AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಜೂಜು ನಿಯಂತ್ರಣಕ್ಕೆ ಸಂಬಂಧಿಸಿ ಹೈಕೋರ್ಟ್​ನಲ್ಲಿ ಪಿಐಎಲ್ ವಿಚಾರಣೆ

ಹೈಕೋರ್ಟ್​ಗೆ ಆನ್‌ಲೈನ್ ಗೇಮ್ಸ್ ಒಕ್ಕೂಟ, ಆನ್‌ಲೈನ್ ಗ್ಯಾಂಬ್ಲಿಂಗ್ ನಿಯಂತ್ರಿಸಲು ಸಮ್ಮತಿಯಿದ್ದು, ಆದರೆ ಸರ್ಕಾರ ಸ್ಕಿಲ್ ಗೇಮ್ ನಿರ್ಬಂಧಿಸಬಾರದು ಎಂದು ಮನವಿ ಮಾಡಿದೆ.

ಆನ್​ಲೈನ್ ಜೂಜು ನಿಯಂತ್ರಣಕ್ಕೆ ಸಂಬಂಧಿಸಿ ಹೈಕೋರ್ಟ್​ನಲ್ಲಿ ಪಿಐಎಲ್ ವಿಚಾರಣೆ
ಕರ್ನಾಟಕ ಹೈಕೋರ್ಟ್​
guruganesh bhat
|

Updated on: Jun 01, 2021 | 5:20 PM

Share

ಬೆಂಗಳೂರು: ಆನ್‌ಲೈನ್ ಜೂಜು ರದ್ದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಇಂದು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​ಗೆ ಆನ್‌ಲೈನ್ ಗೇಮ್ಸ್ ಒಕ್ಕೂಟ, ಆನ್‌ಲೈನ್ ಗ್ಯಾಂಬ್ಲಿಂಗ್ ನಿಯಂತ್ರಿಸಲು ಸಮ್ಮತಿಯಿದ್ದು, ಆದರೆ ಸರ್ಕಾರ ಸ್ಕಿಲ್ ಗೇಮ್ ನಿರ್ಬಂಧಿಸಬಾರದು ಎಂದು ಮನವಿ ಮಾಡಿದೆ. ಈ ಮನವಿಯನ್ನು ಆಲಿಸಿದ ಹೈಕೋರ್ಟ್ ಸರ್ಕಾರದ ಬಳಿ ತನ್ನ ನಿಲುವು ತಿಳಿಸಲು ಸೂಚಿಸಿದೆ.

ಈಗಾಗಲೇ ತಮಿಳುನಾಡು ಮತ್ತು ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಆನ್​ಲೈನ್ ಜೂಜಿನ ವಿರುದ್ಧ ಮಸೂದೆ ಅಂಗೀಕಾರವಾಗಿದೆ. ಆಂಧ್ರ ಪ್ರದೇಶ ಗೇಮಿಂಗ್ ಬಿಲ್ 2020ಯನ್ನು ಜಾರಿಗೊಳಿಸಲು ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಈ ಹಿಂದೆ ಆಂಧ್ರದಲ್ಲಿ, ಆನ್​ಲೈನ್ ಜೂಜಿನ ಸಾಲ ತೀರಿಸಲಾಗದೆ ಕೆಲವು ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಗಳ ಬೆನ್ನಲ್ಲೇ ಸರ್ಕಾರ ಆನ್​ಲೈನ್ ಜೂಜಾಟಗಳಿಗೆ ನಿರ್ಬಂಧ ಹೇರುವ ಮನಮಾಡಿದೆ.

ಕರ್ನಾಟಕದಲ್ಲಿ ಯಾವಾಗ? ಆನ್​ಲೈನ್ ಜೂಜಾಟಗಳನ್ನು ಬ್ಯಾನ್ ಮಾಡುವ ಬಗ್ಗೆ ಕರ್ನಾಟಕ ಸರ್ಕಾರವು ಹೇಳಿಕೆ ನೀಡುತ್ತಲೇ ಬಂದಿದ್ದು, ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಜೂಜಿನಲ್ಲಿ ಪಾಲ್ಗೊಳ್ಳುವ ಯುವಕರಿಂದ ಅವರ ಮನೆಯವರೂ ತೊಂದರೆ ಅನುಭವಿಸುತ್ತಿದ್ದಾರೆ. ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತಮಿಳುನಾಡು, ಆಂಧ್ರದ ಬಳಿಕ ಕರ್ನಾಟಕದಲ್ಲೂ ಆನ್​ಲೈನ್ ಗ್ಯಾಂಬ್ಲಿಂಗ್ ವಿರುದ್ಧ ಮಸೂದೆ ರಚಿಸಬೇಕು ಎಂಬ ಕೂಗು ಜೋರಾಗುತ್ತಿದೆ.

ಆನ್​ಲೈನ್ ಆಟಗಳಿಂದಾಗಿ ವಂಚನೆ, ಕಳ್ಳತನ ಮುಂತಾದ ಅಪರಾಧ ಕೃತ್ಯಗಳೂ ಹೆಚ್ಚುತ್ತವೆ ಎಂದು ಆಂಧ್ರ ಗೃಹ ಸಚಿವೆ ಎಮ್. ಸುಚರಿತಾ ಅಭಿಪ್ರಾಯಪಟ್ಟಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಅಪರಾಧಿಗಳಿಗೆ ಏನು ಶಿಕ್ಷೆ ಅಪರಾಧಿಗಳಿಗೆ 5 ಸಾವಿರ ದಂಡ ಮತ್ತು ಒಂದು ವರ್ಷದ ಜೈಲು ಶಿಕ್ಷೆಯನ್ನು ನಿಗಧಿಪಡಿಸಲಾಗಿದ್ದು, ಅಪರಾಧ ಮರುಕಳಿಸಿದರೆ ಅಂಥವರಿಗೆ 10 ಸಾವಿರ ದಂಡ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ನೀಡುವ ಬಗ್ಗೆ ತೀರ್ಮಾನಿಸಲಾಗಿದೆ. ಜಾಮೀನು ರಹಿತ ಶಿಕ್ಷೆ ಇದಾಗಿದೆ.

ಇದನ್ನೂ ಓದಿ: ಜುಲೈ 1ರೊಳಗೆ ಕೊವಿಡ್ ಮುಕ್ತ ಗುರಿ, ಮಹಿಳೆಯರಿಗೆ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ 

ಪರೀಕ್ಷೆ ನಡೆಯದಿದ್ದರೂ ಮುಂದಿನ ಸೆಮಿಸ್ಟರ್​ಗೆ ಆನ್‌ಲೈನ್‌ ಕ್ಲಾಸ್ ಆರಂಭಿಸಿ; ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಸೂಚನೆ

(PIL hearing on ban on Online Gambling in Karnataka High Court)

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು