AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಗಂಟೆಯಲ್ಲಿ 3 ಕಾರ್ಯಕ್ರಮ: ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳಾಪಟ್ಟಿ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 10 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದರೊಂದಿಗೆ, ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದು, ರಾಗಿಗುಡ್ಡದಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ, ಬಿಜೆಪಿ ಕಾರ್ಯಕರ್ತರು ಮೆಟ್ರೋ ನಿಲ್ದಾಣಗಳಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ ಕೋರಲು ಸಿದ್ಧತೆ ನಡೆಸಿದ್ದಾರೆ. 4 ಗಂಟೆಯಲ್ಲಿ 3 ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳಾಪಟ್ಟಿ ಇಲ್ಲಿದೆ.

4 ಗಂಟೆಯಲ್ಲಿ 3 ಕಾರ್ಯಕ್ರಮ: ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳಾಪಟ್ಟಿ ಇಲ್ಲಿದೆ
ನರೇಂದ್ರ ಮೋದಿ
ರಮೇಶ್ ಬಿ. ಜವಳಗೇರಾ
|

Updated on: Aug 09, 2025 | 3:22 PM

Share

ಬೆಂಗಳೂರು, (ಆಗಸ್ಟ್ 09): ನಮ್ಮ ಮೆಟ್ರೋದ  ಹಳದಿ ಮಾರ್ಗ​  (Namma Metro Yellow Line) ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್​ ರೈಲಿಗೆ (Bengaluru-Belagavi Vande Bharat Train) ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಳೆ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಕುರಿತು ವೇಳಾಪಟ್ಟಿ ಹಂಚಿಕೊಂಡಿರುವ ಸಿಎಂ ಕಚೇರಿ, ಮೋದಿ ನಾಲ್ಕು ಗಂಟೆಗಳ ಕಾಲ ಇರಲಿದ್ದು, ಈ ವೇಳೆ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 10.30ಕ್ಕೆ ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಕೆಎಸ್​ಆರ್​ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಲಿದ್ದು, ಅಲ್ಲಿ ಬೆಂಗಳೂರು- ಬೆಳಗಾವಿ ನಡುವೆ ವಂದೇ ಭಾರತ್​ ಟ್ರೈನ್​​ ಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ವರ್ಚುವಲ್​ ಆಗಿ ಅಮೃತ್​ಸರ್​- ಶ್ರೀ ಮತಾ ವೈಷ್ಣೋದೇವಿ ಕತ್ರಿ ಹಾಗೂ ಅಜ್ನಿ (ನಾಗಪುರ್​)- ಪುಣೆಯ ಮತ್ತೆರಡು ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿಗೆ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ: ನಾಳೆ ಯೆಲ್ಲೋ ಮೆಟ್ರೋ ಮಾರ್ಗ ಉದ್ಘಾಟನೆ: ಭಾನುವಾರ ಈ ರಸ್ತೆಗಳು ಬಂದ್, ಪರ್ಯಾಯ ಮಾರ್ಗಗಳು ಹೀಗಿವೆ

ಬಳಿಕ ರಸ್ತೆ ಮಾರ್ಗದ ಮೂಲಕ ಆರ್​ವಿ ರಸ್ತೆ (ರಾಗಿಗುಡ್ಡ) ಮೆಟ್ರೋ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 11.45ರಿಂದ 12.50ರ ನಡುವೆ ಹಳದಿ ಮಾರ್ಗ ಲೋಕಾರ್ಪಣೆ ಮಾಡಿ, ಎಲೆಕ್ಟ್ರಾನಿಕ್​ ಸಿಟಿ ಸ್ಟೇಷನ್​ವರೆಗೆ ಮೆಟ್ರೋ ಪ್ರಯಾಣ ನಡೆಸಲಿದ್ದಾರೆ. 19.15 ಕಿ.ಮೀ ಉದ್ದದ ಆರ್​ವಿ ರಸ್ತೆಯಿಂದ ಬೊಮ್ಮಸಂದ್ರ ಸಾಗಲಿರುವ ಹಳದಿ ಮೆಟ್ರೋ ಮಾರ್ಗದಲ್ಲಿ 16 ಸ್ಟೇಷನ್​ ಬರಲಿದ್ದು, ಇದನ್ನು 5,056.99 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.

ಇದಾದ ಬಳಿಕ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಬೆಂಗಳೂರಿಗೆ ಆಗಮಿಸಿಲಿದ್ದು, ಇಲ್ಲಿ ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕು ಸ್ಥಾಪನೆ ನೀಡಲಿದ್ದಾರೆ. ಬಳಿಕ ಹೆಲಿಕಾಪ್ಟರ್​ ಮೂಲಕ ಹೆಚ್​ಎಎಲ್​ಗೆ ತೆರಳಿ, 2.45ಕ್ಕೆ ದೆಹಲಿಯತ್ತ ಪ್ರಯಾಣ ಬೆಳಸಲಿದ್ದಾರೆ. ಮೆಟ್ರೋ 3ಹಂತದ ಯೋಜನೆ ಆರೇಂಜ್​ ಲೈನ್ (ಕಿತ್ತಾಳೆ ಮಾರ್ಗ)​ ಆಗಿದ್ದು, ಇದು 44.65 ಕಿ.ಮೀ ದೂರ ಹೊಂದಿದ್ದು, ಇದನ್ನು ಅಂದಾಜು 15.611 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಇದಕ್ಕೆ ಕೂಡ ಮೋದಿ ಶಂಕು ಸ್ಥಾಪನೆ ನಡೆಸಲಿದ್ದಾರೆ.

ಹಳದಿ ಲೈನ್​ ಮೆಟ್ರೋ ನಿಲ್ದಾಣ ಉದ್ಘಾಟನೆ ಹಿನ್ನೆಲೆ ಈ ಮಾರ್ಗದಲ್ಲಿ ಟ್ರಾಫಿಕ್​ ದಟ್ಟಣೆ ಇರಲಿದ್ದು, ಹೊಸೂರು ರಸ್ತೆ, ಸಿಲ್ಕ್​ ಬೋರ್ಡ್​ ಜಂಕ್ಷನ್​ ಮತ್ತು ಎಲೆಕ್ಟ್ರಾನಿಕ್ಸ್​ ಸಿಟಿ ಜಂಕ್ಷನ್​ನಲ್ಲಿ ಪ್ರಯಾಣಿಕರ ಸಂಚಾರ ದಟ್ಟಣೆ ಉಂಟಾಗಲಿದೆ.

ಮೋದಿ ವೇಳಾಪಟ್ಟಿ

  • ಆಗಸ್ಟ್​ 10, ಬೆಳಗ್ಗೆ 7.50ಕ್ಕೆ ನವದೆಹಲಿಯಿಂದ ಹೊರಡಲಿರುವ ನರೇಂದ್ರ ಮೋದಿ.
  • ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್ ಎಎಲ್ ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್
  • ಬೆಳಗ್ಗೆ 10.35ಕ್ಕೆ ಹೆಲಿಕಾಫ್ಟರ್ ಮೂಲಕ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಟೇಕಾಫ್
  • ಬೆಳಗ್ಗೆ 10.55ಕ್ಕೆ ಮೇಖ್ರಿ ಸರ್ಕಲ್‌ನ ಹೆಚ್ ಕ್ಯೂಟಿಸಿ ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್
  • ಬೆಳಗ್ಗೆ 11 ಗಂಟೆಗೆ ಹೆಚ್ ಕ್ಯೂ ಟಿಸಿ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ಕೆಎಸ್ಆರ್ ರೈಲ್ವೇ ನಿಲ್ದಾಣಕ್ಕೆ ಪ್ರಯಾಣ.
  • ಮಾರ್ಗ ಮಧ್ಯೆ ಮೇಖ್ರಿ ವೃತ್ತ, ಚಾಲುಕ್ಯ ವೃತ್ತ ಮತ್ತು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರಧಾನಿಗೆ ಸ್ವಾಗತ.
  • ಬೆಳಗ್ಗೆ 11.10ಕ್ಕೆ ಕೆಎಸ್ಆರ್ ರೈಲ್ವೇ ನಿಲ್ದಾಣಕ್ಕೆ ಪ್ರಧಾನಿ ಆಗಮನ.
  • ಬೆಳಗ್ಗೆ 11.15ರಿಂದ 11.20ರವರೆಗೆ ಕೆಎಸ್ಆರ್ ರೈಲ್ವೇ ನಿಲ್ದಾಣದಲ್ಲಿ 3 ವಂದೇ ಮಾತರಂ ರೈಲುಗಳಿಗೆ ಚಾಲನೆ.
  • ಬೆಳಗ್ಗೆ 11.25ಕ್ಕೆ ಕೆಎಸ್ಆರ್ ರೈಲ್ವೇ ನಿಲ್ದಾಣದಿಂದ ಪ್ರಧಾನಿ ನಿರ್ಗಮನ.
  • ರಸ್ತೆ ಮಾರ್ಗವಾಗಿ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಮೋದಿ ಪ್ರಯಾಣ.
  • ಮಾರ್ಗ ಮಧ್ಯೆ ಸಂಗೊಳ್ಳಿ ರಾಯಣ್ಣ ವೃತ್ತ, ಸೌತ್ ಎಂಡ್ ವೃತ್ತ ಮತ್ತು ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಪ್ರಧಾನಿಗೆ ಬಿಜೆಪಿ ಕಾರ್ಯಕರ್ತರ ಸ್ವಾಗತ.
  • ಬೆಳಗ್ಗೆ 11.45ಕ್ಕೆ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಆಗಮನ.
  • ಬೆಳಗ್ಗೆ 11.45ರಿಂದ ಮಧ್ಯಾಹ್ನ 12.50ರವರೆಗೆ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ
  • ಮಧ್ಯಾಹ್ನ 12.50ಕ್ಕೆ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣಕ್ಕೆ ಆಗಮನ.
  • ಮಧ್ಯಾಹ್ನ 12.55ಕ್ಕೆ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಐಐಐಟಿ ಸಭಾಂಗಣಕ್ಕೆ ಆಗಮನ.
  • ಮಧ್ಯಾಹ್ನ 1 ಗಂಟೆಗೆ ಸಭಾ ಕಾರ್ಯಕ್ರಮದ ವೇದಿಕೆಗೆ ಪ್ರಧಾನಿ ಆಗಮನ.
  • ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಐಐಐಟಿ ಆಡಿಟೋರಿಯಂನಲ್ಲಿ ಸಭಾ ಕಾರ್ಯಕ್ರಮ.
  • ಮಧ್ಯಾಹ್ನ 1.25ಕ್ಕೆ ಆರ್ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಹಳದಿ ಮಾರ್ಗ ಉದ್ಘಾಟನೆ ಮತ್ತು ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ.
  • ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಪ್ರಧಾನಿ ಮೋದಿ ಭಾಷಣ.
  • ಮಧ್ಯಾಹ್ನ 2.05ಕ್ಕೆ ಕಾರ್ಯಕ್ರಮದ ವೇದಿಕೆಯಿಂದ ಪ್ರಧಾನಿ ನಿರ್ಗಮನ
  • ಮಧ್ಯಾಹ್ನ 2.15ಕ್ಕೆ ರಸ್ತೆ ಮಾರ್ಗವಾಗಿ ಹೆಲಿಪ್ಯಾಡ್ ಗೆ ಆಗಮನ
  • ಮಧ್ಯಾಹ್ನ 2.20ಕ್ಕೆ ಹೆಲಿಕಾಫ್ಟರ್ ಮೂಲಕ ಹೆಚ್ಎಎಲ್ ಏರ್ ಪೋರ್ಟ್ ಗೆ ನಿರ್ಗಮನ
  • ಮಧ್ಯಾಹ್ನ 2.40ಕ್ಕೆ ಹೆಚ್ ಎಎಲ್ ಏರ್ ಪೋರ್ಟ್ ‌ನಿಂದ ನವದೆಹಲಿಗೆ ಪ್ರಧಾನಿ ನರೇಂದ್ರ ಮೋದಿ ನಿರ್ಗಮನ.

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್