ಶ್ರೀಕೃಷ್ಣ ಮಠದಲ್ಲಿ ಕನಕನ ಕಿಂಡಿ ಸ್ವರ್ಣ ಕವಚ ಲೋಕಾರ್ಪಣೆ ಮಾಡಿದ ನಮೋ

Updated on: Nov 28, 2025 | 1:13 PM

ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇದೇ ವೇಳೆ ಮಾಜಿ ಸಚಿವ ಪ್ರಮೋದ್​​ ಮಧ್ವರಾಜ್​​ ಅವರು ಮಠದ ಕನಕನ ಕಿಂಡಿಗೆ ಅರ್ಪಿಸಿರುವ ಸ್ವರ್ಣ ಕವಚದ ಲೋಕಾರ್ಪಣೆಯನ್ನೂ ಅವರು ನೆರವೇರಿಸಿದ್ದಾರೆ. ಪರ್ಯಾಯ ಪುತ್ತಿಗೆ ಮಠದ ಶ್ರೀಗಳ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆದಿದೆ.

ಉಡುಪಿ, ನವೆಂಬರ್​​ 28: ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಐತಿಹಾಸಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ, ಈ ವೇಳೆ ಮಾಜಿ ಸಚಿವ ಪ್ರಮೋದ್​​ ಮಧ್ವರಾಜ್​​ ಅವರು ಮಠದ ಕನಕನ ಕಿಂಡಿಗೆ ಅರ್ಪಿಸಿರುವ ಸ್ವರ್ಣ ಕವಚದ ಲೋಕಾರ್ಪಣೆ ನೆರೆವೇರಿಸಿದ್ದಾರೆ. ಈ ಸಂದರ್ಭದಲ್ಲಿ ಧಾರ್ಮಿಕ ವಿಧಿವಿಧಾನಗಳ ಭಾಗವಾಗಿ ವೇದ ಮಂತ್ರಗಳನ್ನು ಪಠಿಸಲಾಯಿತು. ಉಡುಪಿ ಪರ್ಯಾಯ ಮಠಾಧೀಶರಾದ ಪುತ್ತಿಗೆ ಶ್ರೀಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.