Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price In Karnataka: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಶತಕ ಬಾರಿಸಿ ಮುನ್ನುಗ್ಗಿದ ಪೆಟ್ರೋಲ್​ ಬೆಲೆ! ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು?

Petrol Diesel Rate Today: ಉತ್ತರ ಕನ್ನಡದ ಶಿರಸಿಯಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 100.22 ರೂಪಾಯಿ ನಿಗದಿ ಮಾಡಲಾಗಿದೆ. ಬಳ್ಳಾರಿಯಲ್ಲಿ ಲೀಟರ್​ ಪೆಟ್ರೋಲ್​ ದರ 100.08 ರೂಪಾಯಿಗೆ ಏರಿಕೆಯಾಗಿದೆ.

Petrol Price In Karnataka: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಶತಕ ಬಾರಿಸಿ ಮುನ್ನುಗ್ಗಿದ ಪೆಟ್ರೋಲ್​ ಬೆಲೆ! ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು?
ಪೆಟ್ರೋಲ್ ಬೆಲೆ ಏರಿಕೆ
Follow us
TV9 Web
| Updated By: Digi Tech Desk

Updated on:Jun 07, 2021 | 10:06 AM

ಈಗಾಗಲೇ ಕೊರೊನಾ ಮಹಾಮಾರಿಯ ಆರ್ಭಟದಿಂದ ಜನರೆಲ್ಲಾ ನಲುಗಿ ಹೋಗಿದ್ದಾರೆ. ಈ ನಡುವೆ ಸದ್ದಿಲ್ಲದೇ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆಯತ್ತ ಸಾಗುತ್ತಲೇ ಇದೆ. ಕೊರೊನಾ ಸಂಕಷ್ಟದ ನಡುವೆಯೂ ಇಂಧನ ದರ ಏರಿಕೆ ಕಂಡು ಗಗನಕ್ಕೇರಿರುವುದು ಜನರಿಗೆ ಗಾಯದ ಮೇಲೆ ಬರೆ ಬಿದ್ದಂತಾಗಿದೆ. ಕರ್ನಾಟಕದ ಜಿಲ್ಲೆಗಳಾದ ಚಿಕ್ಕಮಗಳೂರು, ಬಳ್ಳಾರಿ, ಉತ್ತರಕನ್ನಡದ ಶಿರಸಿ ಸೇರಿ ಮಲೆನಾಡು ಭಾಗಗಳಲ್ಲಿ ಲೀಟರ್​ ಪೆಟ್ರೋಲ್​ ದರ 100ರ ಗಡಿ ದಾಟಿದೆ.

ಉತ್ತರಕನ್ನಡದ ಶಿರಸಿಯಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 100.22 ರೂಪಾಯಿ ನಿಗದಿ ಮಾಡಲಾಗಿದೆ. ಬಳ್ಳಾರಿಯಲ್ಲಿ ಲೀಟರ್​ ಪೆಟ್ರೋಲ್​ ದರ 100.08 ರೂಪಾಯಿಗೆ ಏರಿಕೆಯಾಗಿದೆ. ಇನ್ನಿತರ ಜಿಲ್ಲೆಗಳು ಕೂಡಾ ಶತಕ ಬಾರಿಸುವಲ್ಲಿ ಗಡಿಯ ಸಮೀಪದಲ್ಲಿಯೇ ನಿಂತಿದೆ. ಇದೇ ರೀತಿ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆಯತ್ತ ಸಾಗಿದರೆ ಅವುಗಳೂ ಕೂಡಾ ಶತಕ ಬಾರಿಸುವುದರಲ್ಲಿ ಯಾವುದೇ ಸಂದೇಹವಿಲ್ಲ.

ಕೊರೊನಾದಿಂದ ದಿನನಿತ್ಯದ ಬದುಕು ಸಾಗಿಸಲು ಹೆಣಗಾಡುತ್ತಿರುವ ಜನರಿಗೆ ಪೆಟ್ರೋಲ್-ಡೀಸೆಲ್ ದರ ಏರಿಕೆ ಸಂಕಷ್ಟ ತಂದೊಡ್ಡಿದೆ. ಲಾಕ್​ಡೌನ್​ನಲ್ಲಿ ಎಲ್ಲರೂ ಆರೋಗ್ಯದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿದ್ದರು. ಇದರ ನಡುವೆ ಸದ್ದಿಲ್ಲದಂತೆ ಪೆಟ್ರೋಲ್ ರೇಟ್ ನೂರರ ಗಡಿ ದಾಟಿ ನಿಂತಿದೆ. ಹೀಗೆ ಬಹುತೇಕ ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಶತಕ ಬಾರಿಸುವ ನಿರೀಕ್ಷೆಯಿದೆ. ನಿರಂತರ ಏರಿಕೆಯತ್ತ ಸಾಗುತ್ತಿರುವ ಪೆಟ್ರೋಲ್​, ಡೀಸೆಲ್​ ದರ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಕಾರವಾರದಲ್ಲಿ ಲೀಟರ್​ ಪೆಟ್ರೋಲ್​ ದರ 99.85 ರೂಪಾಯಿ ಇದೆ. ಹಾಗೆಯೇ ಡೀಸೆಲ್​ ದರವೂ ಕೂಡಾ ಏರಿಕೆ ಕಂಡಿದೆ. ಶಿರಸಿಯಲ್ಲಿ ಲೀಟರ್ ಡೀಸೆಲ್​ ದರ 92.88 ರೂಪಾಯಿ ದಾಖಲಾಗಿದೆ. ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ದ ಬೆಲೆ ಏರಿಕೆಯಾಗಿರಲಿಲ್ಲ. ಆ ನಂತರ ಮೇ 4ರಿಂದ ಏರಿಕೆ ಕಾಣುತ್ತಲಿರುವ ಇಂಧನ ದರ ಇಂದಿನವರೆಗೂ ಏರುತ್ತಲೇ ಇದೆ. ಇದುವರೆಗೆ ಒಟ್ಟು 20 ಬಾರಿ ಏರಿಕೆ ಕಂಡಿದೆ.

ಇನ್ನು, ಮಂಡ್ಯ ಜಿಲ್ಲೆಯಲ್ಲಿ ಲೀಟರ್​ ಪೆಟ್ರೋಲ್ ದರ 98.32 ರೂಪಾಯಿಗೆ ಏರಿಕೆಯಾಗಿದೆ. ಹಾಗೂ ಲೀಟರ್​ ಡಿಸೇಲ್ ದರ 91.25 ರೂಪಾಯಿ ಆಗಿದೆ. ಹಾಗೂ ಹಾವೇರಿಯಲ್ಲಿ ಲೀಟರ್​ ‌ಪೆಟ್ರೋಲ್ ದರ 98.96 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ಡಿಸೇಲ್ ದರ 91.85 ರೂಪಾಯಿಗೆ ಏರಿಕೆಯಾಗಿದೆ. ಇನ್ನು, ಮಂಗಳೂರಿನಲ್ಲಿ ಪೆಟ್ರೋಲ್ ದರ 97.75 ರೂ. ಹಾಗೂ ಡಿಸೇಲ್  ದರ 90.69 ರೂಪಾಯಿಗೆ ಹೆಚ್ಚಳವಾಗಿದೆ.

ಪ್ರಮುಖ ಮೆಟ್ರೋ ನಗರಗಳಲ್ಲಿ ಇಂಧನ ದರ ವಾಣಿಜ್ಯ ನಗರಿ ಮುಂಬೈ, ಜೈಪುರ, ಮಹಾರಾಷ್ಟ್ರ, ತೆಲಂಗಾಣ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಪೆಟ್ರೋಲ್​ ದರ ಈಗಾಗಲೇ 100ರ ಗಡಿ ದಾಟಿದೆ. ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 101.03, ಜೈಪುರದಲ್ಲಿ 101.59 ಹಾಗೂ ಮಧ್ಯಪ್ರದೇಶದಲ್ಲಿ 103.17 ರೂಪಾಯಿಗೆ ಏರಿಕೆಯಾಗಿದೆ. ಇನ್ನು ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್​ ದರ 98.20 ರೂಪಾಯಿಗೆ ಏರಿಕೆಯಾಗಿದೆ.

ಬೆಲೆ ಏರಿಕೆಯ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.31 ರೂಪಾಯಿಗೆ ಏರಿಕೆಯಾಗಿದೆ. ಹಾಗೆಯೇ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 101.52 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 95.28 ರುಪಾಯಿ ಆಗಿದ್ದು, ಚೆನ್ನೈನಲ್ಲಿ 96.71 ರೂಪಾಯಿ ನಿಗದಿ ಮಾಡಲಾಗಿದೆ.

ಮೆಟ್ರೋ​ ನಗರಗಳಲ್ಲಿ ಡೀಸೆಲ್​ ಬೆಲೆ ದೆಹಲಿಯಲ್ಲಿ ಲೀಟರ್​ ಡೀಸೆಲ್​ ಬೆಲೆ 86.22 ರೂಪಾಯಿ ಇದೆ. ಹಾಗೆಯೇ ಮುಂಬೈನಲ್ಲಿ 93.58 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್​ ಡೀಸೆಲ್​ ದರ 89.07 ರೂಪಾಯಿ ಇದೆ. ಹಾಗೂ ಚೆನ್ನೈನಲ್ಲಿ ಲೀಟರ್​ ಡೀಸೆಲ್​ ದರ 90.92 ರೂಪಾಯಿಗೆ ಏರಿಕೆಯಾಗಿದೆ.

ಇದನ್ನೂ ಓದಿ: 

Petrol Price Today: ಮತ್ತೆ ಏರಿದ ತೈಲ ಬೆಲೆ; ಶತಕ ದಾಟಿದ ಮುಂಬೈ ನಗರದ ಪೆಟ್ರೋಲ್ ದರ

Petrol Price Today: ಸ್ಥಿರತೆಯಲ್ಲಿ ಇಂಧನ ಬೆಲೆ; ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೀಗಿದೆ

Published On - 8:26 am, Mon, 7 June 21

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ