Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಆರ್‌ಟಿ ಸಂರಕ್ಷಿತಾರಣ್ಯದಲ್ಲಿ ಹುಲಿ ಸಂತತಿ ಹೆಚ್ಚಳಕ್ಕೆ ಸೋಲಿಗರ ಶ್ಲಾಘಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಕರ್ನಾಟಕದ ಬಿಆರ್‌ಟಿ ಹುಲಿ ಅಭಯಾರಣ್ಯದಲ್ಲಿ ಹುಲಿಗಳ ಸಂಖ್ಯೆಯಲ್ಲಿನ ಹೆಚ್ಚಳಕ್ಕೆ ಸೋಲಿಗ ಬುಡಕಟ್ಟು ಜನಾಂಗದವರ ಕೊಡುಗೆಯನ್ನು ಮೆಚ್ಚಿಕೊಂಡಿದ್ದಾರೆ. ಸೋಲಿಗರು ಹುಲಿಯನ್ನು ಪೂಜಿಸುವುದರಿಂದ ಇದು ಸಾಧ್ಯವಾಗಿದೆ. ಇದರಿಂದಾಗಿ ಅಭಯಾರಣ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಅವರು ಹೇಳಿದ್ದಾರೆ.

ಬಿಆರ್‌ಟಿ ಸಂರಕ್ಷಿತಾರಣ್ಯದಲ್ಲಿ ಹುಲಿ ಸಂತತಿ ಹೆಚ್ಚಳಕ್ಕೆ ಸೋಲಿಗರ ಶ್ಲಾಘಿಸಿದ ಪ್ರಧಾನಿ ಮೋದಿ
ಬಿಆರ್‌ಟಿ ಅರಣ್ಯದಲ್ಲಿ ಹುಲಿ ಸಂತತಿ ಹೆಚ್ಚಳಕ್ಕೆ ಸೋಲಿಗರ ಶ್ಲಾಘಿಸಿದ ಮೋದಿ
Follow us
Ganapathi Sharma
|

Updated on: Feb 24, 2025 | 9:43 AM

ನವದೆಹಲಿ, ಫೆಬ್ರವರಿ 24: ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಬಿಆರ್‌ಟಿ ಹುಲಿ ಅಭಯಾರಣ್ಯದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗಲು ಸೋಲಿಗ ಬುಡಕಟ್ಟು ಜನಾಂಗದವರ ಕೊಡುಗೆ ಗಣನೀಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ತಿಂಗಳ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಮುಂದಿನ ತಿಂಗಳ ಆರಂಭದಲ್ಲಿ ವಿಶ್ವ ವನ್ಯಜೀವಿ ದಿನವನ್ನು ಆಚರಿಸಲು ಕರೆ ನೀಡಿದ್ದಾರೆ.

‘‘ವನ್ಯಜೀವಿ ರಕ್ಷಣೆಗೆ ಸಂಬಂಧಿಸಿದ ಕೆಲಸಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ ನನ್ನ ಬುಡಕಟ್ಟು ಸಹೋದರ ಸಹೋದರಿಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಕರ್ನಾಟಕದ ಬಿಆರ್‌ಟಿ ಹುಲಿ ಅಭಯಾರಣ್ಯದಲ್ಲಿ ಹುಲಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇದರ ಹಿಂದೆ ಸೋಲಿಗ ಜನಾಂಗದ ಸಹೋದರರ ಕೊಡುಗೆ ಇದೆ’’ ಎಂದು ಪ್ರಧಾನಿ ಹೇಳಿದ್ದಾರೆ.

ಹುಲಿಯ ಸಂತತಿ ಹೆಚ್ಚಳಕ್ಕೆ ಸೋಲಿಗ ಜನಾಂಗದವರ ಕೊಡುಗೆಗೆ ಮನ್ನಣೆ ಸಲ್ಲಬೇಕು. ಅವರು ಹುಲಿಯನ್ನು ಪೂಜಿಸುವ ಜನಾಂಗದವರಾಗಿದ್ದಾರೆ. ಅವರ ಕಾರಣದಿಂದಾಗಿ, ಆ ಪ್ರದೇಶದಲ್ಲಿ ಬಹುತೇಕ ಮನುಷ್ಯ-ಪ್ರಾಣಿ ಸಂಘರ್ಷವಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ.

ಎಲ್ಲೆಲ್ಲಿದೆ ಸೋಲಿ ಬುಡಕಟ್ಟು ಜನಾಂಗದವರ ನೆಲೆ?

570 ಚದರ ಕಿ.ಮೀ ಅರಣ್ಯ ಪ್ರದೇಶದಲ್ಲಿ ಹರಡಿರುವ ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ (BRT) ಹುಲಿ ಅಭಯಾರಣ್ಯ ಪ್ರದೇಶವು 40 ಕ್ಕೂ ಹೆಚ್ಚು ಹುಲಿಗಳು ಮತ್ತು 280 ಕ್ಕೂ ಹೆಚ್ಚು ಜಾತಿಯ ಅಪರೂಪದ ಪಕ್ಷಿಗಳಿಗೆ ನೆಲೆಯಾಗಿದೆ. ಸೋಲಿಗ ಬುಡಕಟ್ಟು ಕರ್ನಾಟಕದ ಚಾಮರಾಜನಗರದ ಬಿಳಿಗಿರಿ ರಂಗನ ಬೆಟ್ಟಗಳಲ್ಲಿ ಮತ್ತು ತಮಿಳುನಾಡಿನ ಈರೋಡ್ ಜಿಲ್ಲೆಯ ಕೆಲವು ಭಾಗಗಳಲ್ಲಿ ವಾಸಿಸುವ ಸ್ಥಳೀಯ ಬುಡಕಟ್ಟು ಜನಾಂಗವಾಗಿದೆ.

ಕಾಡು ಪ್ರಾಣಿಗಳಿಗೆ ನಮ್ಮ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಸ್ಥಾನವಿದೆ. ಅನೇಕ ಪ್ರಾಣಿಗಳನ್ನು ನಮ್ಮ ದೇವರು ಮತ್ತು ದೇವತೆಗಳ ವಾಹನಗಳಾಗಿಯೂ ಗಮನಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.

ಹುಲಿ ಕುಣಿತ ವೇಷದ ಬಗ್ಗೆಯೂ ಮೋದಿ ಮೆಚ್ಚುಗೆ

ಕರ್ನಾಟಕದ ಹುಲಿ ವೇಷ ಕುಣಿತ, ತಮಿಳುನಾಡಿನ ಪೂಲಿ ಮತ್ತು ಕೇರಳದ ಪುಲಿಕಲಿಯಂತಹ ಅನೇಕ ಸಾಂಸ್ಕೃತಿಕ ನೃತ್ಯಗಳು ನಮ್ಮಲ್ಲಿವೆ. ಇವು ಪ್ರಕೃತಿ ಮತ್ತು ವನ್ಯಜೀವಿಗಳೊಂದಿಗೆ ಸಂಬಂಧ ಹೊಂದಿವೆ. ವನ್ಯಜೀವಿ ರಕ್ಷಣೆಗೆ ಸಂಬಂಧಿಸಿದ ಕೆಲಸಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವುದಕ್ಕಾಗಿ ನನ್ನ ಬುಡಕಟ್ಟು ಸಹೋದರ ಸಹೋದರಿಯರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಬುಡಕಟ್ಟು ಜನಾಂಗದವರ ಬಗ್ಗೆ ಮೋದಿ ಮಾತು

ಮಧ್ಯ ಭಾರತದ ಅನೇಕ ಬುಡಕಟ್ಟು ಜನಾಂಗದವರು ಬಾಗೇಶ್ವರನನ್ನು ಪೂಜಿಸುತ್ತಾರೆ. ಮಹಾರಾಷ್ಟ್ರದಲ್ಲಿ ವಾಘೋಬಾನನ್ನು ಪೂಜಿಸುವ ಸಂಪ್ರದಾಯವಿದೆ. ಅಯ್ಯಪ್ಪ ಸ್ವಾಮಿಗೂ ಹುಲಿಯೊಂದಿಗೆ ಸಂಬಂಧವಿದೆ. ಹುಲಿಯ ವಾಹನವಾಗಿರುವ ಬೊನ್ಬೀಬಿಯನ್ನು ಸುಂದರಬನದಲ್ಲಿ ಪೂಜಿಸಲಾಗುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಹುಲಿ ವೇಷ ಕುಣಿತ ಹಾಡಿ ಹೊಗಳಿದ ಪ್ರಧಾನಿ ಮೋದಿ

ಏಷ್ಯಾಟಿಕ್ ಸಿಂಹ, ಹಂಗುಲ್, ಪಿಗ್ಮಿ ಹಾಗ್ ಮತ್ತು ಸಿಂಹ ಬಾಲದ ಮಕಾಕ್ ನಡುವಿನ ಹೋಲಿಕೆಯ ಬಗ್ಗೆ ಮೋದಿ ಉಲ್ಲೇಖಿಸಿದ್ದಾರೆ.

ಇವೆಲ್ಲವೂ ಜಗತ್ತಿನ ಬೇರೆಲ್ಲಿಯೂ ಕಂಡುಬರುವುದಿಲ್ಲ. ಅವು ನಮ್ಮ ದೇಶದಲ್ಲಿ ಮಾತ್ರ ಕಂಡುಬರುತ್ತವೆ. ನಿಜಕ್ಕೂ, ನಮ್ಮಲ್ಲಿ ಸಸ್ಯ ಮತ್ತು ಪ್ರಾಣಿಗಳ ಅತ್ಯಂತ ರೋಮಾಂಚಕ ಪರಿಸರ ವ್ಯವಸ್ಥೆ ಇದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ