AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪಗೆ ಮೋದಿ ಕಿರುಕುಳ ನೀಡುತ್ತಿದ್ದಾರೆ; ಪ್ರಧಾನಿಗೆ ಕರ್ನಾಟಕವೆಂದರೆ ಅಲರ್ಜಿ: ಶಾಸಕ ಅಮರೇಗೌಡ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾವಾಗಿಯೇ ಖುರ್ಚಿ ಖಾಲಿ ಮಾಡಲಿ ಎಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕಿರುಕುಳ ನೀಡುತ್ತಿದ್ದಾರೆ. ಅದಕ್ಕಾಗಿಯೇ ಕರ್ನಾಟಕಕ್ಕೆ ಅನುದಾನವನ್ನೂ ಸೂಕ್ತವಾಗಿ ಕೊಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಮೋದಿ ತಮ್ಮ ಬಳಿಗೆ ಪ್ರಲ್ಹಾದ್ ಜೋಶಿಯೊಬ್ಬರನ್ನು ಬಿಟ್ಟುಕೊಂಡಿದ್ದಾರೆ. ಡಿ.ವಿ.ಸದಾನಂದ ಗೌಡರಿಗೂ ಹತ್ತಿರಕ್ಕೆ ಹೋಗಲು ಅವಕಾಶವಿಲ್ಲ.

ಯಡಿಯೂರಪ್ಪಗೆ ಮೋದಿ ಕಿರುಕುಳ ನೀಡುತ್ತಿದ್ದಾರೆ; ಪ್ರಧಾನಿಗೆ ಕರ್ನಾಟಕವೆಂದರೆ ಅಲರ್ಜಿ: ಶಾಸಕ ಅಮರೇಗೌಡ
ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ಶಾಸಕ ಅಮರೇಗೌಡ
Skanda
|

Updated on: May 22, 2021 | 7:49 AM

Share

ಕೊಪ್ಪಳ: ಕರ್ನಾಟಕ ರಾಜ್ಯದ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರಧಾನ ಮಂತ್ರಿ ಮೋದಿ ಕಿರುಕುಳ ನೀಡುತ್ತಿದ್ದಾರೆ. ರಾಜ್ಯದ 25 ಸಂಸದರನ್ನು ಕೂಡಾ ಮೋದಿ ತನ್ನ ಹತ್ತಿರಕ್ಕೆ ಬಿಟ್ಟುಕೊಳ್ಳುತ್ತಿಲ್ಲ. ಪ್ರಧಾನಿಗೆ ಕರ್ನಾಟಕ ಎಂದರೆ ಅಲರ್ಜಿ ಆಗಿದೆ ಎಂದು ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಆರೋಪಿಸಿದ್ದಾರೆ. ಕರ್ನಾಟಕಕ್ಕೆ ಸಮರ್ಪಕವಾಗಿ ಅನುದಾನ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಅವರು ನರೇಂದ್ರ ಮೋದಿ ಕರ್ನಾಟಕವನ್ನು ಮುಗಿಸುವ ಸಂಚು ರೂಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾವಾಗಿಯೇ ಖುರ್ಚಿ ಖಾಲಿ ಮಾಡಲಿ ಎಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕಿರುಕುಳ ನೀಡುತ್ತಿದ್ದಾರೆ. ಅದಕ್ಕಾಗಿಯೇ ಕರ್ನಾಟಕಕ್ಕೆ ಅನುದಾನವನ್ನೂ ಸೂಕ್ತವಾಗಿ ಕೊಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಮೋದಿ ತಮ್ಮ ಬಳಿಗೆ ಪ್ರಲ್ಹಾದ್ ಜೋಶಿಯೊಬ್ಬರನ್ನು ಬಿಟ್ಟುಕೊಂಡಿದ್ದಾರೆ. ಡಿ.ವಿ.ಸದಾನಂದ ಗೌಡರಿಗೂ ಹತ್ತಿರಕ್ಕೆ ಹೋಗಲು ಅವಕಾಶವಿಲ್ಲ. ಇಂತಹ ಸಮಯದಲ್ಲಿ ಜನ ಸಾಮಾನ್ಯರ ರಕ್ಷಣೆ ಮಾಡುವ ಕೆಲಸ ಮಾಡಬೇಕಿತ್ತು. ಆದರೆ ಅವರು ಅದನ್ನು ಮಾಡುತ್ತಿಲ್ಲ. ಬಿಜೆಪಿಯವರು ಬಹಳ ಬುದ್ದಿವಂತರು, ವಿಷಯಾಂತರ ಮಾಡುತ್ತಾರೆ ಎಂದು ಅಮರೇಗೌಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಕಿಡಿಕಾರಿದ್ದಾರೆ.

ವೈದ್ಯರ ಮೇಲೆ ದಬ್ಬಾಳಿಕೆ ಆರೋಪ; ಜಂಟಿ ನಿರ್ದೇಶಕ ಅಮಾನತು ಬೆಂಗಳೂರು: ವೈದ್ಯರ ಮೇಲೆ ದಬ್ಬಾಳಿಕೆ ಮಾಡಿ ಔಷಧ, ರೆಮ್‌ಡಿಸಿವಿರ್ ಹಾಗೂ ಹಣವನ್ನು ಪಡೆದ ಆರೋಪ ಹೊತ್ತಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ಮುರಳಿ ಕೃಷ್ಣ ಅವರನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಡಾ.ಮುರಳಿ ಕೃಷ್ಣ, ಆರೋಗ್ಯ ಸಚಿವರ ಜೊತೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರವಾಸಕ್ಕೆ ತೆರಳಿದ್ದಾಗ ರೆಮ್​ಡಿಸಿವಿರ್, ಔಷಧ ಹಾಗೂ ಇತರೆ ವಿಚಾರಗಳಲ್ಲಿ ವೈದ್ಯರ ಮೇಲೆ ದಬ್ಬಾಳಿಕೆ ನಡೆಸಿದ್ದರು ಎಂದು ಬಾಗೇಪಲ್ಲಿ THO ಡಾ.ಸತ್ಯನಾರಾಯಣರೆಡ್ಡಿ ದೂರು ನೀಡಿದ್ದರು.

ಆರೋಗ್ಯ ಸಚಿವರ ಜೊತೆ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದಾಗ ಬಾಗೇಪಲ್ಲಿ ಹಾಗೂ ಶಿಡ್ಲಘಟ್ಟ ತಾಲೂಕು ಆಸ್ಪತ್ರೆಗಳ ಭೇಟಿ ವೇಳೆ ವೈದ್ಯರುಗಳ ಮೇಲೆ ದಬ್ಬಾಳಿಕೆ ನಡೆಸಿ ಔಷಧ ಹಾಗೂ ಹಣ ಪಡೆದಿದ್ದರು ಎಂದು ಆರೋಪಿಸಲಾಗಿತ್ತು. ಇದು ಆರೋಗ್ಯ ಸಚಿವರ ಗಮನಕ್ಕೆ ಬರುತ್ತಿದ್ದಂತೆಯೇ ಕ್ರಮ ಜರುಗಿಸಲಾಗಿದೆ. ಸದ್ಯ ದೂರಿನನ್ವಯ ಅಮಾನತುಗೊಂಡಿರುವ ಡಾ.ಮುರಳಿ ಕೃಷ್ಣ ಅವರನ್ನು ಕೊಪ್ಪಳ ಜಿಲ್ಲೆ ಯಲಬುರ್ಗಾಕ್ಕೆ ವೈದ್ಯಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: Karnataka Lockdown: ಕರ್ನಾಟಕದಲ್ಲಿ ಜೂನ್​ 7ರ ಬೆಳಗ್ಗೆ 6ಗಂಟೆಯವರೆಗೂ ಲಾಕ್​ಡೌನ್ ವಿಸ್ತರಣೆ; ಸಿಎಂ ಯಡಿಯೂರಪ್ಪ ಘೋಷಣೆ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್