AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು; ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಟ್ಯಾಂಕ್ ಪರಿಶೀಲನೆ ವೇಳೆ ಕ್ರಿಮಿನಾಶಕ ಬೆರೆಸಿದ್ದು ಬೆಳಕಿಗೆ ಬಂದಿದ್ದು, ಬಾರಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. 50 ಸಾವಿರ ಲೀಟರ್ ಸಾಮರ್ಥ್ಯದ 40 ಅಡಿ ಎತ್ತರ ಟ್ಯಾಂಕ್​ಗೆ ಯಾರೋ ಕ್ರಿಮಿನಾಶಕ ಹಾಕಿದ್ದಾರೆ. ನಲ್ಲಿಯ ನೀರಿನಲ್ಲಿ ಘಾಟಿನ ವಾಸನೆ ಕಂಡು ತಕ್ಷಣ ಗ್ರಾಮಸ್ಥರು ಎಚ್ಚರಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಕಿಡಿಗೇಡಿಗಳು; ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ವಾಟರ್​ ಟ್ಯಾಂಕ್
sandhya thejappa
sandhya thejappa|

Updated on: Apr 20, 2021 | 11:28 AM

Share

ಮೈಸೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಈ ಸಂದಿಗ್ಧ ಕಾಲದಲ್ಲಿ ಎಷ್ಟು ಜವಾಬ್ದಾರಿಯಾಗಿ ಇದ್ದರೂ ಸಾಲೋದಿಲ್ಲ. ಸರ್ಕಾರ, ಸಲಹಾ ತಜ್ಞ ಸಮಿತಿ ಕೊರೊನಾ ಬಗ್ಗೆ ಎಚ್ಚರಿಕೆ ನೀಡುತ್ತಿದ್ದಾರೆ. ಲಾಕ್​ಡೌನ್​ ಎದುರಾದರೆ ಕೆಲವೆಡೆ ಕುಡಿಯುವ ನೀರಿಗೂ ದೊಡ್ಡ ಸಮಸ್ಯೆಯಾಗುತ್ತದೆ. ಈ ನಡುವೆ ಮೈಸೂರಿನಲ್ಲಿ ಕುರಹಟ್ಟಿಯಲ್ಲಿ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ್ದಾರೆ. ಕಿಡಿಗೇಡಿಗಳು ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಕುರಹಟ್ಟಿ ಸಂಭವಿಸಿದೆ. ಕುರಹಟ್ಟಿಯ 40 ಅಡಿ ಎತ್ತರದ ಟ್ಯಾಂಕ್​ಗೆ ಕಿಡಿಗೇಡಿಗಳು ಕ್ರಿಮಿನಾಶಕವನ್ನು ಹಾಕಿದ್ದಾರೆ.

ಟ್ಯಾಂಕ್ ಪರಿಶೀಲನೆ ವೇಳೆ ಕ್ರಿಮಿನಾಶಕ ಬೆರೆಸಿದ್ದು ಬೆಳಕಿಗೆ ಬಂದಿದ್ದು, ಬಾರಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. 50 ಸಾವಿರ ಲೀಟರ್ ಸಾಮರ್ಥ್ಯದ 40 ಅಡಿ ಎತ್ತರ ಟ್ಯಾಂಕ್​ಗೆ ಯಾರೋ ಕ್ರಿಮಿನಾಶಕ ಹಾಕಿದ್ದಾರೆ. ನಲ್ಲಿಯ ನೀರಿನಲ್ಲಿ ಘಾಟಿನ ವಾಸನೆ ಕಂಡು ತಕ್ಷಣ ಗ್ರಾಮಸ್ಥರು ಎಚ್ಚರಿಸಿಕೊಂಡಿದ್ದಾರೆ. ನಂತರ ನೀರಿನ ಟ್ಯಾಂಕರ್​ನ ಪರಿಶೀಲನೆ ಮಾಡಿದಾಗ ನೀರಿನಲ್ಲಿ ಕ್ರಿಮಿನಾಶಕ ಬೆರೆಸಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ಪ್ರಕರಣ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ಫ್ಯಾಕ್ಟರಿ ತ್ಯಾಜ್ಯದಿಂದ ನೀರು ಕಲುಷಿತ; ಲಕ್ಷಾಂತರ ಮೀನುಗಳ ಮಾರಣಹೋಮ

ಬೆಳಗಾವಿಯಲ್ಲಿ ಮಂಗಳಾ ಅಂಗಡಿಗೆ ಪ್ರಚಾರ ವೇಳೆ ಮುದ್ದು ಹುಡುಗಿಯಿಂದ ಹೂ ಕೊಟ್ಟು ವಿಷ್‌

(perpetrators poisoned the drinking water at Mysuru)

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್