ಸಿದ್ದೇಶ್ವರ ಶ್ರೀಗಳ ಪ್ರಥಮ ವರ್ಷದ ಗುರು ನಮನ ಕಾರ್ಯಕ್ರಮಕ್ಕೆ ಪ್ರಧಾನಿ ಗೈರು; ಪ್ರಲ್ಹಾದ್ ಜೋಶಿ ಹೇಳಿದ್ದೇನು?

ಸಿದ್ದೇಶ್ವರ ಶ್ರೀಗಳ ಪ್ರಥಮ ವರ್ಷದ ಗುರು ನಮನ ಕಾರ್ಯಕ್ರಮ ಇಂದು ನಡೆಯಿತು. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಗೈರಾಗುತ್ತಿರುವ ಬಗ್ಗೆ ಕಾರಣ ನೀಡಿ ಮೋದಿ ಪತ್ರ ಬರೆದಿದ್ದು, ಈ ಪತ್ರದಲ್ಲಿ ನುಡಿನಮನ ಸಂದೇಶ ಕಳುಹಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಸಿದ್ದೇಶ್ವರ ಶ್ರೀಗಳ ಪ್ರಥಮ ವರ್ಷದ ಗುರು ನಮನ ಕಾರ್ಯಕ್ರಮಕ್ಕೆ ಪ್ರಧಾನಿ ಗೈರು; ಪ್ರಲ್ಹಾದ್ ಜೋಶಿ ಹೇಳಿದ್ದೇನು?
ಸಿದ್ದೇಶ್ವರ ಶ್ರೀಗಳ ಪ್ರಥಮ ವರ್ಷದ ಗುರು ನಮನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Edited By: Rakesh Nayak Manchi

Updated on: Jan 02, 2024 | 3:29 PM

ವಿಜಯಪುರ, ಜ.2: ನಗರದ ಜ್ಞಾನ ಯೋಗಾಶ್ರಮದಲ್ಲಿ ಸಿದ್ದೇಶ್ವರ ಶ್ರೀಗಳ (Siddheshwar Shri) ಪ್ರಥಮ ವರ್ಷದ ಗುರು ನಮನ ಕಾರ್ಯಕ್ರಮ ಇಂದು ನಡೆಯಿತು. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಗೈರಾಗುತ್ತಿರುವ ಬಗ್ಗೆ ಕಾರಣ ನೀಡಿ ಮೋದಿ ಪತ್ರ ಬರೆದಿದ್ದು, ಈ ಪತ್ರದಲ್ಲಿ ನುಡಿನಮನ ಸಂದೇಶ ಕಳುಹಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದ್ದಾರೆ.

ಸಿದ್ದೇಶ್ವರ ಶ್ರೀಗಳ ಜೀವನ ತೆರೆದ ಪುಸ್ತಕವಾಣಿಯಾಗಿದೆ. ಶ್ರೀಗಳು ಜನರ ಮನಸ್ಸಿನಲ್ಲಿ ಆಧ್ಯಾತ್ಮದ ಭಾವನೇ ಮೂಡಿಸಿದ್ದಾರೆ. ಶ್ರೀಗಳು ಸಮಾಧಿಯನ್ನು ಸಹ ಮಾಡಬೇಡಿ ಎಂದಿದ್ದಾರೆ. ಇದು ಶ್ರೀಗಳ ಉದಾತ್ತ ಚಿಂತನೆಗೆ ಸಾಕ್ಷಿಯಾಗಿದೆ. ನನ್ನದು ಏನು ಬೇಡ ಎಂದು ಸಿದ್ದೇಶ್ವರ ಶ್ರೀಗಳು ಹೇಳಿದ್ದರು. ಇಂದು ಲಕ್ಷಾಂತರ ಭಕ್ತರು ಶ್ರೀಗಳ ಮಾತನ್ನು ಪಾಲಿಸುತ್ತಿದ್ದಾರೆ. ಶ್ರೀಗಳ ಪುಸ್ತಕವನ್ನು ಪ್ರಧಾನಮಂತ್ರಿಗಳು ಬಿಡುಗಡೆ ಮಾಡಬೇಕಿತ್ತು. ಆದರೆ ಕೊವಿಡ್ ಕಾರಣದಿಂದ ಕಾರ್ಯಕ್ರಮ ನಡೆಯಲಿಲ್ಲ ಎಂದರು.

ಪ್ರಲ್ಹಾದ್ ಜೋಶಿ ಟ್ವೀಟ್

ಕಾರ್ಯಕ್ರಮದಿಂದ ದೂರ ಉಳಿದ ಶಾಸಕ ಯತ್ನಾಳ್

ಸಿದ್ದೇಶ್ವರ ಸ್ವಾಮೀಜಿ ಗುರುನಮನ ಮಹೋತ್ಸವ ಕಾರ್ಯಕ್ರಮದಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದೂರ ಉಳಿದಿದ್ದಾರೆ. ಗುರು ನಮನ ಮಹೋತ್ಸವದ ಅಧ್ಯಕ್ಷತೆ ವಹಿಸಬೇಕಿದ್ದ ಶಾಸಕ ಯತ್ನಾಳ್, ಮಹೋತ್ಸವ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮದಲ್ಲೂ ಭಾಗಿಯಾಗಿಲ್ಲ. ಇವರ ಬದಲಿಗೆ ಪುತ್ರ ರಾಮನಗೌಡ ಪಾಟೀಲ್ ಭಾಗಿಯಾದರು.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: CM ಸಿದ್ದರಾಮಯ್ಯಗೆ ಆಹ್ವಾನ ನೀಡದ ವಿಚಾರಕ್ಕೆ ಕೇಂದ್ರ ಸಚಿವ ಜೋಶಿ ಕೊಟ್ಟ ಸ್ಪಷ್ಟನೆ ಹೀಗಿದೆ

ಗುರು ನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ರಾಜ್ಯದ ಸಚಿವರು ಹಾಗೂ ಶಾಸಕರು ಭಾಗಿಯಾಗಿದರು. ಆದರೆ, ಸಿದ್ದರಾಮಯ್ಯ ವೇದಿಕೆಗೆ ಆಗಮಿಸುವ ಮುನ್ನವೇ ಪ್ರಲ್ಹಾದ್ ಜೋಶಿ ಭಾಷಣ ಮಾಡಿ ವೇದಿಕೆಯಿಂದ ನಿರ್ಗಮಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us