AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಬಿದನೂರಿನ ವಾಟದ ಹೊಸಹಳ್ಳಿ ಗ್ರಾ.ಪಂ ಅಧ್ಯಕ್ಷರ ಜತೆ ಮೋದಿ ಏನು ಮಾತಾಡಿದ್ರು?

ಬೆಂಗಳೂರು: ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಕೊರೊನಾ ವೈರಸ್​ ನಿಯಂತ್ರಣ ಸಂಬಂಧ ಗೌರಿಬಿದನೂರು ತಾಲೂಕಿನ ವಾಟದ ಹೊಸಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ ಕುಮಾರ್ ಸಹ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿಯಾಗಿದ್ದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಬೇರೆ ಬೇರೆ ರಾಜ್ಯಗಳಿಂದ ಕಾರ್ಮಿಕರು ಬಂದಿದ್ದಾರೆ. ಮಹಾರಾಷ್ಟ್ರದಿಂದ ಬಂದಿರುವ ವಲಸೆ ಕಾರ್ಮಿಕರಿಗೆ ಆಹಾರ, ವಸತಿ ನೀಡಲಾಗುತ್ತಿದೆ. ಬೆಳೆ, ಹಣ್ಣು ತರಕಾರಿ […]

ಗೌರಿಬಿದನೂರಿನ ವಾಟದ ಹೊಸಹಳ್ಳಿ ಗ್ರಾ.ಪಂ ಅಧ್ಯಕ್ಷರ ಜತೆ ಮೋದಿ ಏನು ಮಾತಾಡಿದ್ರು?
ಸಾಧು ಶ್ರೀನಾಥ್​
|

Updated on:Apr 24, 2020 | 12:55 PM

Share

ಬೆಂಗಳೂರು: ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಕೊರೊನಾ ವೈರಸ್​ ನಿಯಂತ್ರಣ ಸಂಬಂಧ ಗೌರಿಬಿದನೂರು ತಾಲೂಕಿನ ವಾಟದ ಹೊಸಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ ಕುಮಾರ್ ಸಹ ವಿಡಿಯೋ ಕಾನ್ಫರೆನ್ಸ್​ನಲ್ಲಿ ಭಾಗಿಯಾಗಿದ್ದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಬೇರೆ ಬೇರೆ ರಾಜ್ಯಗಳಿಂದ ಕಾರ್ಮಿಕರು ಬಂದಿದ್ದಾರೆ. ಮಹಾರಾಷ್ಟ್ರದಿಂದ ಬಂದಿರುವ ವಲಸೆ ಕಾರ್ಮಿಕರಿಗೆ ಆಹಾರ, ವಸತಿ ನೀಡಲಾಗುತ್ತಿದೆ. ಬೆಳೆ, ಹಣ್ಣು ತರಕಾರಿ ಸಾಗಾಟಕ್ಕೆ ಅವಕಾಶ ನೀಡಲಾಗಿದೆ. ರೈತರಿಗೆ ಮುಕ್ತ ಮಾರುಕಟ್ಟೆ ಒದಗಿಸಲಾಗಿದೆ. ಬೆಂಗಳೂರಿನಿಂದ ಅಗತ್ಯ ಔಷಧಿಗಳನ್ನು ತಂದು ಜನರಿಗೆ ನೀಡಲಾಗುತ್ತಿದೆ ಎಂದು ನವೀನ ಕುಮಾರ್ ತಿಳಿಸಿದರು.

ಮೋದಿ-ಗ್ರಾ.ಪಂ ಅಧ್ಯಕ್ಷರ ಸಂಭಾಷಣೆ: ಗ್ರಾಮಗಳಲ್ಲಿ ಜಲಸಂರಕ್ಷಣ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ನವೀನ ಕುಮಾರ್ ಹೇಳಿದರು. ಈ ವೇಳೆ ನಿಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟು ಜನರಿದ್ದಾರೆ ಎಂಬ ಮೋದಿ ಪ್ರಶ್ನೆಗೆ, 1500 ಜನರಿದ್ದಾರೆ ಎಂದು ನವೀನ್ ಕುಮಾರ್ ಉತ್ತರಿಸಿದರು. ಹಾಗಾದರೆ ದೊಡ್ಡ ಗ್ರಾಮ, ನಿಮ್ಮ ಮಾತನ್ನು ಜನರು ಕೇಳುತ್ತಾರಾ? ಎಂದು ಮೋದಿ ಕೇಳಿದರು. ಹೌದು ಜನರು ನಮ್ಮ ಮಾತನ್ನು ಕೇಳುತ್ತಾರೆ ಎಂದು ನವೀನ ನುಡಿದರು. ಕೊರೊನಾ ಜಾಗೃತಿ ಸಂಬಂಧ ನೀವು ಒಳ್ಳೆಯ ಕೆಲಸ ಮಾಡುತ್ತಿದ್ದೀರ ನಿಮಗೆ ಒಳ್ಳೆಯದಾಗಲಿ ಎಂದು ಪ್ರಧಾನಿ ಮೋದಿ ಶುಭಹಾರೈಸಿದರು.

ಇದೇ ವೇಳೆ ಪ್ರಧಾನಿ ಮೋದಿ ಇ ಗ್ರಾಮ ಪೋರ್ಟಲ್, ಮೊಬೈಲ್ ಆ್ಯಪ್ ಲಾಂಚ್ ಮಾಡಿದ್ರು. ರೈತರ ಭೂಮಿ‌ ಸರ್ವೇ ನಡೆಸಲು ಸ್ವಾಮಿತ್ವ ಯೋಜನೆಗೂ ಚಾಲನೆ‌ ಕೊಟ್ರು. ಡ್ರೋನ್ ಬಳಸಿ ಗ್ರಾಮೀಣ ಕೃಷಿ ಭೂಮಿ ಸರ್ವೇಗೆ ಹೊಸ ಯೋಜನೆ ಜಾರಿಗೊಳಿಸಿದ್ರು.

Published On - 12:53 pm, Fri, 24 April 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ