AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣಿಗಳ ದಾಖಲೆಯ ಸಂತಾನಾಭಿವೃದ್ಧಿ; ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ಸಂತಸದ ವಾತಾವರಣ

ದೇಶದ 17 ಬೃಹತ್ ವಿವಿಧ ಮೃಗಾಲಯದಲ್ಲಿ ಒಂದಾಗಿರುವ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳು ದಾಖಲೆ ಸಂಖ್ಯೆಯ ಸಂತಾನಾಭಿವೃದ್ದಿಯನ್ನು ಮಾಡಿದೆ. ಇಲ್ಲಿನ ರಾಣಿ ಎಂಬ ಹುಲಿ, ಕಾಡು ಶ್ವಾನ ದೋಳ್, ರಿಯಾ ಜಾತಿಯ ಪಕ್ಷಿ, ಲಟಿಕ್ಯುಲೇಚಿಡ್ ಜಾತಿಯ ಹೆಬ್ಬಾವು, ಕಾಳಿಂಗ ಸರ್ಪ ತನ್ನ ಸಂತಾನವನ್ನು ಹೆಚ್ಚು ಮಾಡಿಕೊಂಡಿದೆ.

ಪ್ರಾಣಿಗಳ ದಾಖಲೆಯ ಸಂತಾನಾಭಿವೃದ್ಧಿ; ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ಸಂತಸದ ವಾತಾವರಣ
ಲಾಕ್‌ಡೌನ್ ಸಮಯದಲ್ಲಿ ಪ್ರಾಣಿಗಳ ದಾಖಲೆಯ ಸಂತಾನಾಭಿವೃದ್ಧಿ
TV9 Web
| Edited By: |

Updated on:Jun 09, 2021 | 11:31 AM

Share

ದಕ್ಷಿಣ ಕನ್ನಡ: ಕೊರೊನಾ ಪ್ರಾರಂಭವಾದ ದಿನದಿಂದ ಸಾವು- ನೋವಿನ ಸಂಗತಿಗಳ ಬಗ್ಗೆಯೇ ಹೆಚ್ಚು ಸುದ್ದಿಗಳು ಕೇಳಿ ಬರುತ್ತಿದ್ದವು. ಅದರಲ್ಲೂ ಕೊರೊನಾದಿಂದಾಗಿ ಅನೇಕರು ತಮ್ಮ ಕುಟುಂಬದವರನ್ನು ಕಳೆದುಕೊಂಡು ತಬ್ಬಲಿಗಳಾಗಿದ್ದಾರೆ. ಇನ್ನು ಲಾಕ್​ಡೌನ್​ನಿಂದಾಗಿ ವ್ಯಾಪಾರ ನಡೆಯದೆ ಹಲವರು ಸಂಕಷ್ಟದಲ್ಲಿದ್ದಾರೆ. ಆದರೆ ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ಸಂತಸದ ಬೆಳವಣಿಗೆಯೊಂದು ನಡೆದಿದ್ದು, ಲಾಕ್‌ಡೌನ್ ಸಮಯದಲ್ಲಿ ಪ್ರಾಣಿಗಳ ಅತೀ ಹೆಚ್ಚಿನ ಸಂತಾನಾಭಿವೃದ್ದಿಯಾಗಿದೆ.

ದೇಶದ 17 ಬೃಹತ್ ವಿವಿಧ ಮೃಗಾಲಯದಲ್ಲಿ ಒಂದಾಗಿರುವ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳು ದಾಖಲೆ ಸಂಖ್ಯೆಯ ಸಂತಾನಾಭಿವೃದ್ದಿಯನ್ನು ಮಾಡಿದೆ. ಇಲ್ಲಿನ ರಾಣಿ ಎಂಬ ಹುಲಿ, ಕಾಡು ಶ್ವಾನ ದೋಳ್, ರಿಯಾ ಜಾತಿಯ ಪಕ್ಷಿ, ಲಟಿಕ್ಯುಲೇಚಿಡ್ ಜಾತಿಯ ಹೆಬ್ಬಾವು, ಕಾಳಿಂಗ ಸರ್ಪ ತನ್ನ ಸಂತಾನವನ್ನು ಹೆಚ್ಚು ಮಾಡಿಕೊಂಡಿದೆ.

10 ವರ್ಷ ಪ್ರಾಯದ ರಾಣಿ ಹೆಸರಿನ ಹುಲಿ ಮೂರು ಮರಿಗಳಿಗೆ ಜನ್ಮ ನೀಡಿದರೆ, ದೋಳ್ ಜಾತಿಯ ಕಾಡುಶ್ವಾನ ಏಳು ಮರಿಗಳಿಗೆ ಜನ್ಮ ನೀಡಿದೆ. ಇನ್ನು ಉಷ್ಟ್ರ ಪಕ್ಷಿಯ ವರ್ಗಕ್ಕೆ ಸೇರಿದ ರಿಯಾ ಮೊಟ್ಟೆಯಿಟ್ಟಿದ್ದು, ರೆಟಿಕ್ಯುಲೇಟಿಡ್ ಜಾತಿಯ ಹೆಬ್ಬಾವು 20 ಮೊಟ್ಟೆಯಿಟ್ಟು ಕಾವು ಕೊಡುತ್ತಿದೆ. ಕಾಳಿಂಗ ಸರ್ಪ ಆರು ಮೊಟ್ಟೆಯಿಟ್ಟಿದ್ದು ಕೃತಕ ಕಾವು ನೀಡಲಾಗುತ್ತಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ತಿಳಿಸಿದ್ದಾರೆ.

ಪಿಲಿಕುಳದಲ್ಲಿ ಕೇವಲ ಜೈವಿಕ ಉದ್ಯಾನವನವೇ ಸುಮಾರು 150 ಎಕರೆ ಪ್ರದೇಶದಲ್ಲಿ ವ್ಯಾಪಿಸಿಕೊಂಡಿದ್ದು, ವಿವಿಧ ಪ್ರಭೇದದ 1,200ಕ್ಕೂ ಅಧಿಕ ಪ್ರಾಣಿ, ಪಕ್ಷಿ ಉರಗಗಳಿವೆ. ಇಲ್ಲಿ ಪ್ರಾಣಿ, ಪಕ್ಷಿಗಳಿಗೆ ನೈಸರ್ಗಿಕವಾದ ವಾತಾವರಣದ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಕಲ್ಪಿಸಲಾಗಿದೆ. ಇದರ ಪರಿಣಾಮ ಇಲ್ಲಿಗೆ ತಂದ ಹೆಚ್ಚಿನ ಪ್ರಾಣಿ, ಪಕ್ಷಿಗಳು ಸಂತಾನಾಭಿವೃದ್ಧಿಯನ್ನು ಮಾಡುತ್ತಿದೆ. ಸದ್ಯ ಈಗೀನ ಸಂತಾನಾಭಿವೃದ್ಧಿಯಿಂದ ಪಿಲಿಕುಳದಲ್ಲಿ ಹುಲಿಗಳ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಕಾಡುಶ್ವಾನಗಳ ಸಂಖ್ಯೆ 32ಕ್ಕೆ ಏರಿದೆ. ಕಾಳಿಂಗ ಸರ್ಪ 19 ಇದೆ. ಇನ್ನು ಲಾಕ್‌ಡೌನ್ ಮುಗಿದ ಬಳಿಕ ಪ್ರಾಣಿ ವಿನಿಮಯದಲ್ಲಿ ಚೆನ್ನೈಯ ವಂಡಲೂರು ಮೃಗಾಲಯದಿಂದ ಬಿಳಿ ಹುಲಿಯನ್ನು ತರಿಸುವ ನಿರ್ಧಾರವಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ಹೇಳಿದ್ದಾರೆ.

ಸದ್ಯ ಅನ್‌ಲಾಕ್ ಆದ ಬಳಿಕ ಸರ್ಕಾರ ಮೃಗಾಲಯಕ್ಕೆ ಪ್ರವಾಸಿಗರ ಭೇಟಿಗೆ ಅವಕಾಶ ನೀಡಿದರೆ ಪಿಲಿಕುಳದ ಮೃಗಾಲಯಕ್ಕೂ ಭೇಟಿ ನೀಡಿ ಮತ್ತು ಹೊಸ ಪ್ರಾಣಿಗಳನ್ನು ವಿಕ್ಷಿಸಿ. ಒಟ್ಟಿನಲ್ಲಿ ವಿನಾಶದ ಅಂಚಿನಲ್ಲಿರುವ ಪ್ರಾಣಿಗಳನ್ನು ಇಂತಹ ಉದ್ಯಾನವನಗಳ ಮೂಲಕ ರಕ್ಷಿಸುವ ಕಾರ್ಯ ನಡೆಯುತ್ತಿರುವುದು ನಿಜಕ್ಕೂ ಶ್ಲಾಘನೀಯ.

ಇದನ್ನೂ ಓದಿ:

ಲಾಕ್​ಡೌನ್​ನಿಂದಾಗಿ ಆಲಿವ್ ರಿಡ್ಲೆ ಕಡಲಾಮೆಗಳ ಸಂತತಿ ಹೆಚ್ಚಳ; ಹೊನ್ನಾವರದ ಅರಣ್ಯಾಧಿಕಾರಿಗಳಿಂದ 900 ಮೊಟ್ಟೆಗಳ ರಕ್ಷಣೆ

ಕೊರೊನಾ ಕಾಲದಲ್ಲಿ ಪ್ರಾಣಿಗಳ ನೆರವಿಗೆ ನಿಂತ ಕಾರವಾರದ ಸೇವಾ ಸಂಘ; ಹಸಿದ ಶ್ವಾನಗಳಿಗೆ ಊಟ ನೀಡಿ ಸಹಾಯ

Published On - 11:30 am, Wed, 9 June 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?