Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ ದರನೇ ಏರುತ್ತಿದೆ ಇಂಧನ ದರ.. 90ರ ಗಡಿಯತ್ತ ಪೆಟ್ರೋಲ್ ಬೆಲೆ ನಾಗಾಲೋಟ; ಗ್ರಾಹಕ ಹೈರಾಣ

ಕಳೆದ ವಾರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಪೆಟ್ರೋಲ್ ಬೆಲೆ ಇಂದು 27 ಪೈಸೆ ಏರಿಕೆಯಾಗಿದೆ. ಡೀಸೆಲ್ ಬೆಲೆ 25 ಪೈಸೆ ಹೆಚ್ಚಳವಾಗಿದೆ.

ದರ ದರನೇ ಏರುತ್ತಿದೆ ಇಂಧನ ದರ.. 90ರ ಗಡಿಯತ್ತ ಪೆಟ್ರೋಲ್ ಬೆಲೆ ನಾಗಾಲೋಟ; ಗ್ರಾಹಕ ಹೈರಾಣ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 06, 2022 | 8:38 PM

ಬೆಂಗಳೂರು: ಏರುತ್ತಲೇ ಇರುವ ಇಂಧನ ಬೆಲೆಯಿಂದಾಗಿ ಜನಸಾಮಾನ್ಯರ ಬದುಕಿಗೆ ಬರೆ ಎಳೆದಂತಾಗಿದೆ. ಕಳೆದ ನವೆಂಬರ್​ನಿಂದ ಏರಿಕೆಯತ್ತ ಮುಖಮಾಡಿರುವ ಪೆಟ್ರೋಲ್ ಡೀಸೆಲ್ ದರ ಇಂದು ಮತ್ತೆ ಹೆಚ್ಚಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ ಇಂದು (ಜ.27) 27 ಪೈಸೆ ಏರಿಕೆಯಾಗಿದೆ.

ಡೀಸೆಲ್, ಪ್ರತಿ ಲೀಟರ್ ಮೇಲೆ 25 ಪೈಸೆ ಹೆಚ್ಚಳವಾಗಿದೆ. ಕಳೆದ ವಾರದಿಂದ ಮತ್ತೆ ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಇಂದು ಪೆಟ್ರೋಲ್ ಬೆಲೆ 90ರ ಗಡಿಯತ್ತ ಬಂದು ನಿಂತಿದೆ. ರಾಜ್ಯ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ 89.21 ರೂಪಾಯಿ ಆಗಿದ್ದರೆ, ಡೀಸೆಲ್ ಬೆಲೆ 81.10 ರೂಪಾಯಿಗಳಾಗಿದೆ.

ವರ್ಷದ ಆರಂಭದ ದಿನ, ಜನವರಿ 1ರಂದು ಡೀಸೆಲ್ ಬೆಲೆ 78.31 ಆಗಿತ್ತು ಹಾಗೂ ಜನವರಿ 1ರಂದು ಪೆಟ್ರೋಲ್ ದರ 86.51 ಆಗಿತ್ತು. ಇದೀಗ ತಿಂಗಳ ಅಂತ್ಯದ ವೇಳೆ ಇಂಧನ ದರ ತಲಾ 3 ರೂಪಾಯಿಗಳಷ್ಟು ಹೆಚ್ಚಳವಾಗಿದೆ. ಒಂದು ವಾರದಿಂದ ಏರಿಕೆಯತ್ತ ಮುಖಮಾಡಿರುವ ಇಂಧನ ದರ, ಜನವರಿ ಮುಕ್ತಾಯವಾಗುವ ವೇಳೆ 90 ರೂಪಾಯಿ ಗಡಿ ದಾಟುವ ಸೂಚನೆ ಲಭ್ಯವಾಗಿದೆ. ಕೆಲವು ದಿನಗಳ ಇಂಧನ ಬೆಲೆ ಏರಿಕೆಯ ಚಿತ್ರಣವನ್ನು ಗಮನಿಸಿದರೆ, ಮೂರು ದಿನಕ್ಕೆ ಒಮ್ಮೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿರುವುದು ಕಾಣುತ್ತಿದೆ.

ಕೊರೊನಾ, ಲಾಕ್​ಡೌನ್ ಕಾರಣದಿಂದ ಜನಜೀವನ ಅತಂತ್ರವಾಗಿತ್ತು. ಇದೀಗ ಹೊಸ ವರ್ಷದಲ್ಲಿ, ಹೊಸ ಜೀವನ ಸುಸೂತ್ರವಾಗಿ ನಡೆಯುವ ಆಶಾಭಾವನೆ ವ್ಯಕ್ತವಾಗಿತ್ತು. ಆದರೆ, ತೈಲಬೆಲೆ ಏರಿಕೆ ಜನಸಾಮಾನ್ಯರನ್ನು ಆರ್ಥಿಕ ಸಂಕಷ್ಟಕ್ಕೆ ಈಡು ಮಾಡಿದೆ. ನಾವು ಮಾರುಕಟ್ಟೆಯಲ್ಲಿ ನೀಡುವ ತೈಲಬೆಲೆಯ 60 ಪ್ರತಿಷತ ದರವು ತೆರಿಗೆ ಮೊತ್ತವಾಗಿರುತ್ತದೆ.

ಇದೀಗ ಅಧಿಕ ಮಟ್ಟದಲ್ಲಿ ಏರಿಕೆಯಾಗುತ್ತಿರುವ ತೈಲಬೆಲೆಯ ಕಾರಣದಿಂದ, ತೆರಿಗೆ ಮೊತ್ತವನ್ನು ಖಡಿತಗೊಳಿಸಬೇಕು ಎಂಬ ಆಗ್ರಹ ಕೂಡ ಕೇಳಿಬಂದಿದೆ. ಬೆಂಗಳೂರು ಮಾತ್ರವಲ್ಲದೆ, ದೇಶದ ಮುಖ್ಯ ನಗರಗಳಾದ ದೆಹಲಿ, ಮುಂಬೈ ಮುಂತಾದೆಡೆ ಪೆಟ್ರೋಲ್ ದರ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಪೆಟ್ರೋಲ್ ದರ ಈಗಾಗಲೇ 90ರ ಗಡಿ ದಾಟಿದೆ.

ಪೆಟ್ರೋಲ್, ಡೀಸೆಲ್ ದರ ಏರಿಕೆಯ ವಿಚಾರವಾಗಿ ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಕಳೆದ ವಾರ ಹೇಳಿಕೆ ನೀಡಿದ್ದರು. ತೈಲ ಉತ್ಪಾದಿಸುವ ದೇಶಗಳು, ಕೊವಿಡ್-19 ಕಾರಣದಿಂದ ತೈಲ ತಯಾರಿಕೆಯ ಪ್ರಮಾಣವನ್ನು ಮೊಟಕುಗೊಳಿಸಿವೆ. ಕಡಿಮೆ ಇಂಧನ ಉತ್ಪಾದನೆ, ಇಂಧನ ಬೇಡಿಕೆ ಹಾಗೂ ಪೂರೈಕೆಯ ಅಸಮತೋಲನದ ಕಾರಣದಿಂದ ತೈಲ ಬೆಲೆ ಏರಿಕೆಯಾಗುತ್ತಿದೆ ಎಂದು ಬೆಲೆ ಏರಿಕೆಯ ಬಗ್ಗೆ ಕಾರಣ ನೀಡಿದ್ದರು.

ಸಾಂದರ್ಭಿಕ ಚಿತ್ರ

ಜನರಿಗೆ ಬರೆ.. ಆದರೆ ಪೆಟ್ರೋಲ್, ಡೀಸೆಲ್ ಮಾರಾಟದಿಂದ ಕೇಂದ್ರಕ್ಕೆ ಭರ್ಜರಿ ಲಾಭ!

Published On - 12:09 pm, Wed, 27 January 21

ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ