AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿರೋಧಿಸಿ ಹೈಕೋರ್ಟ್​ಗೆ ಅರ್ಜಿ: ರಾಜ್ಯ ಸರ್ಕಾರದಿಂದ ಆಕ್ಷೇಪ ಸಲ್ಲಿಕೆ

ಗೋ ಸಂರಕ್ಷಣೆಯು ರಾಜ್ಯಪಟ್ಟಿಯಲ್ಲಿ ಬರುವ ವಿಚಾರವಾಗಿದೆ. ಈ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರಕ್ಕೆ ಅಧಿಕಾರವಿದೆ. ಅದನ್ನು ಬಳಸಿಕೊಂಡು ಕಾನೂನು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿತು.

ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿರೋಧಿಸಿ ಹೈಕೋರ್ಟ್​ಗೆ ಅರ್ಜಿ: ರಾಜ್ಯ ಸರ್ಕಾರದಿಂದ ಆಕ್ಷೇಪ ಸಲ್ಲಿಕೆ
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 09, 2021 | 8:21 PM

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿರೋಧಿಸಿ ಹೈಕೋರ್ಟ್​ಗೆ ಸಲ್ಲಿಕೆಯಾಗಿರುವ ಕೆಲ ಅರ್ಜಿಗಳಿಗೆ ಕರ್ನಾಟಕ ಸರ್ಕಾರ ಬುಧವಾರ ಆಕ್ಷೇಪಣಾ ಪತ್ರ ಸಲ್ಲಿಸಿದೆ. ಗೋ ಸಂರಕ್ಷಣೆಯು ರಾಜ್ಯಪಟ್ಟಿಯಲ್ಲಿ ಬರುವ ವಿಚಾರವಾಗಿದೆ. ಈ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರಕ್ಕೆ ಅಧಿಕಾರವಿದೆ. ಅದನ್ನು ಬಳಸಿಕೊಂಡು ಕಾನೂನು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿತು.

ಕಳೆದ 10 ವರ್ಷಗಳಲ್ಲಿ ಜಾನುವಾರುಗಳ ಸಂಖ್ಯೆ ಜಾಸ್ತಿ ಆಗಿದೆ. ಜಾನುವಾರು ದೇಶದ ರೈತರ ಆದಾಯದ ಮೂಲವೂ ಹೌದು. ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುಜರಾತ್, ಮಹಾರಾಷ್ಟ್ರದಲ್ಲಿ ನ್ಯಾಯಾಲಯಗಳಿಗೆ ಅರ್ಜಿಗಳು ಸಲ್ಲಿಕೆಯಾಗಿದ್ದವು. ಅಲ್ಲಿನ ಸಾಂವಿಧಾನಿಕ ಪೀಠಗಳು ಇಂಥ ಅರ್ಜಿಗಳನ್ನು ತಿರಸ್ಕರಿಸಿ, ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದವು. ಈ 2 ತೀರ್ಪುಗಳ ಆಧಾರದಲ್ಲಿ ಇಲ್ಲಿ ಸಲ್ಲಿಕೆಯಾಗಿರುವ ರಿಟ್​ ಅರ್ಜಿಗಳನ್ನು ತಿರಸ್ಕರಿಸಬೇಕು ಎಂದು ರಾಜ್ಯ ಸರ್ಕಾರವು ಆಕ್ಷೇಪಣಾ ಪತ್ರ ಸಲ್ಲಿಸಿದೆ ಎಂದು ರಾಜ್ಯ ಸರ್ಕಾರವು ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದೆ.

ಏಕೆ ವಿರೋಧ? ಗೋಹತ್ಯೆ ನಿಷೇಧ ಕಾಯ್ದೆಯ ತಿದ್ದುಪಡಿ ಕಾನೂನು ಜಾರಿಯಾದ ನಂತರ ವಯಸ್ಸಾದ ಜಾನುವಾರುಗಳನ್ನು ಸಾಕಲು ರೈತರು ಕಷ್ಟಪಡುವಂತೆ ಆಗಿದೆ ಎಂದು ಹಲವರು ದೂರಿದ್ದರು. ಜಾನುವಾರು ಮಾರಲಾಗದೆ ಪರದಾಡುತ್ತಿರುವ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನಮ್ಮ ಬೆಳೆಯ ಬದಲು, ಸರ್ಕಾರ ಹಸುಕರುಗಳನ್ನು ಖರೀದಿಸಲಿ ಎಂದು ಆಗ್ರಹಿಸಿದ್ದರು.

(PIL in Karnataka High Court Against Anti Cow Slaughter Bill)

ಇದನ್ನೂ ಓದಿ: ನಾವು ಬೀಫ್ ರಪ್ತು ಮಾಡಿದರೆ ಲಾಭ ಆಗುತ್ತಲ್ವಾ: ಗೋಹತ್ಯೆ ಬಗ್ಗೆ ವಿಧಾನಸಭೆಯಲ್ಲಿ ರಮೇಶ್​ ಕುಮಾರ್​ ಮಾತು

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡುವಾಗ ಮಾರ್ಗಸೂಚಿ ಪಾಲನೆಯಲ್ಲಿ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಖಡಕ್ ಸೂಚನೆ

Published On - 8:20 pm, Wed, 9 June 21

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ