AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kisan Samman Yojana | ಯೋಜನೆಯಲ್ಲಿ ಭಾರಿ ಅಕ್ರಮ, 85 ಸಾವಿರ ಖಾತೆಗಳು ಕಂಪ್ಲೀಟ್ ಬ್ಲಾಕ್, ಬೆಂಗಳೂರು ಸೈಬರ್​ ಠಾಣೆಗೆ ದೂರು

Kisan Samman Yojana | ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಅಕೌಂಟ್​ ತೆರೆದು ವಂಚನೆ ಮಾಡಲಾಗುತ್ತಿದೆ ಎಂಬ ಬಗ್ಗೆ ಸುಳಿವು ಸಿಕ್ಕಿದೆ. ಕಿಸಾನ್ ಸಮ್ಮಾನ್ ಯೋಜನೆಯ ಪೋರ್ಟಲ್​ನಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ರಾಜ್ಯ ಕೃಷಿ ಇಲಾಖೆ ಪತ್ತೆ ಹಚ್ಚಿದೆ.

Kisan Samman Yojana | ಯೋಜನೆಯಲ್ಲಿ ಭಾರಿ ಅಕ್ರಮ, 85 ಸಾವಿರ ಖಾತೆಗಳು ಕಂಪ್ಲೀಟ್ ಬ್ಲಾಕ್, ಬೆಂಗಳೂರು ಸೈಬರ್​ ಠಾಣೆಗೆ ದೂರು
ಕಿಸಾನ್ ಸಮ್ಮಾನ್​ ಯೋಜನೆ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Feb 15, 2021 | 10:53 AM

Share

ಬೆಂಗಳೂರು: ಕಿಸಾನ್ ಸಮ್ಮಾನ್​ ಯೋಜನೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಅಕೌಂಟ್​ ತೆರೆದು ವಂಚನೆ ಮಾಡಲಾಗುತ್ತಿದೆ ಎಂಬ ಬಗ್ಗೆ ಸುಳಿವು ಸಿಕ್ಕಿದೆ. ಕಿಸಾನ್ ಸಮ್ಮಾನ್ ಯೋಜನೆಯ ಪೋರ್ಟಲ್​ನಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ರಾಜ್ಯ ಕೃಷಿ ಇಲಾಖೆ ಪತ್ತೆ ಹಚ್ಚಿದೆ.

ವಂಚಕರ ಅಕ್ರಮ ಬಯಲು ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಅಕೌಂಟ್​ ತೆರೆದು ಕಿಸಾನ್​ ಸಮ್ಮಾನ್​ ಯೋಜನೆ ಪೋರ್ಟಲ್​ನಲ್ಲಿ ಅಕ್ರಮ ನಡೆಸಲಾಗುತ್ತಿದೆ. ಚಿತ್ರದುರ್ಗ, ಬೀದರ್ ವ್ಯಾಪ್ತಿಯಲ್ಲಿ ರುಬಿಯಾ ಖಾತುನ್ ಎಂಬ ಹೆಸರಿನಲ್ಲಿ ನಕಲಿ ಖಾತೆ ತೆರೆದು ಇದರ ಮೂಲಕ ಸಾವಿರಾರು ಬಾರಿ ಕೃಷಿ ಇಲಾಖೆಗೆ ಹಣಕ್ಕಾಗಿ ಮನವಿ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಅನುಮಾನ ಬಂದು ಪರಿಶೀಲನೆ ನಡೆಸಿದಾಗ ಹೊರ ರಾಜ್ಯದ ಬ್ಯಾಂಕ್​ ಅಕೌಂಟ್ ಪತ್ತೆಯಾಗಿದೆ. ಪ.ಬಂಗಾಳದ ದಿನಾಜ್​ಪುರ್ ಖಾತೆ, ಐಎಫ್​ಎಸ್​ಸಿ ಕೋಡ್, ಬಿಹಾರದ ಪೂರ್ನಿಯಾದ ಖಾತೆ, ಐಎಫ್​ಎಸ್​ಸಿ ಕೋಡ್ ಪತ್ತೆಯಾಗಿದೆ.

ಒಂದಲ್ಲ ಎರಡಲ್ಲ ಬರೋಬ್ಬರಿ 85 ಸಾವಿರ ಖಾತೆಗಳು ನಕಲಿ? ಇನ್ನು ಸುಮಾರು 85 ಸಾವಿರ ಖಾತೆಗಳ ಮೇಲೆ ಕೃಷಿ ಇಲಾಖೆಗೆ ಶಂಕೆ ವ್ಯಕ್ತವಾಗಿದೆ. ಕೂಡಲೇ ಈ ಬಗ್ಗೆ ಬೆಂಗಳೂರಿನ ಸೈಬರ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 85 ಸಾವಿರ ಶಂಕಿತ ಖಾತೆಗಳು ಕಂಪ್ಲೀಟ್ ಬ್ಲಾಕ್ ಮಾಡಲಾಗಿದೆ. ಬಿಹಾರ, ಉತ್ತರಪ್ರದೇಶ, ಬಂಗಾಳದಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಅನುಮಾನ ಅಧಿಕಾರಿಗಳು ಹುಟ್ಟಿದೆ. ಸದ್ಯ ಈ ಬಗ್ಗೆ ಹೆಚ್ಚಿನ ತನಿಕೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಅರ್ಧದಷ್ಟು ರೈತರಿಗೆ ಮಾತ್ರವೇ ಕಿಸಾನ್ ‘ಸಮ್ಮಾನ್’! ಏನಾಯ್ತು ಮೋದಿ ಮಹತ್ವಾಕಾಂಕ್ಷೆ ಯೋಜನೆ?

Published On - 10:03 am, Mon, 15 February 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ