AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ಪ್ರಶ್ನಿಸಿ ಹೈಕೋರ್ಟ್​ಗೆ PIL ಸಲ್ಲಿಕೆ

ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ಗೆ PIL ಸಲ್ಲಿಕೆಯಾಗಿದೆ. ಪ್ರತ್ಯೇಕ ಜಿಲ್ಲೆ ರಚನೆ ಪ್ರಶ್ನಿಸಿ ಹೈಕೋರ್ಟ್​ಗೆ PIL ಸಲ್ಲಿಸಲಾಗಿದೆ. Vijayanagar

ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ಪ್ರಶ್ನಿಸಿ ಹೈಕೋರ್ಟ್​ಗೆ PIL ಸಲ್ಲಿಕೆ
ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗೆ ಸೇರುವ ತಾಲ್ಲೂಕುಗಳು
KUSHAL V
|

Updated on: Feb 09, 2021 | 6:52 PM

Share

ಬೆಂಗಳೂರು: ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ಗೆ PIL ಸಲ್ಲಿಕೆಯಾಗಿದೆ. ಪ್ರತ್ಯೇಕ ಜಿಲ್ಲೆ ರಚನೆ ಪ್ರಶ್ನಿಸಿ ಹೈಕೋರ್ಟ್​ಗೆ PIL ಸಲ್ಲಿಸಲಾಗಿದೆ. ಬಳ್ಳಾರಿ ಮೂಲದ ಎರೀಸ್ವಾಮಿ ಎಂಬುವವರಿಂದ PIL ಸಲ್ಲಿಸಲಾಗಿದೆ. ನೂತನ ಜಿಲ್ಲೆಯ ರಚನೆ ಕುರಿತು ರಾಜ್ಯ ಸರ್ಕಾರ ಅಧಿಸೂಚನೆ ಪ್ರಕಟಿಸಿದ ಬೆನ್ನಲ್ಲೇ ಕೋರ್ಟ್​ಗೆ PIL ಸಲ್ಲಿಕೆಯಾಗಿದೆ.

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಈ ಸಂಬಂಧ, ಫೆ.8ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಪ್ರಕಟಿಸಲಾಗಿತ್ತು. ಬಳ್ಳಾರಿ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ ನೂತನ ವಿಜಯನಗರ ಜಿಲ್ಲೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ನೂತನ ವಿಜಯನಗರ ಜಿಲ್ಲೆಯ ಕೇಂದ್ರ ಸ್ಥಾನ ಹೊಸಪೇಟೆ ಆಗಿರಲಿದೆ.

ವಿಜಯನಗರ ಜಿಲ್ಲೆಯಲ್ಲಿ ಒಟ್ಟು 6 ತಾಲೂಕುಗಳು ಇರಲಿದೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ಘೋಷಿಸಿತ್ತು. ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲ್ಲೂಕುಗಳು ನೂತನ ಜಿಲ್ಲೆಯ ಭಾಗವಾಗಿದೆ.

ಇಷ್ಟು ದಿನ ಈ ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿದ್ದವು. ಮುಂದಿನ ದಿನಗಳಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ ಮತ್ತು ಸಂಡೂರು ತಾಲ್ಲೂಕುಗಳು ಮಾತ್ರ ಉಳಿಯುತ್ತವೆ.

ಅಸ್ತಿತ್ವಕ್ಕೆ ಬಂತು ವಿಜಯನಗರ ಜಿಲ್ಲೆ, ಬಳ್ಳಾರಿ ವಿಭಜನೆ; ಹೊರಬಿತ್ತು ಕರ್ನಾಟಕ ಸರ್ಕಾರದ ಅಧಿಸೂಚನೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ