AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಜೂಜು ನಿಯಂತ್ರಣಕ್ಕೆ ಸಂಬಂಧಿಸಿ ಹೈಕೋರ್ಟ್​ನಲ್ಲಿ ಪಿಐಎಲ್ ವಿಚಾರಣೆ

ಹೈಕೋರ್ಟ್​ಗೆ ಆನ್‌ಲೈನ್ ಗೇಮ್ಸ್ ಒಕ್ಕೂಟ, ಆನ್‌ಲೈನ್ ಗ್ಯಾಂಬ್ಲಿಂಗ್ ನಿಯಂತ್ರಿಸಲು ಸಮ್ಮತಿಯಿದ್ದು, ಆದರೆ ಸರ್ಕಾರ ಸ್ಕಿಲ್ ಗೇಮ್ ನಿರ್ಬಂಧಿಸಬಾರದು ಎಂದು ಮನವಿ ಮಾಡಿದೆ.

ಆನ್​ಲೈನ್ ಜೂಜು ನಿಯಂತ್ರಣಕ್ಕೆ ಸಂಬಂಧಿಸಿ ಹೈಕೋರ್ಟ್​ನಲ್ಲಿ ಪಿಐಎಲ್ ವಿಚಾರಣೆ
ಕರ್ನಾಟಕ ಹೈಕೋರ್ಟ್​
guruganesh bhat
|

Updated on: Jun 01, 2021 | 5:20 PM

Share

ಬೆಂಗಳೂರು: ಆನ್‌ಲೈನ್ ಜೂಜು ರದ್ದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಇಂದು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​ಗೆ ಆನ್‌ಲೈನ್ ಗೇಮ್ಸ್ ಒಕ್ಕೂಟ, ಆನ್‌ಲೈನ್ ಗ್ಯಾಂಬ್ಲಿಂಗ್ ನಿಯಂತ್ರಿಸಲು ಸಮ್ಮತಿಯಿದ್ದು, ಆದರೆ ಸರ್ಕಾರ ಸ್ಕಿಲ್ ಗೇಮ್ ನಿರ್ಬಂಧಿಸಬಾರದು ಎಂದು ಮನವಿ ಮಾಡಿದೆ. ಈ ಮನವಿಯನ್ನು ಆಲಿಸಿದ ಹೈಕೋರ್ಟ್ ಸರ್ಕಾರದ ಬಳಿ ತನ್ನ ನಿಲುವು ತಿಳಿಸಲು ಸೂಚಿಸಿದೆ.

ಈಗಾಗಲೇ ತಮಿಳುನಾಡು ಮತ್ತು ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಆನ್​ಲೈನ್ ಜೂಜಿನ ವಿರುದ್ಧ ಮಸೂದೆ ಅಂಗೀಕಾರವಾಗಿದೆ. ಆಂಧ್ರ ಪ್ರದೇಶ ಗೇಮಿಂಗ್ ಬಿಲ್ 2020ಯನ್ನು ಜಾರಿಗೊಳಿಸಲು ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಈ ಹಿಂದೆ ಆಂಧ್ರದಲ್ಲಿ, ಆನ್​ಲೈನ್ ಜೂಜಿನ ಸಾಲ ತೀರಿಸಲಾಗದೆ ಕೆಲವು ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಗಳ ಬೆನ್ನಲ್ಲೇ ಸರ್ಕಾರ ಆನ್​ಲೈನ್ ಜೂಜಾಟಗಳಿಗೆ ನಿರ್ಬಂಧ ಹೇರುವ ಮನಮಾಡಿದೆ.

ಕರ್ನಾಟಕದಲ್ಲಿ ಯಾವಾಗ? ಆನ್​ಲೈನ್ ಜೂಜಾಟಗಳನ್ನು ಬ್ಯಾನ್ ಮಾಡುವ ಬಗ್ಗೆ ಕರ್ನಾಟಕ ಸರ್ಕಾರವು ಹೇಳಿಕೆ ನೀಡುತ್ತಲೇ ಬಂದಿದ್ದು, ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಜೂಜಿನಲ್ಲಿ ಪಾಲ್ಗೊಳ್ಳುವ ಯುವಕರಿಂದ ಅವರ ಮನೆಯವರೂ ತೊಂದರೆ ಅನುಭವಿಸುತ್ತಿದ್ದಾರೆ. ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತಮಿಳುನಾಡು, ಆಂಧ್ರದ ಬಳಿಕ ಕರ್ನಾಟಕದಲ್ಲೂ ಆನ್​ಲೈನ್ ಗ್ಯಾಂಬ್ಲಿಂಗ್ ವಿರುದ್ಧ ಮಸೂದೆ ರಚಿಸಬೇಕು ಎಂಬ ಕೂಗು ಜೋರಾಗುತ್ತಿದೆ.

ಆನ್​ಲೈನ್ ಆಟಗಳಿಂದಾಗಿ ವಂಚನೆ, ಕಳ್ಳತನ ಮುಂತಾದ ಅಪರಾಧ ಕೃತ್ಯಗಳೂ ಹೆಚ್ಚುತ್ತವೆ ಎಂದು ಆಂಧ್ರ ಗೃಹ ಸಚಿವೆ ಎಮ್. ಸುಚರಿತಾ ಅಭಿಪ್ರಾಯಪಟ್ಟಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಅಪರಾಧಿಗಳಿಗೆ ಏನು ಶಿಕ್ಷೆ ಅಪರಾಧಿಗಳಿಗೆ 5 ಸಾವಿರ ದಂಡ ಮತ್ತು ಒಂದು ವರ್ಷದ ಜೈಲು ಶಿಕ್ಷೆಯನ್ನು ನಿಗಧಿಪಡಿಸಲಾಗಿದ್ದು, ಅಪರಾಧ ಮರುಕಳಿಸಿದರೆ ಅಂಥವರಿಗೆ 10 ಸಾವಿರ ದಂಡ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ನೀಡುವ ಬಗ್ಗೆ ತೀರ್ಮಾನಿಸಲಾಗಿದೆ. ಜಾಮೀನು ರಹಿತ ಶಿಕ್ಷೆ ಇದಾಗಿದೆ.

ಇದನ್ನೂ ಓದಿ: ಜುಲೈ 1ರೊಳಗೆ ಕೊವಿಡ್ ಮುಕ್ತ ಗುರಿ, ಮಹಿಳೆಯರಿಗೆ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ 

ಪರೀಕ್ಷೆ ನಡೆಯದಿದ್ದರೂ ಮುಂದಿನ ಸೆಮಿಸ್ಟರ್​ಗೆ ಆನ್‌ಲೈನ್‌ ಕ್ಲಾಸ್ ಆರಂಭಿಸಿ; ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಸೂಚನೆ

(PIL hearing on ban on Online Gambling in Karnataka High Court)

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?