AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ಮೃತ ಸೋಂಕಿತರ ಅಂತ್ಯಸಂಸ್ಕಾರ ಮಾಡಿದ ಬಾಗಲಕೋಟೆ ಪಿಎಫ್​ಐ ತಂಡ; ಸಮಾಜಮುಖಿ ಕಾರ್ಯಕ್ಕೆ ಜನರಿಂದ ಮೆಚ್ಚುಗೆ

ಬಾಗಲಕೋಟೆ ಪಿಎಫ್ಐ ಇದುವರೆಗೂ ಕೊವಿಡ್ ಎರಡನೇ ಅಲೆಯಲ್ಲಿ ಒಟ್ಟು 40ಮೃತ ಸೋಂಕಿತರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಜಿಲ್ಲಾದ್ಯಂತ ಯಾವುದೇ ಮೂಲೆಯಲ್ಲಿ ಕೊವಿಡ್ ಸೊಂಕಿತರು ಮೃತಪಟ್ಟು, ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಮುಂದೆ ಬಾರದೆ ಹೋದರೆ ಪಿಪಿಇ ಕಿಟ್ ಹಾಕಿಕೊಂಡು ಕೊವಿಡ್ ಮೃತರ ಶವ ಸ್ಮಶಾನಕ್ಕೆ ಸಾಗಿಸಿ ಅವರ ಅಂತಿಮ ಕಾರ್ಯವನ್ನು ಈ ತಂಡ ಮಾಡುತ್ತಿದೆ.

40 ಮೃತ ಸೋಂಕಿತರ ಅಂತ್ಯಸಂಸ್ಕಾರ ಮಾಡಿದ ಬಾಗಲಕೋಟೆ ಪಿಎಫ್​ಐ ತಂಡ; ಸಮಾಜಮುಖಿ ಕಾರ್ಯಕ್ಕೆ ಜನರಿಂದ ಮೆಚ್ಚುಗೆ
ಮೃತ ಸೋಂಕಿತರ ಅಂತ್ಯಸಂಸ್ಕಾರ ಮಾಡಿದ ಬಾಗಲಕೋಟೆ ಪಿಎಫ್​ಐ ತಂಡ
preethi shettigar
|

Updated on: May 23, 2021 | 12:52 PM

Share

ಬಾಗಲಕೋಟೆ: ಕೊವಿಡ್ ಎರಡನೇ ಅಲೆ ತೀವ್ರವಾಗಿದೆ. ಸಾವು ಮತ್ತು ನೋವಿನ ಸಂಖ್ಯೆಯಲ್ಲಿ ಕೂಡ ಏರಿಕೆಯಾಗುತ್ತಿದೆ. ಕೊವಿಡ್​ಗೆ ಬಲಿಯಾದವರನ್ನು ಸಂಬಂಧಿಕರೇ ದೂರ ಇಡುವ ಪರಿಸ್ಥಿತಿ ಈಗ ನಿರ್ಮಾಣವಾಗಿದೆ. ಇಂತಹ ವೇಳೆಯಲ್ಲಿ ಕೊವಿಡ್ ಸೊಂಕಿತರ ಪಾಲಿಗೆ ಬಾಗಲಕೋಟೆ ಪಾಪ್ಯುಲರ್ ಫಂಟ್ ಆಫ್ ಇಂಡಿಯಾ ಕುಟುಂಬವಾಗಿ ನಿಂತಿದೆ. ಈ ತಂಡದ ಕಾರ್ಯಕರ್ತರು ಕೊವಿಡ್ ಸೊಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡುವ ಮೂಲಕ ಸೊಂಕಿತರಿಗೆ ಕುಟುಂಬಸ್ಥರಾಗಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು, ದನ ಪ್ರತಿ 300 ರಿಂದ 400 ಪಾಜಿಟಿವ್ ಕೇಸ್‌ಗಳು ಪತ್ತೆಯಾಗುತ್ತಿದೆ. ಅಲ್ಲದೆ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 112 ಜನರು ಕೊವಿಡ್​ಗೆ ಬಲಿಯಾಗಿದ್ದಾರೆ. ಈ ಸೋಂಕಿತರು ಮೃತಪಟ್ಟಾಗ ಅವರ ಅಂತ್ಯಸಂಸ್ಕಾರಕ್ಕೆ ಧೈರ್ಯದಿಂದ‌ ಮುಂದೆ ಬಂದಿದ್ದು ಪಿಎಫ್​ಐ (ಪಾಪ್ಯುಲರ್ ಫಂಟ್ ಆಫ್ ಇಂಡಿಯಾ) ಕಾರ್ಯಕರ್ತರು. ಈ ತಂಡ ಕೊವಿಡ್ ಸೊಂಕಿತ‌ರು ಮೃತಪಟ್ಟರೆ ಮೃತನ ಧರ್ಮದಾನುಸಾರವಾಗಿ ಅಂತ್ಯಸಂಸ್ಕಾರ ಮಾಡುತ್ತಾರೆ.

ಬರೊಬ್ಬರಿ 40 ಕೊವಿಡ್ ಮೃತರ ಅಂತ್ಯಸಂಸ್ಕಾರ ಬಾಗಲಕೋಟೆ ಪಿಎಫ್ಐ ಇದುವರೆಗೂ ಕೊವಿಡ್ ಎರಡನೇ ಅಲೆಯಲ್ಲಿ ಒಟ್ಟು 40ಮೃತ ಸೋಂಕಿತರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಜಿಲ್ಲಾದ್ಯಂತ ಯಾವುದೇ ಮೂಲೆಯಲ್ಲಿ ಕೊವಿಡ್ ಸೊಂಕಿತರು ಮೃತಪಟ್ಟು, ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಮುಂದೆ ಬಾರದೆ ಹೋದರೆ ಪಿಪಿಇ ಕಿಟ್ ಹಾಕಿಕೊಂಡು ಕೊವಿಡ್ ಮೃತರ ಶವ ಸ್ಮಶಾನಕ್ಕೆ ಸಾಗಿಸಿ ಅವರ ಅಂತಿಮ ಕಾರ್ಯವನ್ನು ಈ ತಂಡ ಮಾಡುತ್ತಿದೆ. ಇನ್ನು ಕಳೆದ ವರ್ಷ ಕೊವಿಡ್ ಮೊದಲನೇ ಅವಧಿಯಲ್ಲೀ 50 ಮೃತ ಸೋಂಕಿತರ ಅಂತ್ಯಕ್ರಿಯೆ ಮಾಡಲಾಗಿತ್ತು. ಈ ವರ್ಷವೂ ತಮ್ಮ ಕಾರ್ಯವನ್ನು ಮುಂದುವರೆಸಿದ್ದಾರೆ.

ಪಿಎಫ್ಐ ಕಾರ್ಯಕರ್ತರು ಬಾಗಲಕೋಟೆ ಜಿಲ್ಲಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿದ್ದಾರೆ. ಕಳೆದ ವರ್ಷ ವಿವಿಧ ಕಡೆ ಕೊವಿಡ್ ಮೃತರನ್ನು ಅತಿ ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡುವುದನ್ನು ಕಂಡು ಮರುಗಿದ್ದಾರೆ. ಇಂತಹ ಪರಿಸ್ಥಿತಿ ಯಾರಿಗೂ ಬರಬಾರದು ಎಂದು ಕಳೆದ ವರ್ಷವೇ ಪಣತೊಟ್ಟ ಈ ಕಾರ್ಯಕರ್ತರು ಮೃತರ ಅಂತ್ಯಸಂಸ್ಕಾರ ಮಾಡುವುದಕ್ಕೆ ಮುಂದಾದರು. ಜಮಖಂಡಿ, ತೇರದಾಳ, ರಬಕವಿಬನಹಟ್ಟಿ ಭಾಗದಲ್ಲಿ ಮೊದಲು ಶುರುವಾದ ಇವರ ಈ ಕಾರ್ಯ ನಂತರ ಇಡೀ ಬಾಗಲಕೋಟೆ ಜಿಲ್ಲಾದ್ಯಂತ ಮುಂದುವರೆಯುತ್ತಿದೆ. ಜಾತಿ ಭೇದ ಮರೆತು ಎಲ್ಲ ಧರ್ಮ ಸಮುದಾಯದವರ ಅಂತ್ಯಕ್ರಿಯೆ ಮಾಡುತ್ತಿರುವ ಇವರು ರಾತ್ರಿ ಹಗಲು ಎನ್ನದೆ ಮೃತರ ಆತ್ಮಕ್ಕೆ ಶಾಂತಿ ದೊರಕಿಸುವ ಕಾರ್ಯಕ್ಕೆ ಮುಂದಾಗಿರುವುದು ವಿಶೇಷ.

ನಾವು ಮೊದಲು ಮಾನವರು ನಂತರ ಜಾತಿ, ಧರ್ಮ, ಸಮುದಾಯ ಎಲ್ಲ. ಕಳೆದ ವರ್ಷ ಮೃತ ಕೊವಿಡ್ ಶವಗಳನ್ನು ಮನಬಂದಂತೆ ಎಸೆಯುವ ಪದ್ಧತಿ ಇತ್ತು. ಹೀಗೆ ಅಮಾನವೀಯವಾಗಿ ನಡೆದುಕೊಂಡ ಅನೇಕ ಸನ್ನಿವೇಶಗಳನ್ನು ನಾವು ನೋಡಿದ್ದೇವೆ. ಇದು ಮನಸ್ಸಿಗೆ ಬಹಳ‌ ನೋವುಂಟು ಮಾಡಿತು. ಅದಕ್ಕೆ ಯಾರಗೂ ಇಂತಹ ಧಾರುಣ ಅಂತ್ಯಕ್ರಿಯೆ ಪರಿಸ್ಥಿತಿ ಬರಬಾರದು ಎಂದು ನಿರ್ಧರಿಸಿ ಈ ಕಾರ್ಯ ಮಾಡಿದ್ದೇವೆ. ಇದು ನಿರಂತರವಾಗಿ ಮುಂದುವರೆಯಲಿದೆ ಎಂದು ಪಿಎಫ್​ಐ ಬಾಗಲಕೋಟೆ ಜಿಲ್ಲಾಧ್ಯಕ್ಷ ಅಸ್ಗರ್ ಅಲಿಶೇಖ್ ಹೇಳಿದ್ದಾರೆ.

ಇದನ್ನೂ ಓದಿ:

ಮುಸ್ಲಿಂ ಯುವಕರ ತಂಡದಿಂದ ಕೊವಿಡ್​ಗೆ ಬಲಿಯಾದವರ ಉಚಿತ ಅಂತ್ಯಸಂಸ್ಕಾರ; ತುಮಕೂರಿನಲ್ಲೊಂದು ಮಾನವೀಯ ಕಾರ್ಯ

ಕಿಲ್ಲರ್ ಕೊರೊನಾ: ಆ್ಯಂಬುಲೆನ್ಸ್ ಚಾಲಕರಿಂದಲೇ ಅಂತ್ಯಸಂಸ್ಕಾರ, ವಿಡಿಯೋ ನೋಡಿ ವಿದಾಯ ಹೇಳುತ್ತಿರುವ ಕುಟುಂಬಸ್ಥರು

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ