AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kisan Samman Yojana | ಯೋಜನೆಯಲ್ಲಿ ಭಾರಿ ಅಕ್ರಮ, 85 ಸಾವಿರ ಖಾತೆಗಳು ಕಂಪ್ಲೀಟ್ ಬ್ಲಾಕ್, ಬೆಂಗಳೂರು ಸೈಬರ್​ ಠಾಣೆಗೆ ದೂರು

Kisan Samman Yojana | ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಅಕೌಂಟ್​ ತೆರೆದು ವಂಚನೆ ಮಾಡಲಾಗುತ್ತಿದೆ ಎಂಬ ಬಗ್ಗೆ ಸುಳಿವು ಸಿಕ್ಕಿದೆ. ಕಿಸಾನ್ ಸಮ್ಮಾನ್ ಯೋಜನೆಯ ಪೋರ್ಟಲ್​ನಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ರಾಜ್ಯ ಕೃಷಿ ಇಲಾಖೆ ಪತ್ತೆ ಹಚ್ಚಿದೆ.

Kisan Samman Yojana | ಯೋಜನೆಯಲ್ಲಿ ಭಾರಿ ಅಕ್ರಮ, 85 ಸಾವಿರ ಖಾತೆಗಳು ಕಂಪ್ಲೀಟ್ ಬ್ಲಾಕ್, ಬೆಂಗಳೂರು ಸೈಬರ್​ ಠಾಣೆಗೆ ದೂರು
ಕಿಸಾನ್ ಸಮ್ಮಾನ್​ ಯೋಜನೆ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Feb 15, 2021 | 10:53 AM

Share

ಬೆಂಗಳೂರು: ಕಿಸಾನ್ ಸಮ್ಮಾನ್​ ಯೋಜನೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಅಕೌಂಟ್​ ತೆರೆದು ವಂಚನೆ ಮಾಡಲಾಗುತ್ತಿದೆ ಎಂಬ ಬಗ್ಗೆ ಸುಳಿವು ಸಿಕ್ಕಿದೆ. ಕಿಸಾನ್ ಸಮ್ಮಾನ್ ಯೋಜನೆಯ ಪೋರ್ಟಲ್​ನಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ರಾಜ್ಯ ಕೃಷಿ ಇಲಾಖೆ ಪತ್ತೆ ಹಚ್ಚಿದೆ.

ವಂಚಕರ ಅಕ್ರಮ ಬಯಲು ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಅಕೌಂಟ್​ ತೆರೆದು ಕಿಸಾನ್​ ಸಮ್ಮಾನ್​ ಯೋಜನೆ ಪೋರ್ಟಲ್​ನಲ್ಲಿ ಅಕ್ರಮ ನಡೆಸಲಾಗುತ್ತಿದೆ. ಚಿತ್ರದುರ್ಗ, ಬೀದರ್ ವ್ಯಾಪ್ತಿಯಲ್ಲಿ ರುಬಿಯಾ ಖಾತುನ್ ಎಂಬ ಹೆಸರಿನಲ್ಲಿ ನಕಲಿ ಖಾತೆ ತೆರೆದು ಇದರ ಮೂಲಕ ಸಾವಿರಾರು ಬಾರಿ ಕೃಷಿ ಇಲಾಖೆಗೆ ಹಣಕ್ಕಾಗಿ ಮನವಿ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಅನುಮಾನ ಬಂದು ಪರಿಶೀಲನೆ ನಡೆಸಿದಾಗ ಹೊರ ರಾಜ್ಯದ ಬ್ಯಾಂಕ್​ ಅಕೌಂಟ್ ಪತ್ತೆಯಾಗಿದೆ. ಪ.ಬಂಗಾಳದ ದಿನಾಜ್​ಪುರ್ ಖಾತೆ, ಐಎಫ್​ಎಸ್​ಸಿ ಕೋಡ್, ಬಿಹಾರದ ಪೂರ್ನಿಯಾದ ಖಾತೆ, ಐಎಫ್​ಎಸ್​ಸಿ ಕೋಡ್ ಪತ್ತೆಯಾಗಿದೆ.

ಒಂದಲ್ಲ ಎರಡಲ್ಲ ಬರೋಬ್ಬರಿ 85 ಸಾವಿರ ಖಾತೆಗಳು ನಕಲಿ? ಇನ್ನು ಸುಮಾರು 85 ಸಾವಿರ ಖಾತೆಗಳ ಮೇಲೆ ಕೃಷಿ ಇಲಾಖೆಗೆ ಶಂಕೆ ವ್ಯಕ್ತವಾಗಿದೆ. ಕೂಡಲೇ ಈ ಬಗ್ಗೆ ಬೆಂಗಳೂರಿನ ಸೈಬರ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 85 ಸಾವಿರ ಶಂಕಿತ ಖಾತೆಗಳು ಕಂಪ್ಲೀಟ್ ಬ್ಲಾಕ್ ಮಾಡಲಾಗಿದೆ. ಬಿಹಾರ, ಉತ್ತರಪ್ರದೇಶ, ಬಂಗಾಳದಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಅನುಮಾನ ಅಧಿಕಾರಿಗಳು ಹುಟ್ಟಿದೆ. ಸದ್ಯ ಈ ಬಗ್ಗೆ ಹೆಚ್ಚಿನ ತನಿಕೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಅರ್ಧದಷ್ಟು ರೈತರಿಗೆ ಮಾತ್ರವೇ ಕಿಸಾನ್ ‘ಸಮ್ಮಾನ್’! ಏನಾಯ್ತು ಮೋದಿ ಮಹತ್ವಾಕಾಂಕ್ಷೆ ಯೋಜನೆ?

Published On - 10:03 am, Mon, 15 February 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ