AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡಿ ಬೇಕೆಂದು ವ್ಯಕ್ತಿ ರಂಪಾಟ; ವಿಡಿಯೋ ನೋಡಿ

ಬೀಡಿ ಸೇದದಿದ್ದರಿಂದ ಮಾನಸಿಕ ಅಸ್ವಸ್ಥನಂತೆ ವರ್ತನೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಹೀಗೆ ಅಸ್ವಸ್ಥನಂತೆ ವರ್ತಿಸಿದ ಅಪ್ಪನನ್ನು ಸಮಾಧಾನ ಪಡಿಸಲು ಮಗ ಪರದಾಡಿದ್ದಾನೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡಿ ಬೇಕೆಂದು ವ್ಯಕ್ತಿ ರಂಪಾಟ; ವಿಡಿಯೋ ನೋಡಿ
ಏರ್​ಪೋರ್ಟ್​ನಲ್ಲಿ ಬೀಡಿಗಾಗಿ ರಂಪಾಟ
TV9 Web
| Edited By: |

Updated on: Jun 16, 2021 | 5:09 PM

Share

ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡಿಗಾಗಿ ವ್ಯಕ್ತಿ ರಂಪಾಟ ಮಾಡಿದ ಘಟನೆ ನಡೆದಿದೆ. ಜೈಪುರದಿಂದ ಕುಟುಂಬಸ್ಥರ ಜೊತೆ ಕೆಐಎಬಿಗೆ ಬಂದಿದ್ದ ವ್ಯಕ್ತಿ ಏರ್​ಪೋರ್ಟ್​ ಟರ್ಮಿನಲ್​ನಲ್ಲಿ ಬೀಡಿಗಾಗಿ ರಂಪಾಟ ಮಾಡಿದ್ದಾನೆ. ಅಷ್ಟೇ ಅಲ್ಲದೆ, ಹೆಂಡತಿ, ಮಗನನ್ನು ಕೂಡ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಆತ ಬೀಡಿ ಸೇದದಿದ್ದರಿಂದ ಮಾನಸಿಕ ಅಸ್ವಸ್ಥನಂತೆ ವರ್ತನೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಹೀಗೆ ಅಸ್ವಸ್ಥನಂತೆ ವರ್ತಿಸಿದ ಅಪ್ಪನನ್ನು ಸಮಾಧಾನ ಪಡಿಸಲು ಮಗ ಪರದಾಡಿದ್ದಾನೆ. ವಿಮಾನದಲ್ಲಿ ಬೀಡಿ, ಸಿಗರೇಟ್​ ಸೇದಲು ಅವಕಾಶವಿಲ್ಲ. ಬಳಿಕ, ಸಿಗರೇಟ್​ ಕೊಟ್ಟರೂ ಸೇದದೆ ಬೀಡಿ ನೀಡುವಂತೆ ಪಟ್ಟು ಹಿಡಿದಿದ್ದಾನೆ. ಕಳೆದ 3 ಗಂಟೆಯಿಂದ ಬೀಡಿ ಸೇದಿಲ್ಲವೆಂದು ವ್ಯಕ್ತಿ ರಂಪಾಟ ಮಾಡಿರುವುದರಿಂದ ಕುಟುಂಬಸ್ಥರು ಪೇಚಿಗೆ ಸಿಲುಕಿದ್ದಾರೆ.

ಬೀಡಿ, ಸಿಗರೇಟ್, ತಂಬಾಕು ಅಥವಾ ಮದ್ಯಪಾನ ಯಾವುದೇ ಇರಲಿ. ಅತಿಯಾದ ಚಟ ಮನುಷ್ಯನಿಗೆ ಅಂಟಿಕೊಂಡರೆ ಬಳಿಕ ಬಿಡಿಸುವುದು ಅಥವಾ ಬಿಡುವುದು ಕಷ್ಟವೇ ಆಗುತ್ತದೆ. ಒಂದೇ ಸಲಕ್ಕೆ ಎಲ್ಲವನ್ನೂ ಬಿಟ್ಟಿರಲು ಆಗುವುದಿಲ್ಲ. ಅಂಥಾ ಸಮಯದಲ್ಲಿ ವೈದ್ಯರ ಅಥವಾ ಮಾನಸಿಕ ರೋಗ ತಜ್ಞರನ್ನು ಸಂಪರ್ಕಿಸಿ ಸೂಕ್ತ ಸಲಹೆ ಪಡೆದುಕೊಳ್ಳುವುದು ಅವಶ್ಯವಾಗುತ್ತದೆ.

ಸಿಗರೇಟ್ ಬಿಡಲು ಇಚ್ಛಿಸುವವರು ಕೆಲವು ಸುಲಭ ಮಾರ್ಗಗಳನ್ನು ಅನುಸರಿಸಬಹುದು. ದಿನನಿತ್ಯದ ಜೀವನದಲ್ಲಿ ಅವನ್ನು ಅಳವಡಿಸಿಕೊಂಡು ದುಶ್ಚಟಗಳಿಂದ ಬಿಡುಗಡೆ ಹೊಂದಬಹುದು. ಆ ಬಗ್ಗೆ ವಿವರ ಈ ಕೆಳಗಿನ ಬರಹದಲ್ಲಿ ನೀಡಲಾಗಿದೆ.

ಇದನ್ನೂ ಓದಿ: World No Tobacco Day 2021: ಸಿಗರೇಟ್ ಸೇವನೆ ಬಿಡಬೇಕು ಎಂದು ಯೋಚಿಸುತ್ತಿದ್ದೀರಾ? ಈ ಮಾರ್ಗಗಳನ್ನು ಅನುಸರಿಸಿ

World No Tobacco Day: ಅಜಯ್​ ದೇವಗನ್​, ಹೃತಿಕ್​, ಸಲ್ಮಾನ್, ಸೈಫ್​​ ಸಿಗರೇಟ್ ಚಟ​ ಬಿಡಲು ಕಾರಣ ಆಗಿದ್ದು ಏನು?

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ