇವಾಲಯದ ಬೀಗ ಮುರಿದು ಶಿವಲಿಂಗ ಕಳ್ಳತನ
ಕಾಶಿವಿಶ್ವನಾಥ ದೇವಾಲಯ
sandhya thejappa
|

Updated on:Apr 13, 2021 | 11:50 AM

Share

ಮಂಡ್ಯ: ದೇವಾಲಯದ ಬೀಗ ಮುರಿದು ದುಷ್ಕರ್ಮಿಗಳು ಶಿವಲಿಂಗವನ್ನು ಕಳವು ಮಾಡಿರುವ ಘಟನೆ ತಾಲೂಕಿನ ಹಲ್ಲೇಗೆರೆ ಗ್ರಾಮದಲ್ಲಿ ನಡೆದಿದೆ. ಹಲ್ಲೇಗೆರೆ ಗ್ರಾಮದ ಹೊರ ಭಾಗದಲ್ಲಿರುವ ಕಾಶಿವಿಶ್ವನಾಥ ದೇವಾಲಯದಲ್ಲಿ ಶಿವಲಿಂಗ ಕಳ್ಳತನವಾಗಿದೆ. ಕಾಶಿವಿಶ್ವನಾಥ ದೇಗುಲ 400 ವರ್ಷಗಳ ಇತಿಹಾಸ ಹೊಂದಿದ್ದು, ಶಿವಲಿಂಗವನ್ನು ಕಾಶಿಯಿಂದ ತಂದು ಪ್ರತಿಷ್ಠಾಪಿಸಲಾಗಿತ್ತು.

ರಾತ್ರಿ ವೇಳೆ ದೇವಾಲಯದ ಬೀಗ ಮುರಿದು ಗರ್ಭ ಗುಡಿಯಲ್ಲಿದ್ದ ಶಿವಲಿಂಗ ಕಳ್ಳತನವಾಗಿದ್ದು, ಬೆಳಗ್ಗೆ ಅರ್ಚಕರು ಪೂಜೆ ಮಾಡಲು ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ದಿನವೇ ಶಿವಲಿಂಗ ಕಳವು ಆಗಿರುವುದಕ್ಕೆ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಮಲ್ಲೇಶ್ವರಸ್ವಾಮಿ ದೇಗುಲದ ಹುಂಡಿ ಒಡೆದು ಕಳ್ಳರು ಹಣ ದೋಚಿದ್ದಾರೆ. ದೇವಾಲಯದ ಮೂರು ಬಾಗಿಲಿನ ಬೀಗ ಮುರಿದು ಕಳ್ಳರು ಹಣವನ್ನು ಕದ್ದಿದ್ದಾರೆ.

ಕೆರೆ ಮಣ್ಣು ಲೂಟಿ ಆನೇಕಲ್: ಪಿಡಿಓ ಮತ್ತು ಪಂಚಾಯತಿಯ ಕೆಲ ಅಧಿಕಾರಿಗಳು ಕೆರೆ ಮಣ್ಣನ್ನು ಲೂಟಿ ಮಾಡಿ ಲಕ್ಷ ಲಕ್ಷ ಹಣವನ್ನು ಅಕ್ರಮವಾಗಿ ಸಂಪಾದಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಒಂದು ಟ್ರ್ಯಾಕ್ಟರ್ ಲೋಡ್ ಕೆರೆ ಮಣ್ಣನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದಾರೆ ಎಂದು ಅನುಮಾನ ವ್ಯಕ್ತವಾಗಿದೆ. ಆನೇಕಲ್ ತಾಲೂಕಿನ ಎರಡು ಗ್ರಾಮಗಳಾದ ನೆರಳೂರಿನ ಪಿಡಿಒ ಷರೀಫ್, ಕಾರ್ಯದರ್ಶಿ ಬಸವರಾಜ್ ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿಯ ಪಿಡಿಒ ಕೃಷ್ಣಪ್ಪ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಶ್ರೀನಿವಾಸ್​ನವರಿಂದ ವಂಚನೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದು, ಇದರ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರು ಸೂಕ್ತ ಕ್ರಮಗಳು ತೆಗೆದುಕೊಂಡಿಲ್ಲ. ಕೆರೆಯ ಸಂರಕ್ಷಣೆ ಮಾಡುವವರೇ ಈ ರೀತಿ ಮಾಡಿದರೆ ಗತಿ ಏನು ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ

ಟ್ಯಾಂಕರ್ ಮೂಲಕ ನೀರು ತುಂಬಿಸುವಾಗ ಸಂಪ್​ಗೆ ಬಿದ್ದ ಮಗು.. ಒಂದೂವರೆ ನಿಮಿಷದ ಬಳಿಕ ರಕ್ಷಣೆ

Ugadi 2021: ಯುಗಾದಿ ಹಬ್ಬದ ಮಾರನೇ ದಿನ ವರ್ಷದ ತೊಡಕು; ಮಾಂಸಾಹಾರ ಪ್ರಿಯರಿಗೆ ಭರ್ಜರಿ ಊಟ

Published On - 11:41 am, Tue, 13 April 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ