AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಯಾತ್ರೆ: ಯಾತ್ರಿಕರಿಗೆ ಸಬ್ಸಿಡಿ ಆಫರ್; ಟಿಕೆಟ್ ಬುಕ್ ಹೇಗೆ?

ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯು ದಕ್ಷಿಣ ಯಾತ್ರಾ ಯೋಜನೆ ಆರಂಭಿಸಿದ್ದು, ದಕ್ಷಿಣ ಭಾರತದ ಪ್ರಸಿದ್ಧ ತೀರ್ಥಕ್ಷೇತ್ರಗಳಿಗೆ ಈ ಯಾತ್ರೆ ನಡೆಯಲಿದೆ. ಆಸಕ್ತರು ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡಬಹುದಾಗಿದ್ದು, ಯಾತ್ರಿಕರಿಗೆ ಸಬ್ಸಿಡಿ ಆಫರ್ ಕೂಡ ನೀಡಲಾಗಿದೆ. ಮೊದಲ ಹಂತದಲ್ಲಿ ಎರಡು ರೈಲುಗಳಲ್ಲಿ ದಕ್ಷಿಣ ಯಾತ್ರೆ ನಡೆಯಲಿದೆ.

ದಕ್ಷಿಣದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಯಾತ್ರೆ: ಯಾತ್ರಿಕರಿಗೆ ಸಬ್ಸಿಡಿ ಆಫರ್; ಟಿಕೆಟ್ ಬುಕ್ ಹೇಗೆ?
ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಯಾತ್ರೆ: ಯಾತ್ರಿಕರಿಗೆ ಸಬ್ಸಿಡಿ ಆಫರ್; ಆನ್​ಲೈನ್ ಮೂಲಕ ಟಿಕೆಟ್ ಬುಕ್
ಕಿರಣ್​ ಸೂರ್ಯ
| Edited By: Rakesh Nayak Manchi|

Updated on: Jan 12, 2024 | 8:57 AM

Share

ಬೆಂಗಳೂರು, ಜ.12: ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯು ದಕ್ಷಿಣ ಯಾತ್ರಾ (Dakshina Yatra) ಯೋಜನೆ ಆರಂಭಿಸಿದ್ದು, ದಕ್ಷಿಣ ಭಾರತದ ಪ್ರಸಿದ್ಧ ತೀರ್ಥಕ್ಷೇತ್ರಗಳಿಗೆ ಈ ಯಾತ್ರೆ ನಡೆಯಲಿದೆ. ಆಸಕ್ತರು ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡಬಹುದಾಗಿದ್ದು, ಯಾತ್ರಿಕರಿಗೆ ಸಬ್ಸಿಡಿ ಆಫರ್ ಕೂಡ ನೀಡಲಾಗಿದೆ.

ದಕ್ಷಿಣ ತೀರ್ಥಕ್ಷೇತ್ರಗಳಿಗೆ ನಡೆಯು ಯಾತ್ರೆಗೆ ಧಾರ್ಮಿಕ ದತ್ತಿ ಇಲಾಖೆ ಟಿಕೆಟ್ ಬುಕ್ಕಿಂಗ್ ಆರಂಭಿಸಿದ್ದು, ಆಸಕ್ತ ಜನರು IRCTC ರೈಲ್ವೇ ಆ್ಯಪ್ ಮೂಲಕ ಆನ್​ಲೈನ್​ನಲ್ಲಿ ಟಿಕೆಟ್ ಬುಕ್ ಮಾಡಬಹುದು. ಮೊದಲ ಹಂತದಲ್ಲಿ ಎರಡು ರೈಲುಗಳಲ್ಲಿ ದಕ್ಷಿಣ ಯಾತ್ರೆ ನಡೆಯಲಿದೆ.

ಇದನ್ನೂ ಓದಿ: ತೆಲಂಗಾಣದ ವೃದ್ಧ ಶ್ರೀನಿವಾಸ ಶಾಸ್ತ್ರಿ ಪಾದುಕೆ ಹೊತ್ತು ಅಯೋಧ್ಯೆಯತ್ತ ಪಾದಯಾತ್ರೆ

ದಕ್ಷಿಣ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಒಟ್ಟು ಆರು ದಿನಗಳ ಯಾತ್ರೆ ನಡೆಯಲಿದೆ. ಇದಕ್ಕೆ ಒಟ್ಟು ತಗಲುವ ವೆಚ್ಚ 15 ಸಾವಿರ ರೂಪಾಯಿ ಆಗಿದ್ದು, ಸರ್ಕಾರದಿಂದ 5 ಸಾವಿರ ರೂಪಾಯಿ ಸಬ್ಸಿಡಿ ಸಿಗಲಿದೆ. ಯಾತ್ರೆಗೆ ಹೋಗುವವರು 10 ಸಾವಿರ ರೂಪಾಯಿ ಮಾತ್ರ ಪಾವತಿಸಬೇಕು. ದಕ್ಷಿಣದ ಯಾತ್ರೆ ಸಂಬಂಧ ಮೊದಲ ರೈಲು ಜನವರಿ 18 ರಂದು ಹೊರಡಲಿದೆ. ಜನವರಿ 30 ರಂದು ಎರಡನೇ ರೈಲು ಹೊರಡಲಿದೆ. 3 ಟೈಯರ್ ಎಸಿ ಕೋಚ್​​ಗಳಲ್ಲಿ ಈ ಯಾತ್ರೆ ನಡೆಯಲಿದೆ.

ಪ್ರಸಿದ್ಧ ತೀರ್ಥಕ್ಷೇತ್ರಗಳು

ರಾಮೇಶ್ವರ, ಕನ್ಯಾಕುಮಾರಿ, ಮಧುರೈ ಹಾಗೂ ತಿರುವನಂತಪುರಂನಲ್ಲಿರುವ ತೀರ್ಥ ಕ್ಷೇತ್ರಗಳ ದರ್ಶನ ಮಾಡಿಸುವ ಯಾತ್ರೆ ಇದಾಗಿದೆ. ಬೆಳಗಾವಿ, ಹುಬ್ಬಳ್ಳಿ, ಬೀರೂರು, ತುಮಕೂರು, ಹಾವೇರಿ, ದಾವಣಗೆರೆ, ಯಶವಂತಪುರ ನಿಲ್ದಾಣಗಳಿಂದ ಯಾತ್ರಿಕರು ರೈಲು ಹತ್ತಬಹುದು.

ವಿಶೇಷ ವೈದ್ಯಕೀಯ ವ್ಯವಸ್ಥೆ

ದಕ್ಷಿಣ ತೀರ್ಥಕ್ಷೇತ್ರ ಯಾತ್ರೆ ವೇಳೆ ಕೆಲವು ಯಾತ್ರಿಕರು ಪ್ರಯಾಣದ ವೇಳೆ ಆಯಾಸ ಸೇರಿದಂತೆ ಇನ್ನಿತರ ಆರೋಗ್ಯ ಸಮಸ್ಯೆಯಿಂದ ಬಳಲುವ ಸಾಧ್ಯತೆ ಇರುವ ಹಿನ್ನೆಲೆ ಧಾರ್ಮಿಕ ದತ್ತಿ ಇಲಾಖೆಯು ಯಾತ್ರಾರ್ಥಿಗಳಿಗೆ ವಿಶೇಷ ವೈದ್ಯಕೀಯ ವ್ಯವಸ್ಥೆಯನ್ನೂ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ