AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು; ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಟ್ಯಾಂಕ್ ಪರಿಶೀಲನೆ ವೇಳೆ ಕ್ರಿಮಿನಾಶಕ ಬೆರೆಸಿದ್ದು ಬೆಳಕಿಗೆ ಬಂದಿದ್ದು, ಬಾರಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. 50 ಸಾವಿರ ಲೀಟರ್ ಸಾಮರ್ಥ್ಯದ 40 ಅಡಿ ಎತ್ತರ ಟ್ಯಾಂಕ್​ಗೆ ಯಾರೋ ಕ್ರಿಮಿನಾಶಕ ಹಾಕಿದ್ದಾರೆ. ನಲ್ಲಿಯ ನೀರಿನಲ್ಲಿ ಘಾಟಿನ ವಾಸನೆ ಕಂಡು ತಕ್ಷಣ ಗ್ರಾಮಸ್ಥರು ಎಚ್ಚರಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು; ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ವಾಟರ್​ ಟ್ಯಾಂಕ್
Follow us
sandhya thejappa
|

Updated on: Apr 20, 2021 | 11:28 AM

ಮೈಸೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಈ ಸಂದಿಗ್ಧ ಕಾಲದಲ್ಲಿ ಎಷ್ಟು ಜವಾಬ್ದಾರಿಯಾಗಿ ಇದ್ದರೂ ಸಾಲೋದಿಲ್ಲ. ಸರ್ಕಾರ, ಸಲಹಾ ತಜ್ಞ ಸಮಿತಿ ಕೊರೊನಾ ಬಗ್ಗೆ ಎಚ್ಚರಿಕೆ ನೀಡುತ್ತಿದ್ದಾರೆ. ಲಾಕ್​ಡೌನ್​ ಎದುರಾದರೆ ಕೆಲವೆಡೆ ಕುಡಿಯುವ ನೀರಿಗೂ ದೊಡ್ಡ ಸಮಸ್ಯೆಯಾಗುತ್ತದೆ. ಈ ನಡುವೆ ಮೈಸೂರಿನಲ್ಲಿ ಕುರಹಟ್ಟಿಯಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ್ದಾರೆ. ಕಿಡಿಗೇಡಿಗಳು ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಕುರಹಟ್ಟಿ ಸಂಭವಿಸಿದೆ. ಕುರಹಟ್ಟಿಯ 40 ಅಡಿ ಎತ್ತರದ ಟ್ಯಾಂಕ್​ಗೆ ಕಿಡಿಗೇಡಿಗಳು ಕ್ರಿಮಿನಾಶಕವನ್ನು ಹಾಕಿದ್ದಾರೆ.

ಟ್ಯಾಂಕ್ ಪರಿಶೀಲನೆ ವೇಳೆ ಕ್ರಿಮಿನಾಶಕ ಬೆರೆಸಿದ್ದು ಬೆಳಕಿಗೆ ಬಂದಿದ್ದು, ಬಾರಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. 50 ಸಾವಿರ ಲೀಟರ್ ಸಾಮರ್ಥ್ಯದ 40 ಅಡಿ ಎತ್ತರ ಟ್ಯಾಂಕ್​ಗೆ ಯಾರೋ ಕ್ರಿಮಿನಾಶಕ ಹಾಕಿದ್ದಾರೆ. ನಲ್ಲಿಯ ನೀರಿನಲ್ಲಿ ಘಾಟಿನ ವಾಸನೆ ಕಂಡು ತಕ್ಷಣ ಗ್ರಾಮಸ್ಥರು ಎಚ್ಚರಿಸಿಕೊಂಡಿದ್ದಾರೆ. ನಂತರ ನೀರಿನ ಟ್ಯಾಂಕರ್​ನ ಪರಿಶೀಲನೆ ಮಾಡಿದಾಗ ನೀರಿನಲ್ಲಿ ಕ್ರಿಮಿನಾಶಕ ಬೆರೆಸಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ಪ್ರಕರಣ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ಫ್ಯಾಕ್ಟರಿ ತ್ಯಾಜ್ಯದಿಂದ ನೀರು ಕಲುಷಿತ; ಲಕ್ಷಾಂತರ ಮೀನುಗಳ ಮಾರಣಹೋಮ

ಬೆಳಗಾವಿಯಲ್ಲಿ ಮಂಗಳಾ ಅಂಗಡಿಗೆ ಪ್ರಚಾರ ವೇಳೆ ಮುದ್ದು ಹುಡುಗಿಯಿಂದ ಹೂ ಕೊಟ್ಟು ವಿಷ್‌

(perpetrators poisoned the drinking water at Mysuru)

ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್