AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್; ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಘೋಷಣೆ

Narendra Modi Speech in Bangalore; ನಮ್ಮ ದೇಶದ ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋಗೆ ಭೇಟಿ ನೀಡಲು ನಿರ್ಧರಿಸಿದ್ದೆ. ಹಾಗಾಗಿ ವಿದೇಶದಿಂದ ನೇರವಾಗಿ ವಿಜ್ಞಾನಿಗಳ ಭೇಟಿಗಾಗಿ ಇಲ್ಲಿಗೆ ಬಂದಿದ್ದೇನೆ. ಇಸ್ರೋ ಕಚೇರಿಗೆ ತೆರಳಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದರು.

ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್; ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಘೋಷಣೆ
ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್; ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಘೋಷಣೆ
ಗಣಪತಿ ಶರ್ಮಾ
|

Updated on:Aug 26, 2023 | 8:01 AM

Share

ಬೆಂಗಳೂರು, ಆಗಸ್ಟ್ 26: ‘ದೂರದ ದೇಶದಿಂದ ನೇರ ಇಲ್ಲಿಗೆ ಬಂದೆ. ಭಾರತದ ಸೂರ್ಯೋದಯವಾಗುತ್ತಿರುವ ಈ ಹೊತ್ತಿನಲ್ಲಿ ಆ ಬೆಳಕಿನಲ್ಲಿ ನಾನು ಬೆಂಗಳೂರಿಗರ (Bangalore) ಮುಖ ನೋಡಿದೆ. ನಮ್ಮ ದೇಶದ ವಿಜ್ಞಾನಿಗಳ ಸಾಧನೆಯಿಂದ ಬಹಳ ಸಂತಸವಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಹೇಳಿದರು. ಚಂದ್ರಯಾನ-3ರ ಯಶಸ್ಸಿಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಇಸ್ರೋದ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಬಂದ ಅವರು, ಹೆಚ್​ಎಎಲ್ ಏರ್​ಪೋರ್ಟ್​ ಹೊರಭಾಗದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದರು.

ಮೋದಿ ಅವರು ಮಾತನಾಡು ಆರಂಭಿಸುತ್ತಿದ್ದಂತೆಯೇ, ಅಭಿಮಾನಿಗಳು ‘ಜೈ ಮೋದಿ’ ಘೋಷಣೆ ಕೂಗಲು ಮುಂದಾದರು. ತಕ್ಷಣವೇ ಅದನ್ನು ತಡೆದ ಮೋದಿ, ‘ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್’ ಎಂಬ ಘೋಷಣೆ ಕೂಗುವಂತೆ ಮನವಿ ಮಾಡಿದರು. ಜತೆಗೆ, ‘ಭಾರತ್ ಮಾತಾ ಕೀ ಜೈ’ ಎಂಬ ಘೋಷಣೆಗಳೂ ಮೊಳಗಿದವು.

ಮೋದಿ ಭೇಟಿ ಯಾವುದೇ ಕಾರಣಕ್ಕೂ ಪಕ್ಷದ ಕಾರ್ಯಕ್ರಮ ಆಗಬಾರದು ಎಂಬ ನಿಟ್ಟಿನಲ್ಲಿ ಪ್ರಧಾನಿಯವರು ಬಹಳ ಎಚ್ಚರಿಕೆಯ ನಡೆ ಇಟ್ಟಿರುವುದು ಎದ್ದು ಕಾಣುತ್ತಿತ್ತು.

ನಮ್ಮ ದೇಶದ ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋಗೆ ಭೇಟಿ ನೀಡಲು ನಿರ್ಧರಿಸಿದ್ದೆ. ಹಾಗಾಗಿ ವಿದೇಶದಿಂದ ನೇರವಾಗಿ ವಿಜ್ಞಾನಿಗಳ ಭೇಟಿಗಾಗಿ ಇಲ್ಲಿಗೆ ಬಂದಿದ್ದೇನೆ. ಇಸ್ರೋ ಕಚೇರಿಗೆ ತೆರಳಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದರು.

ಸಿಎಂ, ಡಿಸಿಎಂ, ರಾಜ್ಯಪಾಲರಿಗೆ ಧನ್ಯವಾದ

ವಿದೇಶದಲ್ಲಿರುವಾಗ ಅಲ್ಲಿಂದ ನೇರ ಬೆಂಗಳೂರಿಗೆ ಬರಲು ನಿರ್ಧರಿಸಿದೆ. ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರಿಗೆ ನಾನು ಮನವಿ ಮಾಡಿದ್ದೆ. ಅದಕ್ಕೆ ಇಷ್ಟೊಂದು ಕಡಿಮೆ ಅವಧಿಯಲ್ಲಿ ಪ್ರೋಟೋಕಾಲ್​ ವ್ಯವಸ್ಥೆ ಮಾಡಿದ ಅವರಿಗೆ ಧನ್ಯವಾದ ಸಮರ್ಪಿಸುತ್ತಿದ್ದೇನೆ ಎಂದು ಮೋದಿ ಹೇಳಿದರು. ನಂತರ ಇಸ್ರೋ ಪ್ರಧಾನ ಕಚೇರಿಯತ್ತ ನಿರ್ಗಮಿಸಿದರು.

ಮೋದಿ ಭೇಟಿಯ ಲೈವ್​ ಅಪ್​ಡೇಟ್ಸ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದಕ್ಕೂ ಮುನ್ನ, ಗ್ರೀಕ್​ ದೇಶದಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದರಾದ ತೇಜಸ್ವಿ ಸೂರ್ಯ, ಎಸ್​​​.ಮುನಿಸ್ವಾಮಿ, ಶಾಸಕರಾದ ಭೈರತಿ ಬಸವರಾಜ್​​, ಮಂಜುಳಾ ಲಿಂಬಾವಳಿ ಪ್ರಧಾನಿಯವರನ್ನು ಸ್ವಾಗತಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:09 am, Sat, 26 August 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?