AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಬಿದನೂರಿನ ವಾಟದ ಹೊಸಹಳ್ಳಿ ಗ್ರಾ.ಪಂ ಅಧ್ಯಕ್ಷರ ಜತೆ ಮೋದಿ ಏನು ಮಾತಾಡಿದ್ರು?

ಬೆಂಗಳೂರು: ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಕೊರೊನಾ ವೈರಸ್​ ನಿಯಂತ್ರಣ ಸಂಬಂಧ ಗೌರಿಬಿದನೂರು ತಾಲೂಕಿನ ವಾಟದ ಹೊಸಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ ಕುಮಾರ್ ಸಹ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿಯಾಗಿದ್ದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಬೇರೆ ಬೇರೆ ರಾಜ್ಯಗಳಿಂದ ಕಾರ್ಮಿಕರು ಬಂದಿದ್ದಾರೆ. ಮಹಾರಾಷ್ಟ್ರದಿಂದ ಬಂದಿರುವ ವಲಸೆ ಕಾರ್ಮಿಕರಿಗೆ ಆಹಾರ, ವಸತಿ ನೀಡಲಾಗುತ್ತಿದೆ. ಬೆಳೆ, ಹಣ್ಣು ತರಕಾರಿ […]

ಗೌರಿಬಿದನೂರಿನ ವಾಟದ ಹೊಸಹಳ್ಳಿ ಗ್ರಾ.ಪಂ ಅಧ್ಯಕ್ಷರ ಜತೆ ಮೋದಿ ಏನು ಮಾತಾಡಿದ್ರು?
ಸಾಧು ಶ್ರೀನಾಥ್​
|

Updated on:Apr 24, 2020 | 12:55 PM

Share

ಬೆಂಗಳೂರು: ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಕೊರೊನಾ ವೈರಸ್​ ನಿಯಂತ್ರಣ ಸಂಬಂಧ ಗೌರಿಬಿದನೂರು ತಾಲೂಕಿನ ವಾಟದ ಹೊಸಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ ಕುಮಾರ್ ಸಹ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿಯಾಗಿದ್ದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಬೇರೆ ಬೇರೆ ರಾಜ್ಯಗಳಿಂದ ಕಾರ್ಮಿಕರು ಬಂದಿದ್ದಾರೆ. ಮಹಾರಾಷ್ಟ್ರದಿಂದ ಬಂದಿರುವ ವಲಸೆ ಕಾರ್ಮಿಕರಿಗೆ ಆಹಾರ, ವಸತಿ ನೀಡಲಾಗುತ್ತಿದೆ. ಬೆಳೆ, ಹಣ್ಣು ತರಕಾರಿ ಸಾಗಾಟಕ್ಕೆ ಅವಕಾಶ ನೀಡಲಾಗಿದೆ. ರೈತರಿಗೆ ಮುಕ್ತ ಮಾರುಕಟ್ಟೆ ಒದಗಿಸಲಾಗಿದೆ. ಬೆಂಗಳೂರಿನಿಂದ ಅಗತ್ಯ ಔಷಧಿಗಳನ್ನು ತಂದು ಜನರಿಗೆ ನೀಡಲಾಗುತ್ತಿದೆ ಎಂದು ನವೀನ ಕುಮಾರ್ ತಿಳಿಸಿದರು.

ಮೋದಿ-ಗ್ರಾ.ಪಂ ಅಧ್ಯಕ್ಷರ ಸಂಭಾಷಣೆ: ಗ್ರಾಮಗಳಲ್ಲಿ ಜಲಸಂರಕ್ಷಣ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ನವೀನ ಕುಮಾರ್ ಹೇಳಿದರು. ಈ ವೇಳೆ ನಿಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟು ಜನರಿದ್ದಾರೆ ಎಂಬ ಮೋದಿ ಪ್ರಶ್ನೆಗೆ, 1500 ಜನರಿದ್ದಾರೆ ಎಂದು ನವೀನ್ ಕುಮಾರ್ ಉತ್ತರಿಸಿದರು. ಹಾಗಾದರೆ ದೊಡ್ಡ ಗ್ರಾಮ, ನಿಮ್ಮ ಮಾತನ್ನು ಜನರು ಕೇಳುತ್ತಾರಾ? ಎಂದು ಮೋದಿ ಕೇಳಿದರು. ಹೌದು ಜನರು ನಮ್ಮ ಮಾತನ್ನು ಕೇಳುತ್ತಾರೆ ಎಂದು ನವೀನ ನುಡಿದರು. ಕೊರೊನಾ ಜಾಗೃತಿ ಸಂಬಂಧ ನೀವು ಒಳ್ಳೆಯ ಕೆಲಸ ಮಾಡುತ್ತಿದ್ದೀರ ನಿಮಗೆ ಒಳ್ಳೆಯದಾಗಲಿ ಎಂದು ಪ್ರಧಾನಿ ಮೋದಿ ಶುಭಹಾರೈಸಿದರು.

ಇದೇ ವೇಳೆ ಪ್ರಧಾನಿ ಮೋದಿ ಇ ಗ್ರಾಮ ಪೋರ್ಟಲ್, ಮೊಬೈಲ್ ಆ್ಯಪ್ ಲಾಂಚ್ ಮಾಡಿದ್ರು. ರೈತರ ಭೂಮಿ‌ ಸರ್ವೇ ನಡೆಸಲು ಸ್ವಾಮಿತ್ವ ಯೋಜನೆಗೂ ಚಾಲನೆ‌ ಕೊಟ್ರು. ಡ್ರೋನ್ ಬಳಸಿ ಗ್ರಾಮೀಣ ಕೃಷಿ ಭೂಮಿ ಸರ್ವೇಗೆ ಹೊಸ ಯೋಜನೆ ಜಾರಿಗೊಳಿಸಿದ್ರು.

Published On - 12:53 pm, Fri, 24 April 20

Follow Us
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ