AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ಮೃತ ಸೋಂಕಿತರ ಅಂತ್ಯಸಂಸ್ಕಾರ ಮಾಡಿದ ಬಾಗಲಕೋಟೆ ಪಿಎಫ್​ಐ ತಂಡ; ಸಮಾಜಮುಖಿ ಕಾರ್ಯಕ್ಕೆ ಜನರಿಂದ ಮೆಚ್ಚುಗೆ

ಬಾಗಲಕೋಟೆ ಪಿಎಫ್ಐ ಇದುವರೆಗೂ ಕೊವಿಡ್ ಎರಡನೇ ಅಲೆಯಲ್ಲಿ ಒಟ್ಟು 40ಮೃತ ಸೋಂಕಿತರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಜಿಲ್ಲಾದ್ಯಂತ ಯಾವುದೇ ಮೂಲೆಯಲ್ಲಿ ಕೊವಿಡ್ ಸೊಂಕಿತರು ಮೃತಪಟ್ಟು, ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಮುಂದೆ ಬಾರದೆ ಹೋದರೆ ಪಿಪಿಇ ಕಿಟ್ ಹಾಕಿಕೊಂಡು ಕೊವಿಡ್ ಮೃತರ ಶವ ಸ್ಮಶಾನಕ್ಕೆ ಸಾಗಿಸಿ ಅವರ ಅಂತಿಮ ಕಾರ್ಯವನ್ನು ಈ ತಂಡ ಮಾಡುತ್ತಿದೆ.

40 ಮೃತ ಸೋಂಕಿತರ ಅಂತ್ಯಸಂಸ್ಕಾರ ಮಾಡಿದ ಬಾಗಲಕೋಟೆ ಪಿಎಫ್​ಐ ತಂಡ; ಸಮಾಜಮುಖಿ ಕಾರ್ಯಕ್ಕೆ ಜನರಿಂದ ಮೆಚ್ಚುಗೆ
ಮೃತ ಸೋಂಕಿತರ ಅಂತ್ಯಸಂಸ್ಕಾರ ಮಾಡಿದ ಬಾಗಲಕೋಟೆ ಪಿಎಫ್​ಐ ತಂಡ
Follow us
preethi shettigar
|

Updated on: May 23, 2021 | 12:52 PM

ಬಾಗಲಕೋಟೆ: ಕೊವಿಡ್ ಎರಡನೇ ಅಲೆ ತೀವ್ರವಾಗಿದೆ. ಸಾವು ಮತ್ತು ನೋವಿನ ಸಂಖ್ಯೆಯಲ್ಲಿ ಕೂಡ ಏರಿಕೆಯಾಗುತ್ತಿದೆ. ಕೊವಿಡ್​ಗೆ ಬಲಿಯಾದವರನ್ನು ಸಂಬಂಧಿಕರೇ ದೂರ ಇಡುವ ಪರಿಸ್ಥಿತಿ ಈಗ ನಿರ್ಮಾಣವಾಗಿದೆ. ಇಂತಹ ವೇಳೆಯಲ್ಲಿ ಕೊವಿಡ್ ಸೊಂಕಿತರ ಪಾಲಿಗೆ ಬಾಗಲಕೋಟೆ ಪಾಪ್ಯುಲರ್ ಫಂಟ್ ಆಫ್ ಇಂಡಿಯಾ ಕುಟುಂಬವಾಗಿ ನಿಂತಿದೆ. ಈ ತಂಡದ ಕಾರ್ಯಕರ್ತರು ಕೊವಿಡ್ ಸೊಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡುವ ಮೂಲಕ ಸೊಂಕಿತರಿಗೆ ಕುಟುಂಬಸ್ಥರಾಗಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು, ದನ ಪ್ರತಿ 300 ರಿಂದ 400 ಪಾಜಿಟಿವ್ ಕೇಸ್‌ಗಳು ಪತ್ತೆಯಾಗುತ್ತಿದೆ. ಅಲ್ಲದೆ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 112 ಜನರು ಕೊವಿಡ್​ಗೆ ಬಲಿಯಾಗಿದ್ದಾರೆ. ಈ ಸೋಂಕಿತರು ಮೃತಪಟ್ಟಾಗ ಅವರ ಅಂತ್ಯಸಂಸ್ಕಾರಕ್ಕೆ ಧೈರ್ಯದಿಂದ‌ ಮುಂದೆ ಬಂದಿದ್ದು ಪಿಎಫ್​ಐ (ಪಾಪ್ಯುಲರ್ ಫಂಟ್ ಆಫ್ ಇಂಡಿಯಾ) ಕಾರ್ಯಕರ್ತರು. ಈ ತಂಡ ಕೊವಿಡ್ ಸೊಂಕಿತ‌ರು ಮೃತಪಟ್ಟರೆ ಮೃತನ ಧರ್ಮದಾನುಸಾರವಾಗಿ ಅಂತ್ಯಸಂಸ್ಕಾರ ಮಾಡುತ್ತಾರೆ.

ಬರೊಬ್ಬರಿ 40 ಕೊವಿಡ್ ಮೃತರ ಅಂತ್ಯಸಂಸ್ಕಾರ ಬಾಗಲಕೋಟೆ ಪಿಎಫ್ಐ ಇದುವರೆಗೂ ಕೊವಿಡ್ ಎರಡನೇ ಅಲೆಯಲ್ಲಿ ಒಟ್ಟು 40ಮೃತ ಸೋಂಕಿತರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಜಿಲ್ಲಾದ್ಯಂತ ಯಾವುದೇ ಮೂಲೆಯಲ್ಲಿ ಕೊವಿಡ್ ಸೊಂಕಿತರು ಮೃತಪಟ್ಟು, ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಮುಂದೆ ಬಾರದೆ ಹೋದರೆ ಪಿಪಿಇ ಕಿಟ್ ಹಾಕಿಕೊಂಡು ಕೊವಿಡ್ ಮೃತರ ಶವ ಸ್ಮಶಾನಕ್ಕೆ ಸಾಗಿಸಿ ಅವರ ಅಂತಿಮ ಕಾರ್ಯವನ್ನು ಈ ತಂಡ ಮಾಡುತ್ತಿದೆ. ಇನ್ನು ಕಳೆದ ವರ್ಷ ಕೊವಿಡ್ ಮೊದಲನೇ ಅವಧಿಯಲ್ಲೀ 50 ಮೃತ ಸೋಂಕಿತರ ಅಂತ್ಯಕ್ರಿಯೆ ಮಾಡಲಾಗಿತ್ತು. ಈ ವರ್ಷವೂ ತಮ್ಮ ಕಾರ್ಯವನ್ನು ಮುಂದುವರೆಸಿದ್ದಾರೆ.

ಪಿಎಫ್ಐ ಕಾರ್ಯಕರ್ತರು ಬಾಗಲಕೋಟೆ ಜಿಲ್ಲಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿದ್ದಾರೆ. ಕಳೆದ ವರ್ಷ ವಿವಿಧ ಕಡೆ ಕೊವಿಡ್ ಮೃತರನ್ನು ಅತಿ ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡುವುದನ್ನು ಕಂಡು ಮರುಗಿದ್ದಾರೆ. ಇಂತಹ ಪರಿಸ್ಥಿತಿ ಯಾರಿಗೂ ಬರಬಾರದು ಎಂದು ಕಳೆದ ವರ್ಷವೇ ಪಣತೊಟ್ಟ ಈ ಕಾರ್ಯಕರ್ತರು ಮೃತರ ಅಂತ್ಯಸಂಸ್ಕಾರ ಮಾಡುವುದಕ್ಕೆ ಮುಂದಾದರು. ಜಮಖಂಡಿ, ತೇರದಾಳ, ರಬಕವಿಬನಹಟ್ಟಿ ಭಾಗದಲ್ಲಿ ಮೊದಲು ಶುರುವಾದ ಇವರ ಈ ಕಾರ್ಯ ನಂತರ ಇಡೀ ಬಾಗಲಕೋಟೆ ಜಿಲ್ಲಾದ್ಯಂತ ಮುಂದುವರೆಯುತ್ತಿದೆ. ಜಾತಿ ಭೇದ ಮರೆತು ಎಲ್ಲ ಧರ್ಮ ಸಮುದಾಯದವರ ಅಂತ್ಯಕ್ರಿಯೆ ಮಾಡುತ್ತಿರುವ ಇವರು ರಾತ್ರಿ ಹಗಲು ಎನ್ನದೆ ಮೃತರ ಆತ್ಮಕ್ಕೆ ಶಾಂತಿ ದೊರಕಿಸುವ ಕಾರ್ಯಕ್ಕೆ ಮುಂದಾಗಿರುವುದು ವಿಶೇಷ.

ನಾವು ಮೊದಲು ಮಾನವರು ನಂತರ ಜಾತಿ, ಧರ್ಮ, ಸಮುದಾಯ ಎಲ್ಲ. ಕಳೆದ ವರ್ಷ ಮೃತ ಕೊವಿಡ್ ಶವಗಳನ್ನು ಮನಬಂದಂತೆ ಎಸೆಯುವ ಪದ್ಧತಿ ಇತ್ತು. ಹೀಗೆ ಅಮಾನವೀಯವಾಗಿ ನಡೆದುಕೊಂಡ ಅನೇಕ ಸನ್ನಿವೇಶಗಳನ್ನು ನಾವು ನೋಡಿದ್ದೇವೆ. ಇದು ಮನಸ್ಸಿಗೆ ಬಹಳ‌ ನೋವುಂಟು ಮಾಡಿತು. ಅದಕ್ಕೆ ಯಾರಗೂ ಇಂತಹ ಧಾರುಣ ಅಂತ್ಯಕ್ರಿಯೆ ಪರಿಸ್ಥಿತಿ ಬರಬಾರದು ಎಂದು ನಿರ್ಧರಿಸಿ ಈ ಕಾರ್ಯ ಮಾಡಿದ್ದೇವೆ. ಇದು ನಿರಂತರವಾಗಿ ಮುಂದುವರೆಯಲಿದೆ ಎಂದು ಪಿಎಫ್​ಐ ಬಾಗಲಕೋಟೆ ಜಿಲ್ಲಾಧ್ಯಕ್ಷ ಅಸ್ಗರ್ ಅಲಿಶೇಖ್ ಹೇಳಿದ್ದಾರೆ.

ಇದನ್ನೂ ಓದಿ:

ಮುಸ್ಲಿಂ ಯುವಕರ ತಂಡದಿಂದ ಕೊವಿಡ್​ಗೆ ಬಲಿಯಾದವರ ಉಚಿತ ಅಂತ್ಯಸಂಸ್ಕಾರ; ತುಮಕೂರಿನಲ್ಲೊಂದು ಮಾನವೀಯ ಕಾರ್ಯ

ಕಿಲ್ಲರ್ ಕೊರೊನಾ: ಆ್ಯಂಬುಲೆನ್ಸ್ ಚಾಲಕರಿಂದಲೇ ಅಂತ್ಯಸಂಸ್ಕಾರ, ವಿಡಿಯೋ ನೋಡಿ ವಿದಾಯ ಹೇಳುತ್ತಿರುವ ಕುಟುಂಬಸ್ಥರು

ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ