AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price In Karnataka: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಶತಕ ಬಾರಿಸಿ ಮುನ್ನುಗ್ಗಿದ ಪೆಟ್ರೋಲ್​ ಬೆಲೆ! ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು?

Petrol Diesel Rate Today: ಉತ್ತರ ಕನ್ನಡದ ಶಿರಸಿಯಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 100.22 ರೂಪಾಯಿ ನಿಗದಿ ಮಾಡಲಾಗಿದೆ. ಬಳ್ಳಾರಿಯಲ್ಲಿ ಲೀಟರ್​ ಪೆಟ್ರೋಲ್​ ದರ 100.08 ರೂಪಾಯಿಗೆ ಏರಿಕೆಯಾಗಿದೆ.

Petrol Price In Karnataka: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಶತಕ ಬಾರಿಸಿ ಮುನ್ನುಗ್ಗಿದ ಪೆಟ್ರೋಲ್​ ಬೆಲೆ! ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು?
ಪೆಟ್ರೋಲ್ ಬೆಲೆ ಏರಿಕೆ
TV9 Web
| Edited By: |

Updated on:Jun 07, 2021 | 10:06 AM

Share

ಈಗಾಗಲೇ ಕೊರೊನಾ ಮಹಾಮಾರಿಯ ಆರ್ಭಟದಿಂದ ಜನರೆಲ್ಲಾ ನಲುಗಿ ಹೋಗಿದ್ದಾರೆ. ಈ ನಡುವೆ ಸದ್ದಿಲ್ಲದೇ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆಯತ್ತ ಸಾಗುತ್ತಲೇ ಇದೆ. ಕೊರೊನಾ ಸಂಕಷ್ಟದ ನಡುವೆಯೂ ಇಂಧನ ದರ ಏರಿಕೆ ಕಂಡು ಗಗನಕ್ಕೇರಿರುವುದು ಜನರಿಗೆ ಗಾಯದ ಮೇಲೆ ಬರೆ ಬಿದ್ದಂತಾಗಿದೆ. ಕರ್ನಾಟಕದ ಜಿಲ್ಲೆಗಳಾದ ಚಿಕ್ಕಮಗಳೂರು, ಬಳ್ಳಾರಿ, ಉತ್ತರಕನ್ನಡದ ಶಿರಸಿ ಸೇರಿ ಮಲೆನಾಡು ಭಾಗಗಳಲ್ಲಿ ಲೀಟರ್​ ಪೆಟ್ರೋಲ್​ ದರ 100ರ ಗಡಿ ದಾಟಿದೆ.

ಉತ್ತರಕನ್ನಡದ ಶಿರಸಿಯಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 100.22 ರೂಪಾಯಿ ನಿಗದಿ ಮಾಡಲಾಗಿದೆ. ಬಳ್ಳಾರಿಯಲ್ಲಿ ಲೀಟರ್​ ಪೆಟ್ರೋಲ್​ ದರ 100.08 ರೂಪಾಯಿಗೆ ಏರಿಕೆಯಾಗಿದೆ. ಇನ್ನಿತರ ಜಿಲ್ಲೆಗಳು ಕೂಡಾ ಶತಕ ಬಾರಿಸುವಲ್ಲಿ ಗಡಿಯ ಸಮೀಪದಲ್ಲಿಯೇ ನಿಂತಿದೆ. ಇದೇ ರೀತಿ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆಯತ್ತ ಸಾಗಿದರೆ ಅವುಗಳೂ ಕೂಡಾ ಶತಕ ಬಾರಿಸುವುದರಲ್ಲಿ ಯಾವುದೇ ಸಂದೇಹವಿಲ್ಲ.

ಕೊರೊನಾದಿಂದ ದಿನನಿತ್ಯದ ಬದುಕು ಸಾಗಿಸಲು ಹೆಣಗಾಡುತ್ತಿರುವ ಜನರಿಗೆ ಪೆಟ್ರೋಲ್-ಡೀಸೆಲ್ ದರ ಏರಿಕೆ ಸಂಕಷ್ಟ ತಂದೊಡ್ಡಿದೆ. ಲಾಕ್​ಡೌನ್​ನಲ್ಲಿ ಎಲ್ಲರೂ ಆರೋಗ್ಯದ ಬಗ್ಗೆ ತಲೆಕೆಡಿಸಿಕೊಳ್ಳುತ್ತಿದ್ದರು. ಇದರ ನಡುವೆ ಸದ್ದಿಲ್ಲದಂತೆ ಪೆಟ್ರೋಲ್ ರೇಟ್ ನೂರರ ಗಡಿ ದಾಟಿ ನಿಂತಿದೆ. ಹೀಗೆ ಬಹುತೇಕ ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಶತಕ ಬಾರಿಸುವ ನಿರೀಕ್ಷೆಯಿದೆ. ನಿರಂತರ ಏರಿಕೆಯತ್ತ ಸಾಗುತ್ತಿರುವ ಪೆಟ್ರೋಲ್​, ಡೀಸೆಲ್​ ದರ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಕಾರವಾರದಲ್ಲಿ ಲೀಟರ್​ ಪೆಟ್ರೋಲ್​ ದರ 99.85 ರೂಪಾಯಿ ಇದೆ. ಹಾಗೆಯೇ ಡೀಸೆಲ್​ ದರವೂ ಕೂಡಾ ಏರಿಕೆ ಕಂಡಿದೆ. ಶಿರಸಿಯಲ್ಲಿ ಲೀಟರ್ ಡೀಸೆಲ್​ ದರ 92.88 ರೂಪಾಯಿ ದಾಖಲಾಗಿದೆ. ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ದ ಬೆಲೆ ಏರಿಕೆಯಾಗಿರಲಿಲ್ಲ. ಆ ನಂತರ ಮೇ 4ರಿಂದ ಏರಿಕೆ ಕಾಣುತ್ತಲಿರುವ ಇಂಧನ ದರ ಇಂದಿನವರೆಗೂ ಏರುತ್ತಲೇ ಇದೆ. ಇದುವರೆಗೆ ಒಟ್ಟು 20 ಬಾರಿ ಏರಿಕೆ ಕಂಡಿದೆ.

ಇನ್ನು, ಮಂಡ್ಯ ಜಿಲ್ಲೆಯಲ್ಲಿ ಲೀಟರ್​ ಪೆಟ್ರೋಲ್ ದರ 98.32 ರೂಪಾಯಿಗೆ ಏರಿಕೆಯಾಗಿದೆ. ಹಾಗೂ ಲೀಟರ್​ ಡಿಸೇಲ್ ದರ 91.25 ರೂಪಾಯಿ ಆಗಿದೆ. ಹಾಗೂ ಹಾವೇರಿಯಲ್ಲಿ ಲೀಟರ್​ ‌ಪೆಟ್ರೋಲ್ ದರ 98.96 ರೂಪಾಯಿ ಹಾಗೂ ಲೀಟರ್​ ಡೀಸೆಲ್​ ಡಿಸೇಲ್ ದರ 91.85 ರೂಪಾಯಿಗೆ ಏರಿಕೆಯಾಗಿದೆ. ಇನ್ನು, ಮಂಗಳೂರಿನಲ್ಲಿ ಪೆಟ್ರೋಲ್ ದರ 97.75 ರೂ. ಹಾಗೂ ಡಿಸೇಲ್  ದರ 90.69 ರೂಪಾಯಿಗೆ ಹೆಚ್ಚಳವಾಗಿದೆ.

ಪ್ರಮುಖ ಮೆಟ್ರೋ ನಗರಗಳಲ್ಲಿ ಇಂಧನ ದರ ವಾಣಿಜ್ಯ ನಗರಿ ಮುಂಬೈ, ಜೈಪುರ, ಮಹಾರಾಷ್ಟ್ರ, ತೆಲಂಗಾಣ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಪೆಟ್ರೋಲ್​ ದರ ಈಗಾಗಲೇ 100ರ ಗಡಿ ದಾಟಿದೆ. ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 101.03, ಜೈಪುರದಲ್ಲಿ 101.59 ಹಾಗೂ ಮಧ್ಯಪ್ರದೇಶದಲ್ಲಿ 103.17 ರೂಪಾಯಿಗೆ ಏರಿಕೆಯಾಗಿದೆ. ಇನ್ನು ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್​ ದರ 98.20 ರೂಪಾಯಿಗೆ ಏರಿಕೆಯಾಗಿದೆ.

ಬೆಲೆ ಏರಿಕೆಯ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 95.31 ರೂಪಾಯಿಗೆ ಏರಿಕೆಯಾಗಿದೆ. ಹಾಗೆಯೇ ಮುಂಬೈನಲ್ಲಿ ಲೀಟರ್​ ಪೆಟ್ರೋಲ್​ ದರ 101.52 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ ಲೀಟರ್​ ಪೆಟ್ರೋಲ್​ ಬೆಲೆ 95.28 ರುಪಾಯಿ ಆಗಿದ್ದು, ಚೆನ್ನೈನಲ್ಲಿ 96.71 ರೂಪಾಯಿ ನಿಗದಿ ಮಾಡಲಾಗಿದೆ.

ಮೆಟ್ರೋ​ ನಗರಗಳಲ್ಲಿ ಡೀಸೆಲ್​ ಬೆಲೆ ದೆಹಲಿಯಲ್ಲಿ ಲೀಟರ್​ ಡೀಸೆಲ್​ ಬೆಲೆ 86.22 ರೂಪಾಯಿ ಇದೆ. ಹಾಗೆಯೇ ಮುಂಬೈನಲ್ಲಿ 93.58 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್​ ಡೀಸೆಲ್​ ದರ 89.07 ರೂಪಾಯಿ ಇದೆ. ಹಾಗೂ ಚೆನ್ನೈನಲ್ಲಿ ಲೀಟರ್​ ಡೀಸೆಲ್​ ದರ 90.92 ರೂಪಾಯಿಗೆ ಏರಿಕೆಯಾಗಿದೆ.

ಇದನ್ನೂ ಓದಿ: 

Petrol Price Today: ಮತ್ತೆ ಏರಿದ ತೈಲ ಬೆಲೆ; ಶತಕ ದಾಟಿದ ಮುಂಬೈ ನಗರದ ಪೆಟ್ರೋಲ್ ದರ

Petrol Price Today: ಸ್ಥಿರತೆಯಲ್ಲಿ ಇಂಧನ ಬೆಲೆ; ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೀಗಿದೆ

Published On - 8:26 am, Mon, 7 June 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ