AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿರೋಧಿಸಿ ಹೈಕೋರ್ಟ್​ಗೆ ಅರ್ಜಿ: ರಾಜ್ಯ ಸರ್ಕಾರದಿಂದ ಆಕ್ಷೇಪ ಸಲ್ಲಿಕೆ

ಗೋ ಸಂರಕ್ಷಣೆಯು ರಾಜ್ಯಪಟ್ಟಿಯಲ್ಲಿ ಬರುವ ವಿಚಾರವಾಗಿದೆ. ಈ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರಕ್ಕೆ ಅಧಿಕಾರವಿದೆ. ಅದನ್ನು ಬಳಸಿಕೊಂಡು ಕಾನೂನು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿತು.

ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿರೋಧಿಸಿ ಹೈಕೋರ್ಟ್​ಗೆ ಅರ್ಜಿ: ರಾಜ್ಯ ಸರ್ಕಾರದಿಂದ ಆಕ್ಷೇಪ ಸಲ್ಲಿಕೆ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Jun 09, 2021 | 8:21 PM

Share

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿರೋಧಿಸಿ ಹೈಕೋರ್ಟ್​ಗೆ ಸಲ್ಲಿಕೆಯಾಗಿರುವ ಕೆಲ ಅರ್ಜಿಗಳಿಗೆ ಕರ್ನಾಟಕ ಸರ್ಕಾರ ಬುಧವಾರ ಆಕ್ಷೇಪಣಾ ಪತ್ರ ಸಲ್ಲಿಸಿದೆ. ಗೋ ಸಂರಕ್ಷಣೆಯು ರಾಜ್ಯಪಟ್ಟಿಯಲ್ಲಿ ಬರುವ ವಿಚಾರವಾಗಿದೆ. ಈ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರಕ್ಕೆ ಅಧಿಕಾರವಿದೆ. ಅದನ್ನು ಬಳಸಿಕೊಂಡು ಕಾನೂನು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿತು.

ಕಳೆದ 10 ವರ್ಷಗಳಲ್ಲಿ ಜಾನುವಾರುಗಳ ಸಂಖ್ಯೆ ಜಾಸ್ತಿ ಆಗಿದೆ. ಜಾನುವಾರು ದೇಶದ ರೈತರ ಆದಾಯದ ಮೂಲವೂ ಹೌದು. ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುಜರಾತ್, ಮಹಾರಾಷ್ಟ್ರದಲ್ಲಿ ನ್ಯಾಯಾಲಯಗಳಿಗೆ ಅರ್ಜಿಗಳು ಸಲ್ಲಿಕೆಯಾಗಿದ್ದವು. ಅಲ್ಲಿನ ಸಾಂವಿಧಾನಿಕ ಪೀಠಗಳು ಇಂಥ ಅರ್ಜಿಗಳನ್ನು ತಿರಸ್ಕರಿಸಿ, ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದವು. ಈ 2 ತೀರ್ಪುಗಳ ಆಧಾರದಲ್ಲಿ ಇಲ್ಲಿ ಸಲ್ಲಿಕೆಯಾಗಿರುವ ರಿಟ್​ ಅರ್ಜಿಗಳನ್ನು ತಿರಸ್ಕರಿಸಬೇಕು ಎಂದು ರಾಜ್ಯ ಸರ್ಕಾರವು ಆಕ್ಷೇಪಣಾ ಪತ್ರ ಸಲ್ಲಿಸಿದೆ ಎಂದು ರಾಜ್ಯ ಸರ್ಕಾರವು ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದೆ.

ಏಕೆ ವಿರೋಧ? ಗೋಹತ್ಯೆ ನಿಷೇಧ ಕಾಯ್ದೆಯ ತಿದ್ದುಪಡಿ ಕಾನೂನು ಜಾರಿಯಾದ ನಂತರ ವಯಸ್ಸಾದ ಜಾನುವಾರುಗಳನ್ನು ಸಾಕಲು ರೈತರು ಕಷ್ಟಪಡುವಂತೆ ಆಗಿದೆ ಎಂದು ಹಲವರು ದೂರಿದ್ದರು. ಜಾನುವಾರು ಮಾರಲಾಗದೆ ಪರದಾಡುತ್ತಿರುವ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನಮ್ಮ ಬೆಳೆಯ ಬದಲು, ಸರ್ಕಾರ ಹಸುಕರುಗಳನ್ನು ಖರೀದಿಸಲಿ ಎಂದು ಆಗ್ರಹಿಸಿದ್ದರು.

(PIL in Karnataka High Court Against Anti Cow Slaughter Bill)

ಇದನ್ನೂ ಓದಿ: ನಾವು ಬೀಫ್ ರಪ್ತು ಮಾಡಿದರೆ ಲಾಭ ಆಗುತ್ತಲ್ವಾ: ಗೋಹತ್ಯೆ ಬಗ್ಗೆ ವಿಧಾನಸಭೆಯಲ್ಲಿ ರಮೇಶ್​ ಕುಮಾರ್​ ಮಾತು

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡುವಾಗ ಮಾರ್ಗಸೂಚಿ ಪಾಲನೆಯಲ್ಲಿ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಖಡಕ್ ಸೂಚನೆ

Published On - 8:20 pm, Wed, 9 June 21

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​