AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯೊರ್ವನಿಗೆ ಪಿಎಸ್​​ಐ ನಿಂದ ಕಿರುಕುಳ ಆರೋಪ; ಮನನೊಂದು ಠಾಣೆ ಮುಂದೆಯೇ ಪೆಟ್ರೋಲ್​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಆತ ತನ್ನ ಮಾವನ ಸಮಸ್ಯೆ ಪರಿಹಾರ ಮಾಡಿಸಲೆಂದು ಪೊಲೀಸ್ ಠಾಣೆಗೆ ಹೋಗಿದ್ದ, ಸಮಸ್ಯೆಗೆ ಪರಿಹಾರ ಕೊಡಬೇಕಿದ್ದ ಪೊಲೀಸರು, ಸಮಸ್ಯೆ ಹೇಳಲು ಬಂದವನ ಮೇಲೆಯೇ ದೌರ್ಜನ್ಯ ಮಾಡಿದ್ದಾರೆ. ನೊಂದ ವ್ಯಕ್ತಿ ಠಾಣೆ ಮುಂದೆಯೇ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ವ್ಯಕ್ತಿಯೊರ್ವನಿಗೆ ಪಿಎಸ್​​ಐ ನಿಂದ ಕಿರುಕುಳ ಆರೋಪ; ಮನನೊಂದು ಠಾಣೆ ಮುಂದೆಯೇ ಪೆಟ್ರೋಲ್​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಪಿಎಸ್​ಐ ಬಸವರಾಜ್​​
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 14, 2024 | 9:54 PM

Share

ಉತ್ತರ ಕನ್ನಡ, ಜೂ.14: ಜಿಲ್ಲೆಯ ಜೋಯಿಡಾ(Joida) ತಾಲೂಕಿನ ರಾಮನಗರದ ಹನುಮಾನ ಗಲ್ಲಿಯ ನಿವಾಸಿ ಆಗಿರುವ ಭಾಸ್ಕರ್​ ಬೋಂಡೆಲ್ಕರ್ ಮತ್ತು ರಾಮನಗರ ಪಿಎಸ್​ಐ ಬಸವರಾಜ್ ನಡುವೆ ಕಳೆದ ಐದಾರು ತಿಂಗಳಿನಿಂದ ವೈಮನಸ್ಸಿತ್ತು. ಆದ್ರೆ, ಕೆಲ ದಿನಗಳಿಂದ ಪಿಎಸ್​ಐನಿಂದ ದೂರ ಇದ್ದ ಭಾಸ್ಕರ್​. ತನ್ನ ಮಾವ ಗಣಪತಿ ಎಂಬುವವರು ಪ್ಲಾಟ ವಿಚಾರದಲ್ಲಿ ನೋಟಿಸ್ ಕೊಟ್ಟಿದಕ್ಕೆ, ನಿನ್ನೆ(ಜೂ.13) ರಾತ್ರಿ ರಾಮನಗರ ಪೊಲೀಸ್ ಠಾಣೆಗೆ ಬಂದಿದ್ದ. ಈ ಸಂದರ್ಭದಲ್ಲಿ ಪಿಎಸ್​ಐ ಬಸವರಾಜ್ ನಡುವೆ ಮಾತಿಗೆ ಮಾತು ಬೆಳೆದಿದೆ. ಆಗ ಪಿಎಸ್ಐ ಮತ್ತು ಠಾಣೆಯ ಇನ್ನಿತರ ಸಿಬ್ಬಂಧಿಗಳು ಸೇರಿ ಈತನ ಬಳಿಯ ಮೊಬೈಲ್ ಕಸಿದುಕೊಂಡು ದೌರ್ಜನ್ಯ ಮಾಡಿದ್ದಾರೆಂದು ಭಾಸ್ಕರ್​ ಆರೋಪಿಸಿದ್ದಾರೆ.

ಮೈ ಮೆಲೆ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾರೂ ಕೂಡ ಸ್ಪಂದಿಸಿಲ್ಲ. ಇನ್ನು ತನ್ನ ಸಮಸ್ಯೆಗೆ ನ್ಯಾಯ ಕೊಡಬೇಕಿದ್ದ ಪೊಲೀಸರೆ ತನ್ನ ಮೇಲೆ ದೌರ್ಜನ್ಯ ಮಾಡುತ್ತಿರುವುದಕ್ಕೆ ನೊಂದ ಭಾಸ್ಕರ್, ಮೈ ಮೆಲೆ ಪೆಟ್ರೊಲ್ ಸುರಿದುಕೊಂಡು ಪೊಲೀಸ್ ಠಾಣೆ ಮುಂದೆ ಆತ್ಮಹತ್ಯೆಗೆ ಯತ್ನಸಿದ್ದ. ಈ ಸಂದರ್ಭದಲ್ಲಿ ಕೂಡಲೆ ಎಚ್ಚೆತ್ತ ಪೊಲೀಸ್ರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ತಿಳಿಸಿದ್ದಾನೆ.

ಇದನ್ನೂ ಓದಿ:ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮನನೊಂದು ಮಗಳ ಜೊತೆ ಆತ್ಮಹತ್ಯೆಗೆ ಶರಣು

ಇನ್ನು ಭಾಸ್ಕರ್​ ಮಾಡಿರುವ ಆರೋಪವನ್ನು ತಳ್ಳಿ ಹಾಕಿರುವ ಎಎಸ್​ಪಿ ಜಯಕುಮಾರ್​, ‘ಭಾಸ್ಕರ್ ನಿನ್ನೆ ರಾತ್ರಿ ಮಧ್ಯಪಾನ ಮಾಡಿ ಠಾಣೆಗೆ ಬಂದು ತನ್ನ ಮಾವನಿಗೆ ಯಾಕೆ ನೋಟಿಸ್ ಕೊಟ್ಟಿದ್ದಿರಾ ಎಂದು ಜೋರಾಗಿ ಪ್ರಶ್ನಿಸುತ್ತಾನೆ. ನೋಟಿಸ್ ಬಗ್ಗೆ ಸರಿಯಾದ ಮಾಹಿತಿ ಕೊಟ್ರು ಸಹಿತ, ಪೊಲೀಸ್ ಠಾಣೆಯಲ್ಲಿ ದುರ್ವತನೆ ಮಾಡುತ್ತಿದ್ದ. ಈ ಸಂದರ್ಭದಲ್ಲಿ ಆತ ಅತಿಯಾಗಿ ಮಧ್ಯಪಾನ ಮಾಡಿರುವುದು ಗೊತ್ತಾಗಿ ಆತನ ಬೈಕ್ ಕೀಯನ್ನು ವಶಕ್ಕೆ ಪಡಿದಿದ್ದಾರೆ. ನೀನು ಮಧ್ಯಪಾನ ಮಾಡಿದಿಯಾ ಬೇರೆ ಯಾರಿಗಾದರೂ ಕರೆಸಿ ಗಾಡಿ ತೊಗೊಂಡ ಹೋಗು ಎಂದು ಹೇಳಿದಕ್ಕೆ ಕೋಪಗೊಂಡ ಭಾಸ್ಕರ್​ ಮೈ ಮೇಲೆ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ನಮ್ಮ ಸಿಬ್ಬಂಧಿಗಳು ಆತನನ್ನು ರಕ್ಷಿಸಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಜಯಕುಮಾರ ಹೇಳಿದ್ದಾರೆ.

ಒಟ್ಟಾರೆಯಾಗಿ ಕೋಪದ ಕೈಯಲ್ಲಿ ಬುದ್ದಿ ಕೊಟ್ಟ ಭಾಸ್ಕರ್​ ತನ್ನ ಜೀವ ಕಳೆದುಕೊಳ್ಳಲು ಮುಂದಾಗಿದ್ದ. ಸದ್ಯ ಪೊಲೀಸ್ರ ಮುಂಜಾಗೃತೆಯಿಂದ ಪ್ರಾಣ ಉಳಿಸಿಕೊಂಡಿದ್ದಾನೆ. ಆದರೆ, ದೇಹ ಸುಟ್ಟ ಹಿನ್ನೆಲೆ ಬೆಳಗಾವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ