AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಔಷಧಿಯಲ್ಲಿ ಹಂದಿ ಕೊಬ್ಬು ಬಳಸಲು ಅವಕಾಶವಿದೆ.. ಮುಸ್ಲಿಮರು ಲಸಿಕೆ ಸ್ವೀಕರಿಸಿ: ಅಬ್ದುಲ್ ಅಜೀಮ್

ಕೊರೊನಾ ಲಸಿಕೆಯಲ್ಲಿ ಹಂದಿ ಕೊಬ್ಬು ಬಳಸಲಾಗುತ್ತದೆ ಎಂಬ ಕಾರಣಕ್ಕೆ ಭಯಪಡುವುದು ಬೇಡ. ಇಸ್ಲಾಂ ಧರ್ಮದಲ್ಲಿ ಔಷಧಿ ರೂಪದಲ್ಲಿ ಹಂದಿ ಉತ್ಪನ್ನ ಸ್ವೀಕರಿಸಲು ಅವಕಾಶವಿದೆ. ಧೈರ್ಯದಿಂದ ಲಸಿಕೆ ಸ್ವೀಕರಿಸಿ ಎಂದು ಅಬ್ದುಲ್ ಅಜೀಮ್ ಹೇಳಿದ್ದಾರೆ.

ಔಷಧಿಯಲ್ಲಿ ಹಂದಿ ಕೊಬ್ಬು ಬಳಸಲು ಅವಕಾಶವಿದೆ.. ಮುಸ್ಲಿಮರು ಲಸಿಕೆ ಸ್ವೀಕರಿಸಿ: ಅಬ್ದುಲ್ ಅಜೀಮ್
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on: Jan 05, 2021 | 8:29 PM

Share

ಕೊಡಗು: ಕೋವಿಡ್ ಲಸಿಕೆ ತಯಾರಿಕೆಯಲ್ಲಿ ಹಂದಿ ಕೊಬ್ಬು ಬಳಸಲಾಗುತ್ತದೆ ಎಂಬ ಕಾರಣಕ್ಕೆ ಮುಸಲ್ಮಾನರು ಭಯಪಡಬೇಕಾದ ಅವಶ್ಯಕತೆ ಇಲ್ಲ. ರೋಗ ಗುಣಪಡಿಸುವ ಔಷಧಿಯಾಗಿ ಹಂದಿ ಉತ್ಪನ್ನ ಬಳಸಲು ಅವಕಾಶ ಇದೆ ಎಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹೇಳಿಕೆ ನೀಡಿದ್ದಾರೆ.

ಲಸಿಕೆಯಲ್ಲಿ ಹಂದಿಯ ಕೊಬ್ಬು ಬಳಸಿದ್ದರೂ ಅದನ್ನು ಸ್ವೀಕರಿಸಬಹುದು. ಈ ವಿಚಾರದಲ್ಲಿ ವಿನಾಕಾರಣ ಗೊಂದಲ‌ ಸೃಷ್ಟಿಸುವುದು ಬೇಡ. ಸೌದಿಯಲ್ಲಿ ಅಲ್ಲಿನ ದೊರೆಯೇ ಮೊದಲ ಲಸಿಕೆ ಸ್ವೀಕರಿಸಿದ್ದಾರೆ. ಈ ಹಿಂದೆಯೂ ಹಂದಿ ಕೊಬ್ಬಿನಿಂದ ತಯಾರಿಸಿದ ಔಷಧಿ ಬಳಕೆ ಮಾಡಲಾಗಿದೆ. ಹೀಗಾಗಿ ಜನ ಆ ಬಗ್ಗೆ ತಲೆಕೆಡಿಸಿಕೊಳ್ಳಬಾರದು ಎಂದು ಹೇಳಿದ್ದಾರೆ.

ಮುಸಲ್ಮಾನರು ಯಾವುದೇ ಭಯವಿಲ್ಲದೆ ಲಸಿಕೆ ಸ್ವೀಕರಿಸಬಹುದು. ನನಗೂ ಧರ್ಮದ ಬಗ್ಗೆ ತಿಳುವಳಿಕೆ ಇದೆ. ಆದ್ದರಿಂದ ಈ ಮಾತನ್ನು ಹೇಳುತ್ತಿದ್ದೇನೆ. ವ್ಯಾಕ್ಸಿನ್ ಬಗ್ಗೆ ಇರುವ ಅಪಪ್ರಚಾರಗಳಿಗೆ ಕಿವಿಗೊಡಬೇಡಿ. ನಮ್ಮ ಪ್ರಧಾನಿ ಜನರ ಹಿತ ಬಯಸಿದ್ದಾರೆ. ಅವರ ಮೇಲೆ‌ ಎಲ್ಲರು ವಿಶ್ವಾಸ ಇಡಬೇಕು ಎಂದು ಅಬ್ದುಲ್ ಅಜೀಮ್‌ ತಿಳಿಸಿದ್ದಾರೆ.

ಕೊರೊನಾ ಲಸಿಕೆಯೊಂದಿಗೆ ತಳುಕು ಹಾಕಿಕೊಂಡ ಧಾರ್ಮಿಕ ಭಾವನೆ; ಬಳಕೆಗೆ ಇಸ್ಲಾಂ- ಹಿಂದೂ ಮುಖಂಡರ ವಿರೋಧ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ