ಪೊಲೀಸರ ಲಾಠಿ ಚಾರ್ಚ್ ಖಂಡಿಸಿ ಪಿಎಫ್​ಐ ಕಾರ್ಯಕರ್ತರ ಪ್ರತಿಭಟನೆ: ಮಂಗಳೂರಿನಲ್ಲಿ ಬಿಗಿ ಪೊಲೀಸ್​ ಭದ್ರತೆ

| Updated By: Pavitra Bhat Jigalemane

Updated on: Dec 17, 2021 | 5:20 PM

ಮಂಗಳೂರಿನ ಕ್ಲಾಕ್​ಟವರ್​ ಸರ್ಕಲ್​ ಬಳಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆ ಬಂದ್ ಮಾಡಿ​ ಬ್ಯಾರಿಕೇಡ್​ ಅಳವಡಿಸಿದ್ದರು.

ಪೊಲೀಸರ ಲಾಠಿ ಚಾರ್ಚ್ ಖಂಡಿಸಿ ಪಿಎಫ್​ಐ ಕಾರ್ಯಕರ್ತರ ಪ್ರತಿಭಟನೆ: ಮಂಗಳೂರಿನಲ್ಲಿ ಬಿಗಿ ಪೊಲೀಸ್​ ಭದ್ರತೆ
Follow us on

ಮಂಗಳೂರು: ಉಪ್ಪಿನಂಗಡಿ ಲಾಠಿ ಚಾರ್ಜ್​ ಖಂಡಿಸಿ ಇಂದು ಪಿಎಫ್​ಐ ಸಂಘಟನೆಯಿಂದ ಎಸ್ಪಿ ಕಚೇರಿ ಚಲೋ ಪ್ರತಿಭಟನೆ ನಡೆಯಿತು. ಮಂಗಳೂರಿನ ಕ್ಲಾಕ್​ಟವರ್​ ಸರ್ಕಲ್​ ಬಳಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆ ಬಂದ್ ಮಾಡಿ​ ಬ್ಯಾರಿಕೇಡ್​ ಅಳವಡಿಸಿದ್ದರು. ಹೀಗಾಗಿ ವಾಹನ ಸವಾರರು ಪರದಾಡುವಂತಾಯಿತು. ಇದರಿಂದ ಪೊಲೀಸರು ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದರು. ಎಸ್​ಪಿ ಕಚೇರಿಗೆ ತೆರಳುವ ರಸ್ತೆಯಲ್ಲೂ ಬ್ಯಾರಿಕೇಡ್​ಗಳ​ ಅಳವಡಿಸಿ ಮಂಗಳೂರು ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ತೆ ಮಾಡಲಾಗಿದೆ.

ಇದೇ ವೇಳೆ ಬ್ಯಾರಿಕೇಟ್​​ ತೆಗೆಯಬೇಕು ಪ್ರತಿಭಟನೆಗೆ ಅವಕಾಶ ಕೊಡಬೇಕು ಎಂದು ಪ್ರತಿಭಟನೆಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದದ್ದು ಬ್ಯಾರಿಕೇಡ್ ಬಳಿ ಪ್ರತಿಭಟನಕಾರರನ್ನು ಪೊಲೀಸರು ತಡೆದಿದ್ದಾರೆ. ಪಿಎಫ್​ ಐ ಕಾರ್ಯಕರ್ತರ ಅಕ್ರಮ ಬಂಧನ ಖಂಡಿಸಿ ಠಾಣೆಯ ಎದುರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು ಎನ್ನಲಾಗಿತ್ತು. ಈ ಹಿನ್ನಲೆಯಲ್ಲಿ ಪುತ್ತೂರು ಉಪವಿಭಾಗದಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿತ್ತು. ಇದೀಗ ಘಟನೆಯನ್ನು ಖಂಡಿಸಿ ಪಿಎಫ್​ಯ ಕಾರ್ಯಕರ್ತರು ಎಸ್ಪಿ ಕಚೇರಿ ಚಲೋ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ:

ಉಪ್ಪಿನಂಗಡಿ: ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಎಸ್​ಪಿ ಕಚೇರಿ ಚಲೋ; ಪುತ್ತೂರು ಉಪವಿಭಾಗದಲ್ಲಿ ಸೆಕ್ಷನ್ 144 ಜಾರಿ