AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ಪ್ರತಿಭಟನೆ: 6 ಗಂಟೆ ಸ್ತಬ್ಧವಾದ ಒಡಿಶಾ!

ದೇಶಾದ್ಯಂತ ಪೆಟ್ರೋಲ್​, ಡೀಸೆಲ್ ಬೆಲೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಒಡಿಶಾದಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ. ಈ ಕುರಿತಂತೆ ರಾಹುಲ್ ಗಾಂಧಿ ಟ್ವೀಟ್​ ಮಾಡಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ಪ್ರತಿಭಟನೆ: 6 ಗಂಟೆ ಸ್ತಬ್ಧವಾದ ಒಡಿಶಾ!
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Feb 15, 2021 | 4:37 PM

Share

ಬೆಂಗಳೂರು: ದಿನೇ ದಿನೇ ಪೆಟ್ರೋಲ್​ ಬೆಲೆ ಜಿಗಿಯುತ್ತಿದೆ. ಇಂದು ಸತತ 7ನೇ ಬಾರಿಯೂ ದರ ಏರಿಕೆಯತ್ತ ಸಾಗಿದೆ. ಇಂದು ಲೀಟರ್ ಪೆಟ್ರೋಲ್ ಬೆಲೆ 26 ಪೈಸೆ ಏರಿಕೆಯಾಗಿದ್ದು, ಲೀಟರ್ ಡೀಸೆಲ್ ಬೆಲೆ 29 ಪೈಸೆಯಷ್ಟು ಏರಿಕೆಯಾಗಿದೆ. ಈ ಕುರಿತಂತೆ ಕಾಂಗ್ರೆಸ್ ಕಾರ್ಯಕರ್ತರು ಧರಣಿ ಕುಳಿತಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಪೆಟ್ರೋಲ್ ಬೆಲೆ ಲೀ.ಗೆ 89.69 ರೂ. ಹಾಗೂ ಡೀಸೆಲ್‌ ಬೆಲೆ ಪ್ರತಿ ಲೀ.ಗೆ 86.47 ರೂ. ಆಗಿದೆ. ಒಡಿಶಾದಲ್ಲಿ 6 ಗಂಟೆಗಳ ಕಾಲ ಬಂದ್ ಮಾಡಿದ್ದಾರೆ. ಇದಲ್ಲದೆ, ರೈಲು ತಡೆ ಕೂಡ ನಡೆದಿದೆ. 

ಪೆಟ್ರೋಲ್, ಡೀಸೆಲ್, ಗ್ಯಾಸ್​ ದರ ಏರಿಕೆಯ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕಾಂಗ್ರೆಸ್​ ನಾಯಕ ರಾಹುಲ್​ಗಾಂಧಿ ಟ್ವೀಟ್​ ಮಾಡಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆಯ ಕುರಿತು ಮೈಸೂರಿನಲ್ಲೂ ಆಕ್ರೋಶ: ಪೆಟ್ರೋಲ್​ ಬೆಲೆ ಏರಿಕೆ ಸಂಬಂಧಿಸಿ  ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ವಾಹನ ಸವಾರರು ಕಿಡಿಕಾರುತ್ತಿದ್ದಾರೆ. ಪೆಟ್ರೋಲ್ ವಾಹನ ಬಿಟ್ಟು ಎಲೆಕ್ಟ್ರಿಕಲ್ ವಾಹನ ಖರೀದಿಸೋಣ ಎಂದರೆ ಅದರ ಬೆಲೆಯನ್ನೂ ಜಾಸ್ತಿ ಮಾಡಿದ್ದಾರೆ. ಅಚ್ಛೆ ದಿನ್, ಅಚ್ಛೆ ದಿನ್ ಅನ್ನೋದು ಇದೇನಾ ಎಂದು ವಾಹನ ಸವಾರರು ಪ್ರಶ್ನೆ ಒಡ್ಡಿದ್ದಾರೆ.

ಬೆಳಗಾವಿಯಲ್ಲಿ ಪ್ರತಿಭಟನೆ : ಪೆಟ್ರೋಲ್, ಡೀಸೆಲ್ ದರ ಏರಿಕೆ ಬಿಸಿ ಬೆಳಗಾವಿ ವಾಹನ ಸವಾರರ ಆಕ್ರೋಶಕ್ಕೂ ಕಾರಣವಾಗಿದೆ. ಇಂದಿನ ಪೆಟ್ರೋಲ್ ದರ  ಲೀಟರ್​ಗೆ 91.81 ರೂ ಹಾಗೂ ಡೀಸೆಲ್ ದರ ಲೀಟರ್​ಗೆ 84 ರೂ. ಆಗಿದೆ.  ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡಿಸೇಲ್ ದರ ಇಳಿಸುವುದಾಗಿ ಹೇಳಿ ಇದೀಗ ಏರಿಕೆ ಮಾಡಿದ್ದೀರಿ, ಕೂಡಲೇ ಪೆಟ್ರೋಲ್ ಬೆಲೆ ಕಡಿಮೆ ಮಾಡಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್​ ದರ ಏರಿಕೆ ಖಂಡಿಸಿ ಫೆಬ್ರವರಿ 26ರಂದು ದೇಶಾದ್ಯಂತ ಧರಣಿ; ಲಾರಿ ಮಾಲೀಕರ ಬೆಂಬಲ

ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಟಿವಿ9 ಜೊತೆ ಮಾತನಾಡಿ, ಫೆ.26ರಂದು ಹೆದ್ದಾರಿಗಳಲ್ಲಿ ಲಾರಿ ನಿಲ್ಲಿಸಿ ಪ್ರತಿಭಟನೆ ಕೈಗೊಳ್ಳಲು ಬೆಂಬಲ ವ್ಯಕ್ತವಾಗುತ್ತಿದೆ. ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ ನಡೆಸುವ ಆಲೋಚನೆ ಇದೆ. ವ್ಯಾಪಾರಿಗಳ ಪ್ರತಿಭಟನೆಗೆ ಲಾರಿ ಮಾಲೀಕರ ಸಂಘದ ಬೆಂಬಲವಿದೆ. ಬೆಳಗ್ಗೆಯಿಂದ ಸಂಜೆವರೆಗೆ ಲಾರಿ ನಿಲ್ಲಿಸಿ ಪ್ರತಿಭಟನೆ ನಡೆಸ್ತೇವೆ ಎಂದಿದ್ದಾರೆ.

Published On - 4:37 pm, Mon, 15 February 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ