AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಸಿಟಿವ್ ಇದ್ದರೂ ವಿಷಯ ಮುಚ್ಚಿಟ್ಟು ಕೆಲಸಕ್ಕೆ ಬರುತ್ತಿದ್ದ ಫಾರ್ಮಾಸಿಸ್ಟ್; ಜಿಲ್ಲಾಧಿಕಾರಿಯಿಂದ ಅಮಾನತು ಆದೇಶ

ಆಸ್ಪತ್ರೆಯ ಮುಖ್ಯ ಫಾರ್ಮಾಸಿಸ್ಟ್ ನಂದಕುಮಾರ ಬೋನಗೇರಿ ಎಂಬುವವರು ಕೊರೊನಾ ಪಾಸಿಟಿವ್ ಇದ್ದರೂ ವಿಷಯ ಮುಚ್ಚಿಟ್ಟು ಕರ್ತವ್ಯಕ್ಕೆ ಹಾಜರಾಗಿ ಎಲ್ಲರನ್ನೂ ಅಪಾಯಕ್ಕೆ ಸಿಲುಕಿಸಿದ್ದಾರೆ. ಇದೀಗ ವಿಷಯ ಮೇಲಧಿಕಾರಿಗಳಿಗೆ ತಲುಪಿದ ನಂತರ ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಅವರು ಫಾರ್ಮಾಸಿಸ್ಟ್ ನಂದಕುಮಾರ್ ಅವರನ್ನು ಅಮಾನತುಗೊಳಿಸಿದ್ದಾರೆ.

ಪಾಸಿಟಿವ್ ಇದ್ದರೂ ವಿಷಯ ಮುಚ್ಚಿಟ್ಟು ಕೆಲಸಕ್ಕೆ ಬರುತ್ತಿದ್ದ ಫಾರ್ಮಾಸಿಸ್ಟ್; ಜಿಲ್ಲಾಧಿಕಾರಿಯಿಂದ ಅಮಾನತು ಆದೇಶ
ಮುಧೋಳ ತಾಲ್ಲೂಕು ಆಸ್ಪತ್ರೆ
ಆಯೇಷಾ ಬಾನು
|

Updated on: Apr 30, 2021 | 7:32 AM

Share

ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ತೀವ್ರತೆ ವೈದ್ಯಕೀಯ ವ್ಯವಸ್ಥೆಗೆ ಸವಾಲೊಡ್ಡಿದ್ದು ಸೋಂಕು ಹರಡದಂತೆ ತಡೆಗಟ್ಟುವುದಕ್ಕೆ ಸರ್ಕಾರ ಕಠಿಣ ನಿಯಮಾವಳಿಗಳ ಮೊರೆ ಹೋಗಿದೆ. ಆದರೆ, ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕಾಗಿದ್ದ ವ್ಯಕ್ತಿಯೇ ಬೇಜವಾಬ್ದಾರಿತನದಿಂದ ವರ್ತಿಸಿರುವ ಘಟನೆ ನಡೆದಿದೆ. ಜಿಲ್ಲೆಯ ಮುಧೋಳ ತಾಲ್ಲೂಕು ಆಸ್ಪತ್ರೆಯ ಮುಖ್ಯ ಫಾರ್ಮಾಸಿಸ್ಟ್ ನಂದಕುಮಾರ ಬೋನಗೇರಿ ಎಂಬುವವರು ಕೊರೊನಾ ಪಾಸಿಟಿವ್ ಇದ್ದರೂ ವಿಷಯ ಮುಚ್ಚಿಟ್ಟು ಕರ್ತವ್ಯಕ್ಕೆ ಹಾಜರಾಗಿ ಎಲ್ಲರನ್ನೂ ಅಪಾಯಕ್ಕೆ ಸಿಲುಕಿಸಿದ್ದಾರೆ. ಇದೀಗ ವಿಷಯ ಮೇಲಧಿಕಾರಿಗಳಿಗೆ ತಲುಪಿದ ನಂತರ ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಅವರು ಫಾರ್ಮಾಸಿಸ್ಟ್ ನಂದಕುಮಾರ್ ಅವರನ್ನು ಅಮಾನತುಗೊಳಿಸಿದ್ದಾರೆ.

ಏಪ್ರಿಲ್ 21 ರಂದು ನಡೆಸಿದ ರ‍್ಯಾಪಿಡ್ ಟೆಸ್ಟ್ನಲ್ಲಿ ನಂದಕುಮಾರ ಬೋನಗೇರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಆದರೆ, ವಿಷಯವನ್ನು ಯಾರಿಗೂ ಹೇಳದಂತೆ ಪರೀಕ್ಷೆ ನಡೆಸಿದ್ದ ಲ್ಯಾಬ್ ಟೆಕ್ನಿಷಿಯನ್ ಸಹಾಯಕ ಅಷ್ಪಾಕ್ ಗದಗ ಅವರಿಗೆ ಬೆದರಿಕೆ ಹಾಕುವ ಮೂಲಕ ಪಾಸಿಟಿವ್ ಬಂದಿರುವುದನ್ನು ಗುಟ್ಟು ಮಾಡಿದ್ದರು. ಅಲ್ಲದೇ ಪಾಸಿಟಿವ್ ಇರುವುದು ಖಚಿತವಾದ ನಂತರವೂ ಮಾಸ್ಕ್ ಧರಿಸದೆ ಆಸ್ಪತ್ರೆಯ ತುಂಬೆಲ್ಲಾ ಬೇಕಾಬಿಟ್ಟಿ ಓಡಾಡುತ್ತಿದ್ದ ವ್ಯಕ್ತಿ ಕರ್ತವ್ಯದಲ್ಲಿದ್ದ ವೈದ್ಯರು, ಸ್ಟಾಫ್ ನರ್ಸ್ ಸೇರಿದಂತೆ ಎಲ್ಲರೊಂದಿಗೆ ಒಡನಾಟವಿಟ್ಟುಕೊಂಡಿದ್ದರು. ಸಾಲದ್ದಕ್ಕೆ ಎರಡು ದಿನಗಳ ಹಿಂದೆಯಷ್ಟೇ ಬಾಗಲಕೋಟೆ ಔಷಧಾಲಯಕ್ಕೂ ಭೇಟಿಕೊಟ್ಟು ಔಷಧ ತೆಗೆದುಕೊಂಡು ಹೋಗಿದ್ದರು. ಇಷ್ಟೆಲ್ಲಾ ಆದ ಬಳಿಕ ಲ್ಯಾಬ್ ಟೆಕ್ನಿಷಿಯನ್ ಸಹಾಯಕ ಅಷ್ಪಾಕ್ ಗದಗ ಈ ಬಗ್ಗೆ ಬಾಯ್ಬಿಟ್ಟ ಕಾರಣ ವಿಚಾರ ಬಹಿರಂಗವಾಗಿದೆ.

ವಿಷಯ ತಿಳಿದ ತಕ್ಷಣವೇ ಮುಧೋಳ ತಾಲ್ಲೂಕು ಆರೋಗ್ಯಾಧಿಕಾರಿ ವೆಂಕಟೇಶ್ ಮಲಘಾಣ್ ಫಾರ್ಮಾಸಿಸ್ಟ್ ವರ್ತನೆ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಕ್ರಮ ಕೈಗೊಂಡ ಜಿಲ್ಲಾಧಿಕಾರಿ ನಿರ್ಲಕ್ಷತನ ಪ್ರದರ್ಶಿಸಿದ ನಂದಕುಮಾರ ಬೋನಗೇರಿಯನ್ನು ಅಮಾನತು ಮಾಡಿದ್ದಾರೆ. ಜತೆಗೆ, ತಕ್ಷಣ ವಿಷಯ ಬಹಿರಂಗಪಡಿಸದ ಕಾರಣಕ್ಕೆ ಗುತ್ತಿಗೆ ಆಧಾರದ ಲ್ಯಾಬ್ ಟೆಕ್ನಿಷಿಯನ್ ಸಹಾಯಕ ಅಷ್ಪಾಕ್ ಗದಗ ಅವರನ್ನು ಲ್ಯಾಬ್‌ನಿಂದ ಬಿಡುಗಡೆಗೊಳಿಸಿ ಬೇರೆ ವಿಭಾಗಕ್ಕೆ ಕಳುಹಿಸಿದ್ದಾರೆ. ಸದ್ಯ ಇಷ್ಟೆಲ್ಲಾ ಅವಾಂತರಕ್ಕೆ ಕಾರಣನಾದ ನಂದಕುಮಾರ್ ಪಾಸಿಟಿವ್ ಬಂದ ನಂತರ ತಾಲ್ಲೂಕು ಆಸ್ಪತ್ರೆಯ ವೈದ್ಯರು, ನರ್ಸ್ ಸೇರಿದಂತೆ ಸುಮಾರು ೧೫೦ ಜನ ಸಿಬ್ಬಂದಿ ಜತೆ ಸಂಪರ್ಕ ಹೊಂದಿದ್ದರು ಎಂದು ಬಾಗಲಕೋಟೆ ಡಿಹೆಚ್‌ಓ ಅನಂತ ದೇಸಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ಉಸಿರಾಟದ ತೊಂದರೆ ಅನುಭವಿಸುತ್ತಿದ್ದರೆ ಈ ಕೆಳಗಿನ ಆಹಾರ ಪದ್ಧತಿಯನ್ನು ನಿತ್ಯವು ಅನುಸರಿಸಿ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ