AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ.25ರಂದು ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ: ಪ್ರಧಾನಿ ಮೋದಿಯಿಂದ ಚಾಲನೆ

ಬೆರಳೆಣಿಕೆಯ ಕನ್ನಡಿಗರು ಒಂದೆಡೆ ಸೇರಿ 1948ರಲ್ಲಿ ದೆಹಲಿಯಲ್ಲಿ ಆರಂಭಿಸಿದ ದೆಹಲಿ ಕರ್ನಾಟಕ ಸಂಘ ಇದೀಗ ನಾಡು, ಹೊರನಾಡು ಹಾಗೂ ವಿದೇಶಗಳಲ್ಲಿ ಸಾವಿರಾರು ಮಂದಿ ಆಜೀವ ಸದಸ್ಯರನ್ನು ಮತ್ತು ನಾಡಿನ ಪ್ರಮುಖ ಗಣ್ಯರನ್ನು ಗೌರವ ಸದಸ್ಯರನ್ನಾಗಿ ಹೊಂದಿ ಬೃಹದಾಕಾರವಾಗಿ ಬೆಳೆದಿದೆ.

ಫೆ.25ರಂದು ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ: ಪ್ರಧಾನಿ ಮೋದಿಯಿಂದ ಚಾಲನೆ
ದೆಹಲಿ ಕರ್ನಾಟಕ ಸಂಘ
TV9 Web
| Edited By: |

Updated on: Feb 16, 2023 | 6:56 PM

Share

ದೆಹಲಿ: ಸ್ವಾತಂತ್ರ್ಯ ಸಿಕ್ಕಿದ ನಂತರದ ವರ್ಷದಲ್ಲಿ ದೆಹಲಿಯಲ್ಲಿ ಸಣ್ಣದಾಗಿ ಆರಂಭವಾದ ದೆಹಲಿ ಕರ್ನಾಟಕ ಸಂಘ (Delhi Karnataka Association) ಇದೀಗ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ದೆಹಲಿಯ ತಾಲ್ಕಟೋರ ಸ್ಟೇಡಿಯಂನಲ್ಲಿ ಫೆ.25ರಂದು ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಲಿದ್ದಾರೆ. 2 ದಿನ ನಡೆಯುವ ಈ ಕಾರ್ಯಕ್ರಮದಲ್ಲಿ ಸುಮಾರು 5,000 ಜನ ಸೇರುವ ನಿರೀಕ್ಷೆ ಹೊಂದಲಾಗಿದೆ.

ಬೆರಳೆಣಿಕೆಯ ಕನ್ನಡಿಗರು ಒಂದೆಡೆ ಸೇರಿ 1948ರಲ್ಲಿ ದೆಹಲಿಯಲ್ಲಿ ಆರಂಭಿಸಿದ ಈ ಸಂಘ ಇದೀಗ ನಾಡು, ಹೊರನಾಡು ಹಾಗೂ ವಿದೇಶಗಳಲ್ಲಿ ಸಾವಿರಾರು ಮಂದಿ ಆಜೀವ ಸದಸ್ಯರನ್ನು ಮತ್ತು ನಾಡಿನ ಪ್ರಮುಖ ಗಣ್ಯರನ್ನು ಗೌರವ ಸದಸ್ಯರನ್ನಾಗಿ ಹೊಂದಿ ಬೃಹದಾಕಾರವಾಗಿ ಬೆಳೆದಿದೆ. ದೆಹಲಿ ಕರ್ನಾಟಕ ಸಂಘವು ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಂಘಟನೆ ಎಂದು ಅಧಿಕೃತವಾಗಿ ನೋಂದಣೆ ಆಗುವ ಮೊದಲು ಅದರ ಎಲ್ಲ ಚಟುವಟಿಕೆಗಳು ಇಲ್ಲಿನ ಕನ್ನಡಿಗರ ಮನೆಗಳಲ್ಲೇ ಜರಗುತ್ತಿದ್ದವು.

ರಾಜಧಾನಿಯ ವಿವಿದೆಡೆ ಚದುರಿ ಹೋಗಿರುವ ಕನ್ನಡಿಗರನ್ನು ಒಂದೆಡೆ ಕಲೆ ಹಾಕಿ ಆ ಮೂಲಕ ರಾಜ್ಯದ ವೈವಿಧ್ಯಮಯ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮತ್ತು ರಾಜ್ಯದಿಂದ ಬರುವ ಪ್ರತಿಭೆಗಳಿಗೆ ರಾಷ್ಟ್ರ ಮಟ್ಟದಲ್ಲಿ ಮಿಂಚಲು ಸೂಕ್ತ ವೇದಿಕೆ ಅಗತ್ಯ. ದೆಹಲಿ ಕರ್ನಾಟಕ ಸಂಘ ಈ ಉದ್ದೇಶವನ್ನು ಮನಗಂಡು ದೆಹಲಿಯಲ್ಲಿ ಸೂಕ್ತ ನಿವೇಶನ ಮತ್ತು ತನ್ನದೇ ಆದ ಕಟ್ಟಡವನ್ನು ಹೊಂದಲು ಬಯಸಿತು. ಅದರಂತೆ ಕೇಂದ್ರ ಸಚಿವರಾಗಿದ್ದ ಕೆ.ಸಿ. ರೆಡ್ಡಿಯವರ ಮುತುವರ್ಜಿಯಿಂದ 1953ರಲ್ಲಿ ಸಂಘಕ್ಕೆ ಲೋಧಿ ಎಸ್ಟೇಟ್‌ನಲ್ಲಿ ಜಾಗವೊಂದು ಮಂಜೂರಾಯಿತು. ಅದೇ ವರ್ಷ ಸಂಘ ಅಧಿಕೃತವಾಗಿ ನೋಂದಾವಣೆಗೊಂಡಿತು.

ಇದನ್ನೂ ಓದಿ: Mahashivratri 2023: ಚಿಕ್ಕಬಳ್ಳಾಪುರ ಈಶಾ ಫೌಂಡೇಷನ್ – ಮೊದಲ ಬಾರಿ ಅದ್ದೂರಿ ಶಿವರಾತ್ರಿ ಆಚರಣೆ! ಪೂಜೆ, ಪ್ರವಚನ ಕಾರ್ಯಕ್ರಮಗಳ ಸಂಪೂರ್ಣ ವಿವರ ಇಲ್ಲಿದೆ

ದೆಹಲಿ ಕರ್ನಾಟಕ ಸಂಘವು ಬರಿಯ ಮನರಂಜನೆ, ಸಾಹಿತ್ಯ ಗೋಷ್ಠಿ, ಅಥವಾ ಹೊರಗಿನಿಂದ ಬಂದ ಕನ್ನಡಿಗರಿಗೆ ವಸತಿ ಸೌಲಭ್ಯವನ್ನು ಒದಗಿಸುವ ಕೆಲಸವನ್ನಷ್ಟೇ ಮಾಡುತ್ತಿಲ್ಲ. ಇಲ್ಲಿ ಸಾಮಾಜಿಕ ಕಳಕಳಿಯ ಹತ್ತು ಹಲವು ಕಾರ್ಯಕ್ರಮಗಳು ಜರಗುತ್ತಿವೆ. ಉಚಿತ ವೈದ್ಯಕೀಯ ತಪಾಸಣೆ, ಸಂಗೀತ ತರಬೇತಿ, ಯೋಗ ತರಬೇತಿ, ಐಎಎಸ್ ಅಭ್ಯರ್ಥಿಗಳ ತರಬೇತಿಗೆ ಸ್ಥಳಾವಕಾಶ, ಅರ್ಹ ಮತ್ತು ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಕನ್ನಡ ಕಲಿಕೆ, ಉಚಿತ ಕಾನೂನು ಸಲಹೆ ಇತ್ಯಾದಿ ಜನಪರ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಕಲಾವಿದರಿಗೆ, ಸ್ಥಳೀಯ ಪ್ರತಿಭೆಗಳಿಗೆ ಹಾಗೂ ಬರಹಗಾರರಿಗೆ ಪ್ರೋತ್ಸಾಹ ನೀಡಲು ನಾಟಕ ಸ್ಪರ್ಧೆ, ವಿಶಿಷ್ಟ ಕನ್ನಡಿಗ ಪ್ರಶಸ್ತಿ, ಶಿವರಾಮ ಕಾರಂತ ಪ್ರಶಸ್ತಿ ಮೊದಲಾದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ