‘ಸಿದ್ದರಾಮಯ್ಯ ಕಾನೂನು ಪದವೀಧರರು, ಕರಿ ಕೋಟು ಧರಿಸಿ ಅವರೇ ನಳಿನಿ ಪರ ವಕಾಲತ್ತು ವಹಿಸಲಿ’

ಮೈಸೂರು: ಫ್ರೀ ಕಾಶ್ಮೀರ ಫಲಕ ಪ್ರದರ್ಶನ ಮಾಡಿದ್ದ ನಳಿನಿ ಪರ ಬ್ಯಾಟಿಂಗ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮೈಸೂರಿನ ಹಿರಿಯ ನ್ಯಾಯವಾದಿ ಪಿ.ಜೆ.ರಾಘವೇಂದ್ರ ಬಹಿರಂಗ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯ ಕಾನೂನು ಪದವೀಧರರು ಅವರೇ ಆಪಾದಿತೆ ನಳಿನಿ ಪರ ವಾದ ಮಂಡಿಸಲಿ ಎಂದು ಬಹಿರಂಗ ಆಹ್ವಾನ ಮಾಡಿದ್ದಾರೆ. ಮೈಸೂರು ವಿವಿಯಲ್ಲಿ ಸಿಎಎ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಫ್ರೀ ಕಾಶ್ಮೀರ ಫಲಕ ಪ್ರದರ್ಶನ ಮಾಡಿದ್ದ ನಳಿನಿ ನಿಲುವನ್ನು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದರು. ಫಲಕ ಹಿಡಿದ್ರೆ ದೇಶ ದ್ರೋಹವಲ್ಲ ಎಂದಿದ್ದರು. ಹೀಗಾಗಿ ಪಿ.ಜೆ.ರಾಘವೇಂದ್ರ […]

ಸಿದ್ದರಾಮಯ್ಯ ಕಾನೂನು ಪದವೀಧರರು, ಕರಿ ಕೋಟು ಧರಿಸಿ ಅವರೇ ನಳಿನಿ ಪರ ವಕಾಲತ್ತು ವಹಿಸಲಿ
ಸಾಧು ಶ್ರೀನಾಥ್​

Updated on: Jan 24, 2020 | 12:21 PM

ಮೈಸೂರು: ಫ್ರೀ ಕಾಶ್ಮೀರ ಫಲಕ ಪ್ರದರ್ಶನ ಮಾಡಿದ್ದ ನಳಿನಿ ಪರ ಬ್ಯಾಟಿಂಗ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮೈಸೂರಿನ ಹಿರಿಯ ನ್ಯಾಯವಾದಿ ಪಿ.ಜೆ.ರಾಘವೇಂದ್ರ ಬಹಿರಂಗ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯ ಕಾನೂನು ಪದವೀಧರರು ಅವರೇ ಆಪಾದಿತೆ ನಳಿನಿ ಪರ ವಾದ ಮಂಡಿಸಲಿ ಎಂದು ಬಹಿರಂಗ ಆಹ್ವಾನ ಮಾಡಿದ್ದಾರೆ.

ಮೈಸೂರು ವಿವಿಯಲ್ಲಿ ಸಿಎಎ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಫ್ರೀ ಕಾಶ್ಮೀರ ಫಲಕ ಪ್ರದರ್ಶನ ಮಾಡಿದ್ದ ನಳಿನಿ ನಿಲುವನ್ನು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದರು. ಫಲಕ ಹಿಡಿದ್ರೆ ದೇಶ ದ್ರೋಹವಲ್ಲ ಎಂದಿದ್ದರು. ಹೀಗಾಗಿ ಪಿ.ಜೆ.ರಾಘವೇಂದ್ರ ಸಿದ್ದರಾಮಯ್ಯಗೆ ಆಹ್ವಾನ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಸಿದ್ದರಾಮಯ್ಯನವರ ಗಮನಕ್ಕೆ ಎಂದು ಬರೆದು ಸಿದ್ದರಾಮಯ್ಯ ಕಾನೂನು ಪದವೀಧರರು. ವಕೀಲರಾಗಿದ್ದವರು ಈಗಲೂ ವಕೀಲರಾಗಿ ಕಾರ್ಯ ನಿರ್ವಹಿಸಬಲ್ಲರು. ಅವರ ಹೇಳಿಕೆಯನ್ನು ಮಾಧ್ಯಮದ ಮುಂದೆ ಹೇಳುವ ಬದಲು ಅವರೇ ಕರಿಕೋಟು ಧರಿಸಿ ಆಪಾದಿತೆ ನಳಿನ ಪರ ವಕಾಲತ್ತು ವಹಿಸಲಿ. ಆಕೆಯ ವಿರುದ್ದ ಪ್ರಕರಣ ರದ್ದುಗೊಳಿಸುವಂತೆ ವಾದ ಮಂಡಿಸಲಿ. ಪ್ರಕರಣ ದಾಖಲಿಸಿದ ಪೊಲೀಸರು ರಾಜ್ಯ ಸರ್ಕಾರಕ್ಕೆ ದಂಡ ವಿಧಿಸಲಿ. ಆ ದಂಡದ ಮೊತ್ತವನ್ನು ಪರಿಹಾರ ರೂಪದಲ್ಲಿ ಆಪಾದಿತೆ ನಳಿನಿಗೆ ನೀಡಿ, ಸಂವಿಧಾನಬದ್ದವಾಗಿ ಹೋರಾಟ ನಡೆಸಿ ಎಂದು ಮೈಸೂರಿನ ಹಿರಿಯ ನ್ಯಾಯವಾದಿ ಪಿ ಜೆ ರಾಘವೇಂದ್ರ ಸಿದ್ದರಾಮಯ್ಯಗೆ ಬಹಿರಂಗ ಆಹ್ವಾನ ನಿಡಿದ್ದಾರೆ.

ನಳಿನಿ ಪರ 150ಕ್ಕೂ ಹೆಚ್ಚು ವಕೀಲರ ವಕಾಲತ್ತು:
ನಳಿನಿ ಹಾಕಿದ್ದ ಮುಖ್ಯ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಎರಡನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲದಲ್ಲಿ ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಕ್ಕೆ ಮುಂದೂಡಿದ್ದು. ನಳಿನಿ ಪರ ವಕಾಲತ್ತು ವಹಿಸಲು ಬೆಂಗಳೂರು ಮೂಲದ 150ಕ್ಕೂ ಹೆಚ್ಚು ವಕೀಲರು ಆಗಮಿಸಿದ್ದಾರೆ. ಸದ್ಯ ಈಗ ನಳಿನಿ ಮಧ್ಯಂತರ ಜಾಮೀನು ಪಡೆದು ಹೊರಗಿದ್ದಾರೆ.

Published On - 12:10 pm, Fri, 24 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us