AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಬೆಂಗಳೂರು ಟೆಕ್ ಸಮ್ಮಿಟ್ 2020’ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಬೆಂಗಳೂರು: ’ಬೆಂಗಳೂರು ಟೆಕ್ ಸಮ್ಮಿಟ್ 2020’ನ್ನು ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ನವಂಬರ್ 19ರಿಂದ 21ರವರೆಗೆ, ಮೂರು ದಿನಗಳ ಕಾಲ ನಡೆಯಲಿರುವ ಈ ಶೃಂಗಸಭೆ, 19ನೇ ತಾರೀಕಿನಂದು ಮಧ್ಯಾಹ್ನ 12 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಕರ್ನಾಟಕ ಇನ್ನೋವೇಷನ್ ಮತ್ತು ಟೆಕ್ನಾಲಜಿ ಸೊಸೈಟಿ (KITS), ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಷನ್ ಗ್ರೂಪ್, ಬಯೋಟೆಕ್ನಾಲಜಿ ಮತ್ತು ಸ್ಟಾರ್ಟಪ್ ಸಂಸ್ಥೆ, ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI), ಎಮ್.ಎಮ್. ಆಕ್ಟಿವ್ ಸೈ-ಟೆಕ್ ಕಮ್ಯುನಿಕೇಷನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ […]

’ಬೆಂಗಳೂರು ಟೆಕ್ ಸಮ್ಮಿಟ್ 2020’ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಸಾಧು ಶ್ರೀನಾಥ್​
|

Updated on: Nov 17, 2020 | 5:50 PM

Share

ಬೆಂಗಳೂರು: ’ಬೆಂಗಳೂರು ಟೆಕ್ ಸಮ್ಮಿಟ್ 2020’ನ್ನು ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ನವಂಬರ್ 19ರಿಂದ 21ರವರೆಗೆ, ಮೂರು ದಿನಗಳ ಕಾಲ ನಡೆಯಲಿರುವ ಈ ಶೃಂಗಸಭೆ, 19ನೇ ತಾರೀಕಿನಂದು ಮಧ್ಯಾಹ್ನ 12 ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ಕರ್ನಾಟಕ ಇನ್ನೋವೇಷನ್ ಮತ್ತು ಟೆಕ್ನಾಲಜಿ ಸೊಸೈಟಿ (KITS), ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಷನ್ ಗ್ರೂಪ್, ಬಯೋಟೆಕ್ನಾಲಜಿ ಮತ್ತು ಸ್ಟಾರ್ಟಪ್ ಸಂಸ್ಥೆ, ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI), ಎಮ್.ಎಮ್. ಆಕ್ಟಿವ್ ಸೈ-ಟೆಕ್ ಕಮ್ಯುನಿಕೇಷನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ ಕರ್ನಾಟಕ ಸರ್ಕಾರ ಈ ಶೃಂಗಸಭೆಯನ್ನು ಆಯೋಜಿಸಲಿದೆ.

ಬೆಂಗಳೂರು ಟೆಕ್ ಸಮ್ಮಿಟ್ 2020ರಲ್ಲಿ ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಎಚ್.ಇ. ಸ್ಕಾಟ್ ಮಾರಿಸನ್, ಸ್ವಿಸ್ ಕಾನ್ಫೆಡರೇಷನ್ ಉಪಾಧ್ಯಕ್ಷ ಎಚ್.ಇ. ಗೈ ಪರ್ಮೆಲಿನ್ ಮತ್ತಿತರ ಅಂತಾರಾಷ್ಟ್ರೀಯ ಅತಿಥಿಗಳು ಭಾಗವಹಿಸಲಿದ್ದಾರೆ. ದೇಶ ವಿದೇಶದ ಚಿಂತಕರು, ಉದ್ಯಮಿಗಳು, ತಂತ್ರಜ್ಞರು, ಸಂಶೋಧಕರು, ಹೂಡಿಕೆದಾರರು, ನೀತಿ ನಿರೂಪಕರು, ಶಿಕ್ಷಣ ತಜ್ಞರು ಕೂಡ ಸಮ್ಮಿಟ್ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಬಾರಿಯ ಶೃಂಗಸಭೆಯ ವಿಷಯ ’ನೆಕ್ಸ್ಟ್ ಇಸ್ ನೌ’ ಎಂದಾಗಿದ್ದು, ಕೊರೊನೋತ್ತರ ಪ್ರಪಂಚದ ಸವಾಲುಗಳ ಕುರಿತು ಚರ್ಚೆಯಾಗಲಿದೆ. ’ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್’ ಹಾಗೂ ’ಬಯೋಟೆಕ್ನಾಲಜಿ’ ವಿಭಾಗದ ಪ್ರಮುಖ ತಂತ್ರಜ್ಞಾನಗಳು ಮತ್ತು ಹೊಸತನಗಳು ಶೃಂಗಸಭೆಯ ಮುಖ್ಯ ಅಂಶಗಳಾಗಿ ಇರಲಿವೆ.

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು