AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಕಾಫಿಗೆ ಸಿಗಲಿದೆಯೇ ಚಿನ್ನದ ಬೆಲೆ? ಕೇಂದ್ರ ಸಚಿವ ಪೀಯೂಷ್ ಗೋಯಲ್ ಕೊಟ್ಟರು ಮಹತ್ವದ ಭರವಸೆ

ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಕರ್ನಾಟಕದ ಕಾಫಿ ಬೆಳೆಗಾರರಿಗೆ ಮಹತ್ವದ ಭರವಸೆ ನೀಡಿದ್ದಾರೆ. ಕಾಫಿ ಬೆಳೆಗೆ ಚಿನ್ನದಂತಹ ಮೌಲ್ಯ, ಬೆಲೆ ಬರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಮಗ್ರ ಕಾಫಿ ಅಭಿವೃದ್ಧಿ ಯೋಜನೆ ಮರು ಆರಂಭ, ಹೊಸ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆ ಹಾಗೂ ಹೆಚ್ಚುವರಿ ಅನುದಾನದ ಭರವಸೆ ನೀಡಲಾಗಿದೆ. ವಿವರಗಳು ಇಲ್ಲಿವೆ.

ಕರ್ನಾಟಕದ ಕಾಫಿಗೆ ಸಿಗಲಿದೆಯೇ ಚಿನ್ನದ ಬೆಲೆ? ಕೇಂದ್ರ ಸಚಿವ ಪೀಯೂಷ್ ಗೋಯಲ್ ಕೊಟ್ಟರು ಮಹತ್ವದ ಭರವಸೆ
ಪೀಯೂಷ್ ಗೋಯಲ್
ಗಣಪತಿ ಶರ್ಮಾ
|

Updated on: Dec 24, 2024 | 7:00 AM

Share

ಸಕಲೇಶಪುರ, ಡಿಸೆಂಬರ್ 24: ಕೋಲಾರ ಚಿನ್ನದ ಗಣಿಯ ನಂತರ ಇದೀಗ ಕರ್ನಾಟಕದ ಪಾಲಿಗೆ ಕಾಫಿ ಬೆಳೆಯೂ ಚಿನ್ನವಾಗಿ ಪರಿಣಮಿಸಲಿದೆ! ಅದಕ್ಕೆ ಬೇಕಾದ ಎಲ್ಲ ಅಗತ್ಯ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಭರವಸೆ ನೀಡಿದ್ದಾರೆ. ಇದರಿಂದ, ಕರ್ನಾಟಕದ ಕಾಫಿಗೂ ಚಿನ್ನದ ಬೆಲೆ ಬರಬಹುದೇ ಎಂಬ ನಿರೀಕ್ಷೆ ಗರಿಗೆದರಿದೆ. ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ​​ಒಕ್ಕೂಟ ಆಯೋಜಿಸಿದ್ದ ಕಾಫಿ ಬೆಳೆಗಾರರ ​​ಸಮಾವೇಶವನ್ನು ಉದ್ಘಾಟಿಸಿ ಅವರು ಸೋಮವಾರ ಮಾತನಾಡಿದ್ದ ವೇಳೆ ಈ ಭರವಸೆ ನೀಡಿದ್ದಾರೆ.

2011ರಿಂದ ಸ್ಥಗಿತಗೊಂಡಿದ್ದ ಸಮಗ್ರ ಕಾಫಿ ಅಭಿವೃದ್ಧಿ ಯೋಜನೆ ಮರು ಅನುಷ್ಠಾನಗೊಳಿಸಲಾಗುವುದು. ಇದು ಕಾಫಿ ಗುಣಮಟ್ಟ ಹಾಗೂ ಯಾಂತ್ರೀಕರಣಕ್ಕೆ ಒತ್ತು ನೀಡಲಿದೆ. ಜತೆಗೆ, ರೈತ ಉತ್ಪಾದಕ ಕಂಪನಿಗಳ ಮೂಲಕ ಅಗತ್ಯ ಪರಿಕರಗಳನ್ನು ಒದಗಿಸಲು ಅನುಕೂಲವಾಗಲಿದೆ. ಇದರಿಂದ ಕಾಫಿಯ ಮೌಲ್ಯವರ್ಧನೆಯಾಗಲಿದೆ ಎಂದು ಗೋಯಲ್ ಹೇಳಿದ್ದಾರೆ.

ಬಾಳೆಹೊನ್ನೂರಿನಲ್ಲಿ ಕಾಫಿ ಕೌಶಲ ಅಭಿವೃದ್ಧಿ ಕೇಂದ್ರ

ಕಾಫಿ ಅಭಿವೃದ್ಧಿಗಾಗಿ ಸ್ಟಾರ್ಟಪ್‌ಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನಿರ್ಧರಿಸಲಾಗಿದೆ. ಬಾಳೆಹೊನ್ನೂರಿನಲ್ಲಿ ಕಾಫಿ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಅಗತ್ಯ ಅನುದಾನ ನೀಡಲು ಕೇಂದ್ರ ಬದ್ಧವಾಗಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಕಾಫಿ ಬೆಳೆಗಾರರಿಗೆ ಸಹಾಯಧನಕ್ಕಾಗಿ 100 ಕೋಟಿ ರೂ. ಹೆಚ್ಚುವರಿ ಅನುದಾನ

ಕಾಫಿ ಬೆಳೆಗಾರರಿಗೆ ಸಹಾಯಧನ ನೀಡಲು 100 ಕೋಟಿ ರೂ. ಹೆಚ್ಚುವರಿ ಅನುದಾನದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು. ಈಗಾಗಲೇ ಸಲ್ಲಿಕೆಯಾಗಿರುವ 21,000 ಅರ್ಜಿಗಳಿಗೆ ಸಹಾಯಧನ ನೀಡಲಾಗುವುದು ಎಂದು ಗೋಯಲ್ ಮಾಹಿತಿ ನೀಡಿದ್ದಾರೆ.

ಹಾಸನ ಪ್ರದೇಶದಲ್ಲಿ ಮಾನವ-ಪ್ರಾಣಿ ಸಂಘರ್ಷದ ಕುರಿತು ಮಾತನಾಡಿದ ಗೋಯಲ್, ಈ ಕುರಿತ ಅಧ್ಯಯನಕ್ಕೆ ಐಐಎಸ್‌ಸಿ ಬೆಂಗಳೂರು ಪ್ರೊಫೆಸರ್ ಸುರೇಂದ್ರ ವರ್ಮಾ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗುವುದು. ಸಮಿತಿ ವರದಿ ಆಧರಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಹೆಚ್​ಡಿ ಕುಮಾರಸ್ವಾಮಿ ಗುಡ್ ನ್ಯೂಸ್

40 ವರ್ಷಗಳ ಬಳಿಕ ಪಿಯೂಷ್ ಗೋಯಲ್ ಅವರು ಸಕಲೇಶಪುರಕ್ಕೆ ಭೇಟಿ ನೀಡಿದ ಮೊದಲ ಕೇಂದ್ರ ಸಚಿವರಾಗಿದ್ದು, ಮುಂಬರುವ ಬಜೆಟ್​ನಲ್ಲಿ ಕಾಫಿ ಬೆಳೆಗಾರರ ​​ಹಿತ ಕಾಪಾಡಲು ಈಗಾಗಲೇ ಯೋಜನೆ ರೂಪಿಸಿದ್ದಾರೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು