AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kisan Samman Yojana | ಯೋಜನೆಯಲ್ಲಿ ಭಾರಿ ಅಕ್ರಮ, 85 ಸಾವಿರ ಖಾತೆಗಳು ಕಂಪ್ಲೀಟ್ ಬ್ಲಾಕ್, ಬೆಂಗಳೂರು ಸೈಬರ್​ ಠಾಣೆಗೆ ದೂರು

Kisan Samman Yojana | ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಅಕೌಂಟ್​ ತೆರೆದು ವಂಚನೆ ಮಾಡಲಾಗುತ್ತಿದೆ ಎಂಬ ಬಗ್ಗೆ ಸುಳಿವು ಸಿಕ್ಕಿದೆ. ಕಿಸಾನ್ ಸಮ್ಮಾನ್ ಯೋಜನೆಯ ಪೋರ್ಟಲ್​ನಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ರಾಜ್ಯ ಕೃಷಿ ಇಲಾಖೆ ಪತ್ತೆ ಹಚ್ಚಿದೆ.

Kisan Samman Yojana | ಯೋಜನೆಯಲ್ಲಿ ಭಾರಿ ಅಕ್ರಮ, 85 ಸಾವಿರ ಖಾತೆಗಳು ಕಂಪ್ಲೀಟ್ ಬ್ಲಾಕ್, ಬೆಂಗಳೂರು ಸೈಬರ್​ ಠಾಣೆಗೆ ದೂರು
ಕಿಸಾನ್ ಸಮ್ಮಾನ್​ ಯೋಜನೆ
Follow us
ಆಯೇಷಾ ಬಾನು
| Updated By: Digi Tech Desk

Updated on:Feb 15, 2021 | 10:53 AM

ಬೆಂಗಳೂರು: ಕಿಸಾನ್ ಸಮ್ಮಾನ್​ ಯೋಜನೆಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಅಕೌಂಟ್​ ತೆರೆದು ವಂಚನೆ ಮಾಡಲಾಗುತ್ತಿದೆ ಎಂಬ ಬಗ್ಗೆ ಸುಳಿವು ಸಿಕ್ಕಿದೆ. ಕಿಸಾನ್ ಸಮ್ಮಾನ್ ಯೋಜನೆಯ ಪೋರ್ಟಲ್​ನಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ರಾಜ್ಯ ಕೃಷಿ ಇಲಾಖೆ ಪತ್ತೆ ಹಚ್ಚಿದೆ.

ವಂಚಕರ ಅಕ್ರಮ ಬಯಲು ರೈತರ ಹೆಸರಿನಲ್ಲಿ ನಕಲಿ ಬ್ಯಾಂಕ್ ಅಕೌಂಟ್​ ತೆರೆದು ಕಿಸಾನ್​ ಸಮ್ಮಾನ್​ ಯೋಜನೆ ಪೋರ್ಟಲ್​ನಲ್ಲಿ ಅಕ್ರಮ ನಡೆಸಲಾಗುತ್ತಿದೆ. ಚಿತ್ರದುರ್ಗ, ಬೀದರ್ ವ್ಯಾಪ್ತಿಯಲ್ಲಿ ರುಬಿಯಾ ಖಾತುನ್ ಎಂಬ ಹೆಸರಿನಲ್ಲಿ ನಕಲಿ ಖಾತೆ ತೆರೆದು ಇದರ ಮೂಲಕ ಸಾವಿರಾರು ಬಾರಿ ಕೃಷಿ ಇಲಾಖೆಗೆ ಹಣಕ್ಕಾಗಿ ಮನವಿ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಅನುಮಾನ ಬಂದು ಪರಿಶೀಲನೆ ನಡೆಸಿದಾಗ ಹೊರ ರಾಜ್ಯದ ಬ್ಯಾಂಕ್​ ಅಕೌಂಟ್ ಪತ್ತೆಯಾಗಿದೆ. ಪ.ಬಂಗಾಳದ ದಿನಾಜ್​ಪುರ್ ಖಾತೆ, ಐಎಫ್​ಎಸ್​ಸಿ ಕೋಡ್, ಬಿಹಾರದ ಪೂರ್ನಿಯಾದ ಖಾತೆ, ಐಎಫ್​ಎಸ್​ಸಿ ಕೋಡ್ ಪತ್ತೆಯಾಗಿದೆ.

ಒಂದಲ್ಲ ಎರಡಲ್ಲ ಬರೋಬ್ಬರಿ 85 ಸಾವಿರ ಖಾತೆಗಳು ನಕಲಿ? ಇನ್ನು ಸುಮಾರು 85 ಸಾವಿರ ಖಾತೆಗಳ ಮೇಲೆ ಕೃಷಿ ಇಲಾಖೆಗೆ ಶಂಕೆ ವ್ಯಕ್ತವಾಗಿದೆ. ಕೂಡಲೇ ಈ ಬಗ್ಗೆ ಬೆಂಗಳೂರಿನ ಸೈಬರ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 85 ಸಾವಿರ ಶಂಕಿತ ಖಾತೆಗಳು ಕಂಪ್ಲೀಟ್ ಬ್ಲಾಕ್ ಮಾಡಲಾಗಿದೆ. ಬಿಹಾರ, ಉತ್ತರಪ್ರದೇಶ, ಬಂಗಾಳದಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಅನುಮಾನ ಅಧಿಕಾರಿಗಳು ಹುಟ್ಟಿದೆ. ಸದ್ಯ ಈ ಬಗ್ಗೆ ಹೆಚ್ಚಿನ ತನಿಕೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಅರ್ಧದಷ್ಟು ರೈತರಿಗೆ ಮಾತ್ರವೇ ಕಿಸಾನ್ ‘ಸಮ್ಮಾನ್’! ಏನಾಯ್ತು ಮೋದಿ ಮಹತ್ವಾಕಾಂಕ್ಷೆ ಯೋಜನೆ?

Published On - 10:03 am, Mon, 15 February 21

ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ