AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Train: ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿರುವ ಮೋದಿ, ರೈಲು ಸಂಚಾರದಲ್ಲಿ ವ್ಯತ್ಯಯ

ಪ್ರಧಾನಿ ಮೋದಿ ಅವರು ವಂದೇ ಭಾರತ್​ ರೈಲಿಗೆ ಚಾಲನೆ ನೀಡಲಿದ್ದು ಬೆಂಗಳೂರು ನಗರಕ್ಕೆ ಆಗಮಿಸುವ ಕೆಲವೊಂದು ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ.

Vande Bharat Train: ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿರುವ ಮೋದಿ, ರೈಲು ಸಂಚಾರದಲ್ಲಿ ವ್ಯತ್ಯಯ
ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Rakesh Nayak Manchi|

Updated on:Nov 11, 2022 | 7:48 AM

Share

ಬೆಂಗಳೂರು: ಮೈಸೂರಿನಿಂದ ಬೆಂಗಳೂರಿನ ಮೂಲಕ ಚೆನ್ನೈಗೆ ತೆರಳುವ ‘ವಂದೇ ಭಾರತ್’ ರೈಲಿಗೆ (Vande Bharat Train) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹಸಿರು ನಿಶಾನೆ ತೋರಲಿದ್ದಾರೆ. ಈ ರೈಲು ದಕ್ಷಿಣದಲ್ಲಿ ಮೊದಲ ಸೆಮಿ-ಹೈಸ್ಪೀಡ್ ರೈಲು ಮತ್ತು ದೇಶದಲ್ಲಿ ಐದನೇ ರೈಲು ಆಗಿದೆ. ರೈಲಿಗೆ ಚಾಲನೆ ನೀಡುತ್ತಿರುವ ಹಿನ್ನೆಲೆ ಕಣ್ಣೂರು-ಕೆಎಸ್​ಆರ್​ ಎಕ್ಸ್​ಪ್ರೆಸ್, ಅರಸೀಕೆರೆ-ಕೆಎಸ್​ಆರ್​ ಸ್ಪೆಷಲ್ ಎಕ್ಸ್​ಪ್ರೆಸ್ ರೈಲು ಸೇರಿದಂತೆ ಬೆಂಗಳೂರಿನಲ್ಲಿ 11 ರೈಲುಗಳ ಸಂಚಾರ ರದ್ದುಗೊಂಡಿದ್ದು, ಕೆಲವೊಂದು ರೈಲುಗಳ ಸಮಯದಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.

ಕಣ್ಣೂರು- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ (ಕೆಎಸ್​ಆರ್)​ ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದಾಗಲಿದ್ದು, ಅರಸೀಕೆರೆ-ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ​ ಸ್ಪೆಷಲ್ ಎಕ್ಸ್​ಪ್ರೆಸ್​ ರೈಲು, ಕೋಲಾರ-ಯಶವಂತಪುರ​​ ಡೆಮು ಎಕ್ಸ್​ಪ್ರೆಸ್​ ರೈಲು, ಮೈಸೂರು-ನಾಯಂಡಹಳ್ಳಿ​​ ಮೆಮು ಎಕ್ಸ್​ಪ್ರೆಸ್​ ರೈಲು, ಹಿಂದೂಪುರ-ಯಶವಂತಪುರ ಮೆಮು ಎಕ್ಸ್​ಪ್ರೆಸ್​ ರೈಲು, ಮಾರಿಕುಪ್ಪಂ-ಕಂಟೋನ್ಮೆಂಟ್​ ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದಾಗಿದೆ.

ಅಲ್ಲದೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ (ಕೆಎಸ್​ಆರ್)-ತುಮಕೂರು ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದಾಗಿದ್ದು, ಹಾಸನ-ಕೆಎಸ್​ಆರ್​ ಡೆಮು ಎಕ್ಸ್​ಪ್ರೆಸ್​ ರೈಲು, ಕೆಎಸ್​ಆರ್​-ವೈಟ್​ಫೀಲ್ಡ್​ ಮೆಮು ಎಕ್ಸ್​ಪ್ರೆಸ್​ ರೈಲು, ಮೈಸೂರು-ಕೆಎಸ್​ಆರ್​ ಮೈಸೂರು ಮೆಮು ಎಕ್ಸ್​ಪ್ರೆಸ್​ ರೈಲು, ಕುಪ್ಪಂ-ಬೆಂಗಳೂರು ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದುಗೊಂಡಿದೆ.

ಐದು ರೈಲುಗಳ ಸಮಯದಲ್ಲಿ ಬದಲಾವಣೆ

ವಂದೇ ಭಾರತ್​ ರೈಲಿಗೆ ಇಂದು ಪ್ರಧಾನಿ ಮೋದಿ ಚಾಲನೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸುವ ಐದು ರೈಲುಗಳ ಸಮಯದಲ್ಲಿ ಬದಲಾವಣೆಯಾಗಲಿದೆ. ಕೆಎಸ್‌ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್‌ ರೈಲು ಬೆಂಗಳೂರಿಗೆ ಆಗಮಿಸುವ ಸಮಯದಲ್ಲಿ ವ್ಯತ್ಯಯವಾಗಲಿದೆ. ಸುಮಾರು 60 ನಿಮಿಷ ತಡವಾಗಿ ಆಗಮಿಸಲಿರುವ ಜನಶತಾಬ್ದಿ ಎಕ್ಸ್‌ಪ್ರೆಸ್‌ ಬೆಂಗಳೂರಿಗೆ ಆಗಮಿಸಲಿದೆ. ಇದಲ್ಲದೆ, ಚಾಮುಂಡಿ ಎಕ್ಸ್‌ಪ್ರೆಸ್‌ ರೈಲಿನ ಸಮಯದಲ್ಲೂ ಬದಲಾವಣೆಯಾಗಿದ್ದು, ಮೈಸೂರಿನಿಂದ 60 ನಿಮಿಷ ತಡವಾಗಿ ಆಗಮಿಸಲಿದೆ.

ಮೈಸೂರು ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾವಣೆಯಾಗಿದ್ದು, ಚೆನ್ನೈನಿಂದ 60 ನಿಮಿಷ ತಡವಾಗಿ ಬೆಂಗಳೂರಿಗೆ ಆಗಮಿಸಲಿದ್ದು, ಮೈಸೂರು ರಾಜರಾಣಿ ಎಕ್ಸ್‌ಪ್ರೆಸ್‌ ರೈಲು ಮೈಸೂರಿನಿಂದ ಬೆಂಗಳೂರಿಗೆ 90 ನಿಮಿಷ ತಡವಾಗಿ ಆಗಮಿಸಲಿದೆ. ಬೆಳಗಾವಿ ವಿಶ್ವಮಾನವ ಎಕ್ಸ್‌ಪ್ರೆಸ್‌ ರೈಲು ಮೈಸೂರಿನಿಂದ ಬೆಂಗಳೂರಿಗೆ 100 ನಿಮಿಷ ತಡವಾಗಿ ಆಗಮಿಸಲಿದ್ದರೆ, ಬೆಳಗಾವಿ ವಿಶ್ವಮಾನವ ಎಕ್ಸ್‌ಪ್ರೆಸ್‌ ರೈಲಿನ ಮಾರ್ಗ ಬದಲಾವಣೆಯಾಗಿದೆ. ಹಾಸನ, ಅರಸೀಕೆರೆ ಮಾರ್ಗವಾಗಿ ಬೆಂಗಳೂರಿಗೆ ರೈಲು ಆಗಮಿಸಲಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 am, Fri, 11 November 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?