AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಚಾಲನೆ ನೀಡಿದ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿನ ಟಿಕೆಟ್ ಎಷ್ಟು? ಇಲ್ಲಿದೆ ವೇಳಾಪಟ್ಟಿ

ಕರ್ನಾಟಕ ರೈಲ್ವೆ ಇಲಾಖೆಗೆ ಮತ್ತೊಂದು ವಂದೇ ಭಾರತ್ ರೈಲು ಸೇರ್ಪಡೆಯಾಗಿದ್ದು, ಇಂದು ಉತ್ತರ ಕರ್ನಾಟಕ ಜನರ ಕನಸು ನನಸಾಗಿದೆ. ಹೌದು...ಬಹುಬೇಡಿಕೆಯಾಗಿದ್ದ ಬೆಂಗಳೂರು – ಬೆಳಗಾವಿ ವಂದೇ ಭಾರತ್ ರೈಲಿಗೆ ಇಂದು ಚಾಲನೆ ಸಿಕ್ಕಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಬೆಂಗಳೂರಿಗೆ ಬಂದು ಈ ವಂದೇ ಭಾರತ್ ಎಕ್ಸ್​​ ಪ್ರೆಸ್​ ಗೆ ಹಸಿರು ನಿಶಾನೆ ತೋರಿದ್ದಾರೆ. ಇನ್ನು ಈ ಬೆಂಗಳೂರು-ಬೆಳಗಾವಿ ನಡುವಿನ ಟಿಕೆಟ್ ದರ ಎಷ್ಟು? ಎಲ್ಲೆಲ್ಲಿ ನಿಲುಗಡೆಯಾಗಿದೆ ಎನ್ನುವ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ಮೋದಿ ಚಾಲನೆ ನೀಡಿದ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿನ ಟಿಕೆಟ್ ಎಷ್ಟು? ಇಲ್ಲಿದೆ ವೇಳಾಪಟ್ಟಿ
Modi Vande Bharat
ರಮೇಶ್ ಬಿ. ಜವಳಗೇರಾ
|

Updated on: Aug 10, 2025 | 12:08 PM

Share

ಬೆಂಗಳೂರು, (ಆಗಸ್ಟ್ 10): ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ರೈಲು (Bengaluru To Belagavi Vande Bharat Express Train) ಸಂಚಾರಕ್ಕೆ ಚಾಲನೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ (PM Narenadra Modi) ಅವರೇ ಇಂದು (ಆಗಸ್ಟ್ 10) ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೇಲ್ವೇ ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ಸೇರಿದಂತೆ ಒಟ್ಟು ಮೂರು ಒಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಕತ್ರಾ , ನಾಗಪುರ(ಅಜ್ನಿ)-ಪುಣೆ ಜೊತೆ ಬೆಂಗಳೂರು-ಬೆಳಗಾವಿ ವಂದೇ ಭಾರತ್​ ರೈಲಿಗೆ  ಹಸಿರು ನಿಶಾನೆ ತೋರಿದರು. ಇದರೊಂದಿಗೆ ಬೆಳಗಾವಿಗರ ಬಹುದಿನಗಳ ಕನಸು ನನಸಾಗಿದೆ. ನಿರಂತರ ಪ್ರಯತ್ನ ಮತ್ತು ಜನಪ್ರತಿನಿಧಿಗಳ ಒತ್ತಾಯದ ಫಲವಾಗಿ ಈ ರೈಲು ಸೇವೆ ಆರಂಭವಾಗಿದ್ದು, ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇನ್ನು ಈ ರೈಲು ಆಗಸ್ಟ್ 11ರಿಂದ ನಿಯಮಿತ ಸಂಚಾರ ಆರಂಭವಾಗಲಿದ್ದು, ಬೆಳಗಾವಿ ಮತ್ತು ಬೆಂಗಳೂರು ನಡುವಿನ ಸಂಪರ್ಕ ಸುಲಭವಾಗಲಿದೆ.

ಬೆಂಗಳೂರು-ಬೆಳಗಾವಿ ವಂದೇ ಭಾರತ್ ವೇಳಾಪಟ್ಟಿ

ನಾಳೆಯಿಂದ ಅಂದರೆ ಆಗಸ್ಟ್ 11ರಿಂದ ಈ ರೈಲು ಸಂಚಾರ ಪ್ರಾರಂಭವಾಗಲಿದೆ. ಬೆಳಗಾವಿ -ಕೆಎಸ್‌ಆರ್‌ ಬೆಂಗಳೂರು ವಂದೇ ಭಾರತ್‌ ಎಕ್ಸ್‌ಪ್ರೆಸ್‌ (26751) ರೈಲು ಬೆಳಗಾವಿಯಿಂದ ಬೆಳಗ್ಗೆ 5.20ಕ್ಕೆ ಹೊರಟು, ಮಧ್ಯಾಹ್ನ 1.50ಕ್ಕೆ ಬೆಂಗಳೂರು ತಲುಪಲಿದೆ. ಬೆಂಗಳೂರಿನ ಕೆಎಸ್‌ಆರ್‌ ನಿಲ್ದಾಣದಿಂದ ಮಧ್ಯಾಹ್ನ 2.20ಕ್ಕೆ ಹೊರಡುವ ರೈಲು (26752), ರಾತ್ರಿ 10.40ಕ್ಕೆ ಬೆಳಗಾವಿ ತಲುಪಲಿದೆ.  ಈ ರೈಲು 8 ಜಿಲ್ಲೆಗಳ ಮೂಲಕ ಹಾದು ಹೋಗಲಿದ್ದು, ಬುಧವಾರ ಹೊರತುಪಡಿಸಿ ವಾರದ 6 ದಿನ ಈ ರೈಲು ಸಂಚರಿಸಲಿದೆ. ಕಿತ್ತೂರು ಕರ್ನಾಟಕ, ದಕ್ಷಿಣ ಕರ್ನಾಟಕ ಮೂಲಕ ರಾಜ್ಯ ರಾಜಧಾನಿ ಸಂಪರ್ಕಿಸಲಿದೆ. ಧಾರವಾಡ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ತುಮಕೂರು, ಯಶವಂತಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿನ ವೇಳಾಪಟ್ಟಿ (BEL to SBC)

  • ಬೆಳಗಾವಿ: ಬೆಳಿಗ್ಗೆ 5:20 (ಪ್ರಾರಂಭ)
  • ಧಾರವಾಡ: ಬೆಳಿಗ್ಗೆ 7:08
  • ಹುಬ್ಬಳ್ಳಿ: ಬೆಳಿಗ್ಗೆ 7:30
  • ಹಾವೇರಿ: ಬೆಳಿಗ್ಗೆ 8:35
  • ದಾವಣಗೆರೆ: ಬೆಳಿಗ್ಗೆ 9:25
  • ತುಮಕೂರು: ಮಧ್ಯಾಹ್ನ 12:15
  • ಯಶವಂತಪುರ: ಮಧ್ಯಾಹ್ನ 1:03
  • ಬೆಂಗಳೂರು (ಕೆಎಸ್‌ಆರ್): ಮಧ್ಯಾಹ್ನ 1:50 (ಮುಕ್ತಾಯ)

ಬೆಂಗಳೂರು (ಕೆಎಸ್‌ಆರ್):ಮಧ್ಯಾಹ್ನ 2:20 (ಪ್ರಾರಂಭ)

  • ಯಶವಂತಪುರ: ಮಧ್ಯಾಹ್ನ 2:28
  • ತುಮಕೂರು : ಮಧ್ಯಾಹ್ನ 3:03
  • ದಾವಣಗೆರೆ: ಸಂಜೆ 5:48
  • ಹಾವೇರಿ ::ಸಂಜೆ 6:48
  • ಹುಬ್ಬಳ್ಳಿ: ರಾತ್ರಿ 8:00
  • ಧಾರವಾಡ: ರಾತ್ರಿ 8:25
  • ಬೆಳಗಾವಿ :ರಾತ್ರಿ 10:40 (ಮುಕ್ತಾಯ)

ಟಿಕೆಟ್ ದರ ಎಷ್ಟು?

ಈ ಹೊಸ ಮಾರ್ಗದಲ್ಲಿ ಚೇರ್‌ಕಾರ್ (CC) ಹಾಗೂ ಎಕ್ಸಿಕ್ಯೂಟಿವ್‌ ಚೇರ್‌ಕಾರ್ (EC) ದರ್ಜೆಯ ಪ್ರಯಾಣಿಕರಿಗೆ ಯೋಗ್ಯ ದರಗಳಲ್ಲಿ ಟಿಕೆಟ್ ಲಭ್ಯವಿದೆ. ಹಳೆ ವಂದೇ ಭಾರತ್ ಸೇವೆಗಳ ಜೊತೆ ಹೋಲಿಸಿದರೆ ದರಗಳು ಸಾಕಷ್ಟು ಕಡಿಮೆ ಇದೆ.

  • ಬೆಂಗಳೂರು – ಬೆಳಗಾವಿ: 1118ರೂ(ಚೇರ್‌ಕಾರ್(ಸಿಸಿ)) . 2279ರೂ(ಎಕ್ಸಿಕ್ಯೂಟಿವ್‌ ಚೇರ್‌ಕಾ‌ರ್ (ಇಸಿ))
  • ಬೆಂಗಳೂರು – ಧಾರವಾಡ : 914 0.ರೂ(ಚೇರ್‌ಕಾರ್(ಸಿಸಿ)) 1863 .ರೂ(ಎಕ್ಸಿಕ್ಯೂಟಿವ್‌ ಚೇರ್‌ಕಾ‌ರ್ (ಇಸಿ))
  • ಬೆಂಗಳೂರು – ಹುಬ್ಬಳ್ಳಿ : 885 ರೂ.(ಚೇರ್‌ಕಾರ್(ಸಿಸಿ)) 1802 .ರೂ(ಎಕ್ಸಿಕ್ಯೂಟಿವ್‌ ಚೇರ್‌ಕಾ‌ರ್ (ಇಸಿ))
  • ಬೆಂಗಳೂರು – ಹಾವೇರಿ : 778 .ರೂ(ಚೇರ್‌ಕಾರ್(ಸಿಸಿ)) 1588 .ರೂ(ಎಕ್ಸಿಕ್ಯೂಟಿವ್‌ ಚೇರ್‌ಕಾ‌ರ್ (ಇಸಿ))
  • ಬೆಂಗಳೂರು – ದಾವಣಗೆರೆ : 676 .ರೂ(ಚೇರ್‌ಕಾರ್(ಸಿಸಿ)) 1379 .ರೂ(ಎಕ್ಸಿಕ್ಯೂಟಿವ್‌ ಚೇರ್‌ಕಾ‌ರ್ (ಇಸಿ))
  • ಬೆಂಗಳೂರು – ತುಮಕೂರು : 298 .ರೂ(ಚೇರ್‌ಕಾರ್(ಸಿಸಿ)) 615 .ರೂ(ಎಕ್ಸಿಕ್ಯೂಟಿವ್‌ ಚೇರ್‌ಕಾ‌ರ್ (ಇಸಿ))
  • ಬೆಂಗಳೂರು – ಯಶವಂತಪುರ: 242 .ರೂ(ಚೇರ್‌ಕಾರ್(ಸಿಸಿ)) 503 .ರೂ(ಎಕ್ಸಿಕ್ಯೂಟಿವ್‌ ಚೇರ್‌ಕಾ‌ರ್ (ಇಸಿ))

ಒಟ್ಟಿನಲ್ಲಿ ಈ ವಂದೇ ಭಾರತ್ ರೈಲು 8 ಗಂಟೆ 50 ನಿಮಿಷಗಳಲ್ಲಿ 611 ಕಿಲೋ ಮೀಟರ್ ದೂರ ಕ್ರಮಿಸಲಿದ್ದು, ರಾಜ್ಯದ ರೈಲ್ವೆ ಇತಿಹಾಸದಲ್ಲಿ ಮೈಲುಗಲ್ಲಾಗಿದೆ.

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ