AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆತ್ಮದಲ್ಲಿ ತತ್ವಜ್ಞಾನ, ಆ್ಯಕ್ಷನ್​​ನಲ್ಲಿ ಟೆಕ್ ಜ್ಞಾನ: ಹೊಗಳಿದ ಮೋದಿ

ಬೆಂಗಳೂರಿನ ಜನ ಆತ್ಮದಲ್ಲಿ ತತ್ವಜ್ಞಾನ, ಆ್ಯಕ್ಷನ್​ನಲ್ಲಿ ಟೆಕ್​ ಜ್ಞಾನವಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಯೆಲ್ಲೋ ಲೈನ್, ಮೂರನೇ ಹಂತದ ಮೆಟ್ರೋ ಯೋಜನೆ ಹಾಗೂ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಮಾತನಾಡಿದರು. 21ನೇ ಶತಮಾನದಲ್ಲಿ ಅರ್ಬನ್ ಪ್ಲ್ಯಾನಿಂಗ್ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಮುಖ್ಯವಾಗುತ್ತದೆ. ಬೆಂಗಳೂರನ್ನು ಭವಿಷ್ಯಕ್ಕೆ ಅನುಕೂಲವಾಗುವಂತೆ ತಯಾರಿ ನಡೆಸುವ ಅಗತ್ಯವಿದೆ ಎಂದರು.

ಬೆಂಗಳೂರಿನ ಆತ್ಮದಲ್ಲಿ ತತ್ವಜ್ಞಾನ, ಆ್ಯಕ್ಷನ್​​ನಲ್ಲಿ ಟೆಕ್ ಜ್ಞಾನ: ಹೊಗಳಿದ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Aug 10, 2025 | 3:23 PM

Share

ಬೆಂಗಳೂರು, ಆಗಸ್ಟ್​10: ಬೆಂಗಳೂರಿನ ಜನರ ಆತ್ಮದಲ್ಲಿ ತತ್ವಜ್ಞಾನ, ಆ್ಯಕ್ಷನ್​ನಲ್ಲಿ ಟೆಕ್​ ಜ್ಞಾನವಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೊಗಳಿದ್ದಾರೆ. ಇಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಯೆಲ್ಲೋ ಲೈನ್, ಮೂರನೇ ಹಂತದ ಮೆಟ್ರೋ ಯೋಜನೆ ಹಾಗೂ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಮಾತನಾಡಿದರು. 21ನೇ ಶತಮಾನದಲ್ಲಿ ಅರ್ಬನ್ ಪ್ಲ್ಯಾನಿಂಗ್ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಮುಖ್ಯವಾಗುತ್ತದೆ. ಬೆಂಗಳೂರನ್ನು ಭವಿಷ್ಯಕ್ಕೆ ಅನುಕೂಲವಾಗುವಂತೆ ತಯಾರಿ ನಡೆಸುವ ಅಗತ್ಯವಿದೆ ಎಂದರು.

ಕರ್ನಾಟಕಕ್ಕೆ ಕಾಲಿಡುತ್ತಿದ್ದಂತೆ ನನ್ನದು ಎನ್ನುವ ಭಾವನೆ ಮೂಡುತ್ತದೆ. ಇಲ್ಲಿಯ ಸಂಸ್ಕೃತಿ, ಹಾಗೂ ಪ್ರೀತಿ ಹಾಗೂ ಕನ್ನಡ ಭಾಷೆಯ ಸಿಹಿ ಹೃದಯ ಸ್ಪರ್ಶಿಸುತ್ತದೆ ಎಂದರು.

ಬೆಂಗಳೂರು ನಗರದ ಆತ್ಮೀಯರೇ ನಿಮಗೆಲ್ಲಾ ನನ್ನ ನಮಸ್ಕಾರಗಳು ಎಂದು ಹೇಳುತ್ತಾ ಮೋದಿ ಭಾಷಣ ಆರಂಭಿಸಿದರು. ಆಪರೇಷನ್ ಸಿಂಧೂರ್ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಬಂದಿದ್ದೇನೆ. ಆಪರೇಷನ್​ ಸಿಂಧೂರ್​​ನಲ್ಲಿ ಭಾರತೀಯ ಸೇನೆಯ ಸಫಲತೆ ಹಾಗೂ ಗಡಿಯನ್ನು ದಾಟಿ ಪಾಕಿಸ್ತಾನಕ್ಕೆ ಹೋಗಿ ಉಗ್ರರ ನೆಲೆಗಳನ್ನು ನಾಶಪಡಿಸಿರುವುದು ಇಡೀ ದೇಶಕ್ಕೆ ಭಾರತದ ಹೊಸ ಸ್ವರೂಪದ ದರ್ಶನವನ್ನು ಮಾಡಿದಂತಾಗಿದೆ ಎಂದರು.

ಆಪರೇಷನ್ ಸಿಂಧೂರ್ ಸಫಲತೆ ಹಿಂದೆ ಟೆಕ್ನಾಲಜಿ ಇತ್ತು, ಡಿಫೆನ್ಸ್​​ನಲ್ಲಿ ಮೇಕ್ ಇನ್ ಇಂಡಿಯಾದ ತಾಕತ್ತಿತ್ತು, ಇದರಲ್ಲಿ ಬೆಂಗಳೂಎಉ, ಕರ್ನಾಟಕದ ಯುವಕರ ಕೊಡುಗೆಯೂ ಇದೆ ಎಂದರು. ಮುಂದುವರೆದ ಆರ್ಥಿಕತೆಯಲ್ಲಿ ಟಾಪ್ ಹತ್ತರಲ್ಲಿ ಐದನೇ ಸ್ಥಾನದಲ್ಲಿದ್ದೇವೆ, ಶೀಘ್ರ ಟಾಪ್ ಮೂರನೇ ಸ್ಥಾನದಲ್ಲಿ ಭಾರತ ಇರಲಿದೆ. 2014ಕ್ಕೂ ಮೊದಲು ಕೇವಲ ಐದು ನಗರಗಳಿಗೆ ಮೆಟ್ರೋ ಸೀಮಿತವಾಗಿತ್ತು.

ಮತ್ತಷ್ಟು ಓದಿ: 2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿವೈಷ್ಣವ್

ಈಗ 24 ನಗರಗಳಲ್ಲಿದೆ. ವಿಶ್ವದಲ್ಲಿ ಭಾರತವು ಮೆಟ್ರೋ ಸಂಪರ್ಕ ಹೊಂದಿದ ಮೂರನೇ ರಾಷ್ಟ್ರವಾಗಿದೆ. ಸ್ವಾತಂತ್ರ್ಯ ಬಂದಾಗಿಂದ 2014ರವರೆಗೆ ಕೇವಲ 20 ಸಾವಿರ ರೈಲ್ವೆ ಎಲೆಕ್ಟ್ರಿಫಿಕೇಷನ್ ಮಾಡಲಾಗಿತ್ತು, ಆದರೆ ಈಗ ಅದರ ಸಂಖ್ಯೆ 40 ಸಾವಿರಕ್ಕೆ ಏರಿದೆ. 2014ಕ್ಕೂ ಮೊದಲು 74 ಏರ್​​ಪೋರ್ಟ್​ಗಳಿದ್ದವು, ಬಳಿಕ ಅದು 160ಕ್ಕೆ ಏರಿದೆ.

ಇನ್ನು ಆರೋಗ್ಯ ಹಾಗ ಶಿಕ್ಷಣದವಿಚಾರಕ್ಕೆ ಬಂದರೆ 2014 7 ಏಮ್ಸ್​ ಹಾಗೂ 321 ಮೆಡಿಕಲ್ ಕಾಲೇಜುಗಳಿದ್ದವು ಈಗ ಅದರ ಸಂಖ್ಯೆ 22 ಏಮ್ಸ್​ ಹಾಗೂ, 704 ಮೆಡಿಕಲ್ ಕಾಲೇಜುಗಳಾಗಿವೆ. ರಾಜ್ಯ ಸರ್ಕಾರವಿರಲಿ, ಕೇಂದ್ರ ಸರ್ಕಾರವಿರಲಿ ಜನರ ಸೇವೆಗಾಗಿಯೇ ಇರುವುದು ಎಂದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:54 pm, Sun, 10 August 25

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ